ಮುಂಬೈ:ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಬೇಡಿಕೆ ಭಾರೀ ಸ್ವರೂಪ ಪಡೆದುಕೊಂಡಿದೆ. ಈ ಬೇಡಿಕೆಗೆ ಮರಾಠ ಸಮುದಾಯದ ಜನರು ಹಿಂಸಾತ್ಮಕ ಧೋರಣೆ ಅನುಸರಿಸುತ್ತಿದ್ದಾರೆ. ಇದೀಗ ಮಹಾರಾಷ್ಟ್ರ ಸರ್ಕಾರದ ಸಚಿವ ಮತ್ತು ಅಜಿತ್ ಪವಾರ್ ಗುಂಪಿನ ನಾಯಕ ಹಸನ್ ಮುಶ್ರಿಫ್ ಅವರ ಕಾರನ್ನು ಧ್ವಂಸಗೊಳಿಸಲಾಗಿದೆ. ಮುಂಬೈನ ಕೊಲಾಬಾದಲ್ಲಿರುವ ಶಾಸಕರ ನಿವಾಸದ ಬಳಿ ಇಬ್ಬರು ಅಪರಿಚಿತರು ಈ ದಾಳಿ ನಡೆಸಿದ್ದಾರೆ.
ಆರೋಪಿಗಳು ವಶಕ್ಕೆಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮರಾಠಾ ಸಮುದಾಯದ ಜನರು ಮರಾಠಾ ಮೀಸಲಾತಿ ವಿಚಾರವಾಗಿ ಮುಖಂಡರನ್ನೇ ಟಾರ್ಗೆಟ್ ಮಾಡುತ್ತಿರುವುದು ಗಮನಾರ್ಹ. ಹೀಗಾಗಿ ಇದೀಗ ಮುಖ್ಯಮಂತ್ರಿ ಸೇರಿದಂತೆ ಮುಖಂಡರು ಹಾಗೂ ಸಚಿವರ ನಿವಾಸಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಮನೋಜ್​​​ಗೆ ಮನವಿ ಮಾಡಿದ ರಾಜ್ ಠಾಕ್ರೆಮಂಗಳವಾರ, ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ, ಮರಾಠ ಸಮುದಾಯಕ್ಕೆ ಮೀಸಲಾತಿಗಾಗಿ ಒತ್ತಾಯಿಸಿ ಕೈಗೊಂಡಿರುವ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಹೋರಾಟಗಾರ ಮನೋಜ್ ಜಾರಂಜ್​​​ಗೆ ಅವರಿಗೆ ಒತ್ತಾಯಿಸಿದ್ದರು.
ಮನೋಜ್ ಒತ್ತಾಯ
ಮೀಸಲಾತಿ ವಿಚಾರವಾಗಿ ಚರ್ಚಿಸಲು ಮಹಾರಾಷ್ಟ್ರ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಎಂದೂ ಮನೋಜ್ ಒತ್ತಾಯಿಸಿದ್ದರು.ಜಾರಂಜ್​​​​​ಗೆ ರಾಜ್ ಠಾಕ್ರೆಗೆ ಬರೆದ ಪತ್ರದಲ್ಲಿ ಮೀಸಲಾತಿಯ ಲಾಭವನ್ನು ಪಡೆಯಲಾಗದವರು ಅದನ್ನು ಪಡೆಯಬೇಕು ಮತ್ತು ಆರ್ಥಿಕ ಸ್ಥಿತಿಯ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂದು ಹೇಳಿದ್ದಾರೆ. ರಾಜ್ ಠಾಕ್ರೆ ಈ ವಿಷಯದ ಬಗ್ಗೆ ಚರ್ಚಿಸಲು ಸರ್ಕಾರ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕು. ವಿಭಿನ್ನ ಅಭಿಪ್ರಾಯಗಳು ಯಾವುವು ಮತ್ತು ಯಾವ ಕಾನೂನಿನ ಅಡಿಯಲ್ಲಿ ಸರ್ಕಾರವು ಮೀಸಲಾತಿ ನೀಡಲು ಯೋಜಿಸುತ್ತಿದೆ ಎಂಬುದನ್ನು ಎಲ್ಲರಿಗೂ ತಿಳಿಸಿ ಎಂದಿದ್ದಾರೆ.
ಇಂದಿನಿಂದ ಚಳಿ ಹೆಚ್ಚಾಗಲಿದೆ…ದೆಹಲಿ-ಎನ್‌ಸಿಆರ್​​​​​ನಲ್ಲಿ ಈ ವಾರ ಮಂಜು, ದೇಶದ ಹವಾಮಾನ ಅಪ್ ಡೇಟ್ಸ್ ಇಲ್ಲಿದೆ…

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:two + fourteen =
Remember me
