ನವದಹೆಲಿ:ದೇಶದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಎನ್‌ಡಿಎ ಕಡೆಯಿಂದ ಓಂ ಬಿರ್ಲಾ, ಪ್ರತಿಪಕ್ಷ ಮೈತ್ರಿಕೂಟದಿಂದ ಕೆ.ಸುರೇಶ್ ಅವರು ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್​ ನಾಯಕ ರಾಹುಲ್​ಗಾಂಧಿ ಪ್ರತಿಪಕ್ಷಗಳು ಸ್ಪೀಕರ್ ಹುದ್ದೆಯನ್ನು ಬೆಂಬಲಿಸಲು ಸಿದ್ಧವಾಗಿದೆ. ಆದರೆ ಪ್ರತಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ಸಿಗಬೇಕು ಎಂದು ಹೇಳಿದರು.
ಇದನ್ನು ಓದಿ:72 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಭಾಧ್ಯಕ್ಷ ಸ್ಥಾನಕ್ಕೆ ಚುನಾವಣೆ! ಕಾರಣ ಏನು ಗೊತ್ತಾ?
ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದ್ದು, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಒಮ್ಮತವನ್ನು ಕೋರಿದ್ದಾರೆ ಎಂದು ರಾಹುಲ್​ಗಾಂಧಿ ಹೇಳಿದರು. ಅದಕ್ಕೆ ಮಲ್ಲಿಕಾರ್ಜುನ್​ ಖರ್ಗೆ ಅವರು, ನಾವು ಸ್ಪೀಕರ್‌ ಸ್ಥಾನದ ಎನ್​ಡಿಎ ಅಭ್ಯರ್ಥಿಗೆ ಬೆಂಬಲ ನೀಡುತ್ತೇವೆ. ಆದರೆ ಪ್ರತಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ಸಿಗಬೇಕು ಎಂದು ಕೇಳಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕರೆ ಮಾಡುವುದಾಗಿ ಹೇಳಿದ ರಾಜನಾಥ್​​ ಸಿಂಗ್​ ಅವರು ಇನ್ನೂ ಪ್ರತಿಕ್ರಿಯಿಸಿಲ್ಲ ಎಂದು ಹೇಳಿದರು.
#WATCH| "We have said to Rajnath Singh that we will support their Speaker (candidate) but the convention is that the post of Deputy Speaker to be given to opposition…," says Congress MP Rahul Gandhipic.twitter.com/CaeRn8ztAR
ಪ್ರಧಾನಿ ಮೋದಿ ಅವರು ಪ್ರತಿಪಕ್ಷಗಳು ಸರ್ಕಾರಕ್ಕೆ ರಚನಾತ್ಮಕವಾಗಿ ಸಹಕರಿಸಬೇಕು. ವಿಪಕ್ಷಗಳು ಮತ್ತು ಸರ್ಕಾರ ಜತೆಯಾಗಿ ಕೆಲಸ‌ ಮಾಡಬೇಕು. ವಿಪಕ್ಷಗಳ ಬೆಂಬಲದೊಂದಿಗೆ ಕಲಾಪ ನಡೆಯಬೇಕು ಎಂದು ಹೇಳುತ್ತಾರೆ. ಆದರೆ ಮೋದಿ ಅವರ ಮಾತಿನಲ್ಲಿ ಯಾವುದೇ ಅರ್ಥವಿಲ್ಲ. ಸಂಸತ್ ಹೊರಗಡೆ ಒಂದು ರೀತಿಯ ಹೇಳಿಕೆ ನೀಡುತ್ತಾರೆ. ಕಲಾಪದ ಒಳಗೆ ಬೇರೆ ರೀತಿಯಲ್ಲಿ ನಡೆದುಕೊಳ್ಳುತ್ತಾರೆ ಎಂದು ರಾಹುಲ್​ಗಾಂಧಿ ವಾಗ್ದಾಳಿ ಮಾಡಿದರು.
ನಮ್ಮ ನಾಯಕರಿಗೆ ಕರೆ ಮಾಡುವುದಾಗಿ ರಾಜನಾಥ್​ ಸಿಂಗ್​ ಹೇಳಿದ್ದಾರೆ. ಉಪಸಭಾಪತಿ ಸ್ಥಾನವನ್ನು ಕೇಳಿದ ವಿಪಕ್ಷಗಳಿಗೆ ಇನ್ನು ಯಾವುದೇ ಕರೆ ಬಂದಿಲ್ಲ.ಸರ್ಕಾರದ ಉದ್ದೇಶಗಳು ಸ್ಪಷ್ಟವಾಗಿಲ್ಲ. ನಮ್ಮ ನಾಯಕನನ್ನು ಅವಮಾನಿಸಲಾಗುತ್ತಿದೆ ಎಂದರು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
