ಗಾಜಿಯಾಬಾದ್:ದೆಹಲಿ-ಉತ್ತರಪ್ರದೇಶದ ಗಡಿಯಲ್ಲಿರುವ ಪ್ರತಿಭಟನೆ ನಡೆಸುತ್ತಿರುವ ರೈತ ಚಳುವಳಿಗಾರರನ್ನು ಮಹಾತ್ಮ ಗಾಂಧಿಯವರ ಮೊಮ್ಮಗಳಾದ 84 ವರ್ಷದ ತಾರಾ ಗಾಂಧಿ ಭಟ್ಟಾಚಾರ್ಜಿ ಭೇಟಿ ಮಾಡಿದ್ದಾರೆ. ನ್ಯಾಷನಲ್ ಗಾಂಧಿ ಮೂಸಿಯಂನ ಅಧ್ಯಕ್ಷರೂ ಆದ ಭಟ್ಟಾಚಾರ್ಜಿ ರೈತರಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕೆಂದು ಕಿವಿಮಾತು ಹೇಳಿದ್ದಾರೆ. ಜೊತೆಗೆ ಸರ್ಕಾರಕ್ಕೆ ರೈತ ಸಮುದಾಯವನ್ನು ‘ನೋಡಿಕೊಳ್ಳುವಂತೆ’ ಆಗ್ರಹಿಸಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್​(ಬಿಕೆಯು)ನ ಪತ್ರಿಕಾ ಹೇಳಿಕೆ ತಿಳಿಸಿದೆ.
ಗಾಜಿಪುರದ ಪ್ರತಿಭಟನಾ ಸ್ಥಳಕ್ಕೆ ಶನಿವಾರ (ಫೆಬ್ರವರಿ 13) ಭೇಟಿ ನೀಡಿದ ಭಟ್ಟಾಚಾರ್ಜಿ, ರೈತರಿಗಾಗಿ ಪ್ರಾರ್ಥನೆ ಮಾಡಲು ಬಂದಿರುವುದಾಗಿ ಹೇಳಿದ್ದಾರೆ. “ನಮ್ಮ ಜೀವನ ಪರ್ಯಂತ ನಮಗೆ ಊಟ ನೀಡಿರುವ ರೈತರಿಗಾಗಿ ಇಲ್ಲಿಗೆ ಬಂದಿದ್ದೀವಿ… ರೈತರ ಹಿತದಲ್ಲಿ ದೇಶದ ಮತ್ತು ನಮ್ಮೆಲ್ಲರ ಹಿತವಿದೆ” ಎಂದ ಅವರು, ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆಸುತ್ತಿರುವ ಚಳುವಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬಿಕೆಯು ಹೇಳಿದೆ.
ಇದನ್ನೂ ಓದಿ:ಪ್ರೇಮಿಗಳ ದಿನದಂದು ಸತಿಪತಿಗಳಾದ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ತಾರಾ ಜೋಡಿ
ಭಟ್ಟಾಚಾರ್ಜಿ ಅವರೊಂದಿಗೆ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ರಾಮಚಂದ್ರ ರಾಹಿ, ನಿರ್ದೇಶಕ ಸಂಜಯ ಸಿಂಘಾ, ಆಲ್ ಇಂಡಿಯಾ ಸರ್ವ್ ಸೇವಾ ಸಂಘ ಮ್ಯಾನೇಜಿಂಗ್ ಟ್ರಸ್ಟಿ ಅಶೋಕ್ ಶರಣ್ ಮತ್ತು ನ್ಯಾಷನಲ್ ಗಾಂಧಿ ಮ್ಯೂಸಿಯಂನ ನಿರ್ದೇಶಕ ಎ.ಅಣ್ಣಾಮಲೈ ಅವರೂ ಭೇಟಿ ನೀಡಿದ್ದಾರೆ ಎನ್ನಲಾಗಿದೆ.ದೆಹಲಿ ಗಡಿಪ್ರದೇಶಗಳಾದ ಸಿಂಗು, ಟಿಕ್ರಿ ಮತ್ತು ಗಾಜಿಪುರದಲ್ಲಿ ಕಳೆದ ನವೆಂಬರ್ ತಿಂಗಳಿಂದ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಅವರೊಂದಿಗೆ ಈವರೆಗೆ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದ್ದು, ಸಮಸ್ಯೆ ಇನ್ನೂ ಬಗೆಹರಿದಿಲ್ಲ.(ಏಜೆನ್ಸೀಸ್)
“ಎಲ್ಲೆಂದರಲ್ಲಿ ಯಾವಾಗ ಬೇಕಿದ್ದರೂ ಪ್ರತಿಭಟನೆ ಮಾಡಲು ಸಾಧ್ಯವಿಲ್ಲ” : ಸುಪ್ರೀಂ ಕೋರ್ಟ್
ಪ್ರೇಮಿಗಳ ದಿನದಂದು ಸತಿಪತಿಗಳಾದ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ತಾರಾ ಜೋಡಿ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 12 =
Remember me
