ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೇರಿ 9 ಮಂದಿ ಗುರುವಾರ ರಾಜ್ಯ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾದರು.
ಸಿಎಂ ಉದ್ಧವ್​ ಠಾಕ್ರೆ ವಿಧಾನ ಪರಿಷತ್​ಗೆ ಆಯ್ಕೆಯಾಗುವುದರೊಂದಿಗೆ ಅವರ ಮುಖ್ಯಮಂತ್ರಿ ಹುದ್ದೆ ಗಟ್ಟಿಯಾಗಿದೆ.
ಆಯ್ಕೆಯಾದವರು: ವಿಧಾನಪರಿಷತ್​ ಉಪ ಸಭಾಧ್ಯಕ್ಷೆ ನೀಲಂ ಗೋರೆ, (ಶಿವಸೇನಾ) ಬಿಜೆಪಿಯ ರಂಜಿತ್ಸಿಂಗ್​ ಮೋಹಿತೆ ಪಾಟೀಲ್​, ಗೋಪಿಚಂದ್‌ ಪಡಲ್ಕರ್‌, ಪ್ರವೀಣ್‌ ದಾಟೆ ಮತ್ತು ರಮೇಶ್‌ ಕರಾಡ್, ಎನ್​ಸಿಪಿಯ ಅಮೋಲ್​ ಮಿಟ್ಕರಿ ಹಾಗೂ ಕಾಂಗ್ರೆಸ್​ನ ರಾಜೇಶ್​ ರಾಥೋಡ್​ ಅವರು ಅವಿರೋಧವಾಗಿ ಆಯ್ಕೆಯಾದರು.
ಇದನ್ನೂ ಓದಿVIDEO| ಮರಿ ಆನೆ ಸಫಾರಿ ವಾಹನದಲ್ಲಿರುವವರನ್ನು ಹೇಗೆ ಬೆದರಿಸುತ್ತದೆ ನೋಡಿ !
ಉದ್ಧವ್​ ಠಾಕ್ರೆ ಅವರು ಮುಖ್ಯಮಂತ್ರಿಯಾಗಿ ನೇಮಕಗೊಂಡ ನಂತರ 6 ತಿಂಗಳೊಳಗೆ ಶಾಸಕರಾಗಬೇಕಿತ್ತು. ಸಂವಿಧಾನದ ಪ್ರಕಾರ ಅವರು ಮೇ.27ರೊಳಗೆ ಶಾಸಕರಾಗಿ ಆಯ್ಕೆಯಾಬೇಕಿತ್ತು. ಇಲ್ಲದಿದ್ದರೆ ಅವರು ಮುಖ್ಯಮಂತ್ರಿ ಪಟ್ಟ ಕಳೆದುಕೊಳ್ಳಬೇಕಿತ್ತು.
ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರು ಕಳೆದ ತಿಂಗಳು ರಾಜ್ಯಪಾಲರಿಗೆ ಪತ್ರ ಬರೆದು ಶೀಘ್ರವೇ ಖಾಲಿಯಾಗಿರುವ ವಿಧಾನ ಪರಿಷತ್​ ಸ್ಥಾನಗಳಿಗೆ ಚುನಾವಣೆ ನಡೆಸುವಂತೆ ಮನವಿ ಮಾಡಿದ್ದರು. ಆದರೆ ರಾಜ್ಯಪಾಲರು ಕರೊನಾ ವೈರಸ್​ ಸೋಂಕು ಹಾವಳಿ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಒಪ್ಪಿರಲಿಲ್ಲ. ಇದರಿಂದ ಪಟ್ಟ ಕಳೆದುಕೊಳ್ಳುವ ಭೀತಿಯಲ್ಲಿದ್ದ ಉದ್ಧವ್​ ಠಾಕ್ರೆ ಪ್ರಧಾನಿ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಶೀಘ್ರವೇ ಚುನಾವಣೆ ನಡೆಸುವಂತೆ ಕೋರಿದ್ದರು. (ಏಜೆನ್ಸೀಸ್​)
ಶಾಲೆಗಳಲ್ಲಿ ಶುರುವಾಗಲಿದೆ ಶಿಫ್ಟ್​, ಎರಡು ದಿನಕ್ಕೊಮ್ಮೆ ಕ್ಲಾಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
