ಹೈದರಾಬಾದ್​​ :ಕರೊನಾ ಎರಡನೇ ಅಲೆಯಿಂದ ಆರ್ಥಿಕತೆ ತತ್ತರಿಸಿರುವ ಸಮಯದಲ್ಲಿ, ತೆಲಂಗಾಣ ಸರ್ಕಾರವು ತನ್ನ 32 ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಹೈಟೆಕ್​ ಕಾರು ಕೊಡಿಸಿ, ಬಂಪರ್ ಕೊಡುಗೆ ನೀಡಿದೆ. ರಾಜ್ಯವು ಸುಮಾರು 40,000 ಕೋಟಿ ರೂ.ಗಳ ಖೋತಾ ಬಜೆಟ್​ಅನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಸಿಎಂ ಕೆ.ಚಂದ್ರಶೇಖರ್​ ರಾವ್ ಅವರ ಈ ‘ದುಂದುವೆಚ್ಚ’ದ ಬಗ್ಗೆ ವಿರೋಧ ಪಕ್ಷಗಳು ಗರಂ ಆಗಿವೆ.
ತಲಾ 25 ರಿಂದ 30 ಲಕ್ಷ ರೂಪಾಯಿ ಮೌಲ್ಯದ 32 ಕಿಯಾ ಕಾರ್ನಿವಲ್​ ಕಾರುಗಳನ್ನು ತೆಲಂಗಾಣ ಸರ್ಕಾರ ಖರೀದಿಸಿದ್ದು, ಭಾನುವಾರ ಹೈದರಾಬಾದ್​ನ ಸಿಎಂ ನಿವಾಸದಲ್ಲಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ, ಅಧಿಕಾರಶಾಹಿಗಳನ್ನು ಓಲೈಸಲು, ಸರ್ಕಾರ ಜನರ ದುಡ್ಡು ಹಾಳು ಮಾಡಿದೆ ಎಂದಿದೆ.
ಇದನ್ನೂ ಓದಿ:ಉದ್ದ ಕೂದಲು ಬಿಟ್ಟಿದ್ದಕ್ಕೇ ಅರೆಸ್ಟ್! ಪಾಕಿಸ್ತಾನದಲ್ಲಿ ರಂಗಭೂಮಿ ಕಲಾವಿದನಿಗೆ ಕೊಟ್ಟ ಶಿಕ್ಷೆ ಹೇಗಿದೆ ನೋಡಿ…
“32 ಅಲ್ಟ್ರಾ ಲಕ್ಷುರಿ ಕಾರುಗಳನ್ನು ಖರೀದಿಸಲು 11 ಕೋಟಿ ರೂ.ಗಳನ್ನು ಖರ್ಚು ಮಾಡಿರುವುದನ್ನು ಸಿಎಂ ರಾವ್​ ಹೇಗೆ ಸಮರ್ಥಿಸಿಕೊಳ್ಳುತ್ತಾರೆ ?” ಎಂದು ಬಿಜೆಪಿ ವಕ್ತಾರ ಕೃಷ್ಣ ಸಾಗರ್​ ರಾವ್ ಪ್ರಶ್ನಿಸಿದ್ದಾರೆ. “ಅಪಾಯಕಾರಿ ಸಾಂಕ್ರಾಮಿಕದ ನಡುವೆ ಬಡಜನರು ಕರೊನಾ ಚಿಕಿತ್ಸೆಗೆ ಆಸ್ಪತ್ರೆಗಳಿಗೆ ಹಣ ನೀಡಿ ಸಾಲದ ಹೊರೆ ಅನುಭವಿಸುತ್ತಿದ್ದರೆ, ಇತ್ತ ಸಾರ್ವಜನಿಕ ಹಣದ ಭಾರೀ ದುಂದುವೆಚ್ಚ ನಡೆದಿದೆ. ಸರ್ಕಾರ ಈ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು” ಎಂದಿದ್ದಾರೆ.
ಮತ್ತೊಂದೆಡೆ, ಕಾಂಗ್ರೆಸ್​ ಕೂಡ ತೆಲಂಗಾಣ ರಾಷ್ಟ್ರ ಸಮಿತಿ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿದೆ. “ಅದಾಗಲೇ ತೆಲಂಗಾಣವನ್ನು 40,000 ಕೋಟಿ ರೂ. ಸಾಲದ ಜಾಲಕ್ಕೆ ಕೆಸಿಆರ್ ಸರ್ಕಾರ ಸಿಲುಕಿಸಿದೆ. ಉತ್ತಮ ಸ್ಥಿತಿಯಲ್ಲಿದ್ದ ಸರ್ಕಾರಿ ಕಾರುಗಳನ್ನು ಅಧಿಕಾರಿಗಳು ಹೊಂದಿದ್ದರು​. ಕರೊನಾ ಸಮಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್​ಗಳ ಸಂಖ್ಯೆ ಹೆಚ್ಚಿಸುವ ಅಥವಾ ಸಾರ್ವಜನಿಕ ಸಾರಿಗೆಗೆ ಬಸ್​ಗಳನ್ನು ಖರೀದಿಸುವ ಕೆಲಸದಲ್ಲಿ ತೊಡಗಬೇಕಾದ ಸರ್ಕಾರ ಈ ರೀತಿ ಅಧಿಕಾರಿಗಳಿಗೆ ಕಾರು ಕೊಡಿಸುತ್ತಿದೆ” ಎಂದು ಕಾಂಗ್ರೆಸ್​ ನಾಯಕ ಡಿ.ಶ್ರವಣ್​ ಕುಮಾರ್​ ಟೀಕಿಸಿದ್ದಾರೆ.
ಇದನ್ನೂ ಓದಿ:ಇಂಧನ ಬೆಲೆ ಏರಿಕೆ : ಜನಹಿತ ಯೋಜನೆಗಳಿಗಾಗಿ ಹಣ ಉಳಿಸುತ್ತಿದ್ದೇವೆ ಎಂದ ತೈಲ ಸಚಿವ
ಕಾರು ಖರೀದಿಯನ್ನು ಸಮರ್ಥಿಸಿಕೊಂಡಿರುವ ಸಿಎಂ, ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಇಡೀ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ತಮ್ಮ ಕರ್ತವ್ಯ ನಿರ್ವಹಿಸಲು ಇಂಥ ವಾಹನಗಳ ಅವಶ್ಯಕತೆ ಇದೆ ಎಂದಿದ್ದಾರೆ.(ಏಜೆನ್ಸೀಸ್)
ಸಿದ್ದರಾಮಯ್ಯ ಸಿಎಂ ಆದ್ರೂ ಉಚಿತ ಬಿತ್ತನೆ ಬೀಜ, ಗೊಬ್ಬರ ಕೊಡಲು ಸಾಧ್ಯವಿಲ್ಲ : ಕೃಷಿ ಸಚಿವ ಬಿ.ಸಿ.ಪಾಟೀಲ್ ಟಾಂಗ್

70,421 ಹೊಸ ಕರೊನಾ ಪ್ರಕರಣ; 24 ಗಂಟೆಗಳಲ್ಲಿ 3,921 ಸಾವು

ಆದಿಶಂಕರಾಚಾರ್ಯರ 12 ಅಡಿ ಪ್ರತಿಮೆ; ಕೆತ್ತನೆ ಮುಗಿಸಿದ ಮೈಸೂರು ಶಿಲ್ಪಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 19 =
Remember me
