ಮುಂಬೈ:ಮುಂಬೈನಲ್ಲಿರುವ ಬಾಲಿವುಡ್​ ನಟಿ ಕಂಗನಾ ರಣಾವುತ್​ ಕಚೇರಿ ನೆಲಸಮ ಮಾಡುತ್ತಿರುವ ನಡುವೆಯೇ ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವ ಅನಿಲ್​ ದೇಶ್​ಮುಖ್​ ಅವರಿಗೆ ಬೆದರಿಕೆ ಕರೆ ಬರುತ್ತಿರುವುದಾಗಿ ಬುಧವಾರ ವರದಿಯಾಗಿದೆ.
ಹಿಮಾಚಲ ಪ್ರದೇಶ ಹಾಗೂ ಬೇರೆ ಸ್ಥಳ ಮತ್ತು ಬೇರೆ ಬೇರೆ ನಂಬರ್​ನಿಂದ ಬೆದರಿಕೆ ಕರೆ ಬರುತ್ತಿದೆ. ಮಂಗಳವಾರ ಬೆಳಗ್ಗೆ 6 ಗಂಟೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದು, ಕಂಗನಾ ವಿಚಾರದಲ್ಲಿ ಮೂಗು ತೂರಿಸದಂತೆ ಎಚ್ಚರಿಕೆ ನೀಡಿದ್ದಾರೆನ್ನಲಾಗಿದೆ. ಮಂಗಳವಾರದಿಂದ ಇಲ್ಲಿಯವರೆಗೂ ಒಟ್ಟು 5 ಬೆದರಿಕೆ ಕರೆಗಳನ್ನು ಸಚಿವರು ಸ್ವೀಕರಿಸಿದ್ದು, ಬುಧವಾರ ಬೆಳಗ್ಗೆ 6 ಗಂಟೆ ಸಮಯದಲ್ಲೂ ಎರಡು ಬೆದರಿಕೆ ಕರೆಗಳು ಬಂದಿರುವುದಾಗಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಕಂಗನಾ ಕಚೇರಿ ನೆಲಸಮ ವಿರುದ್ಧ ನೆಟ್ಟಿಗರ ಆಕ್ರೋಶ: ಟ್ವಿಟರ್​ನಲ್ಲಿ ಟ್ರೆಂಡ್​ ಆದ ಹ್ಯಾಶ್​ಟ್ಯಾಗ್​ಗಳಿವು…​
ಕರೆ ಮಾಡಿದವರಲ್ಲಿ ಓರ್ವ ತನ್ನನ್ನು ತಾನೂ ಮೃತ್ಯುಂಜಯ್​ ಗಾರ್ಗ್​ ಎಂದು ಪರಿಚಯಿಸಿಕೊಂಡಿದ್ದಾನೆ. ಕಂಗನಾ ವಿಚಾರದಲ್ಲಿ ಮೂಗು ತೀರಿಸದಂತೆ ಬೆದರಿಕೆ ಒಡ್ಡಿದ್ದಾರೆನ್ನಲಾಗಿದೆ.
ಇತ್ತೀಚೆಗೆ ಮಾತನಾಡಿದ್ದ ಕಂಗನಾ ಮೂವೀ ಮಾಫಿಯಾಗಿಂತ ಮುಂಬೈ ಪೊಲೀಸರನ್ನು ಕಂಡರೆ ಭಯವಾಗುತ್ತದೆ. ಹೀಗಾಗಿ ತನ್ನ ತವರು ರಾಜ್ಯ ಹಿಮಾಚಲ ಪ್ರದೇಶ ಅಥವಾ ಕೇಂದ್ರದಿಂದ ಭದ್ರತೆಗೆ ಆದ್ಯತೆ ನೀಡಿ ಎಂದಿದ್ದರು. ಇದರ ಬೆನ್ನಲ್ಲೇ ಮಾತನಾಡಿದ್ದ ದೇಶ್​ಮುಖ್​ ಮುಂಬೈನಲ್ಲಿ ರಕ್ಷಣೆ ಇಲ್ಲ ಎನ್ನುವವರು ರಾಜ್ಯದಲ್ಲಿ ಜೀವಿಸಲು ಯಾವುದೇ ಹಕ್ಕಿಲ್ಲ ಎಂದು ಕಿಡಿಕಾರಿದ್ದರು. ಅಲ್ಲದೆ, ಕೇಂದ್ರ ಸರ್ಕಾರ ಸೋಮವಾರ ಕಂಗನಾರಿಗೆ ವೈ-ಪ್ಲಸ್ ಭದ್ರತೆ ನೀಡಿದ್ದರ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದರು.​(ಏಜೆನ್ಸೀಸ್​)
ಕಂಗನಾ ಕಚೇರಿ ನೆಲಸಮ: ಕಾರ್ಯಾಚರಣೆಗಿಳಿದ ಜೆಸಿಬಿ..!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two + 13 =
Remember me
