ಮಹಿಳೆಯರ ಶೌಚಾಲಯದಲ್ಲಿ ಟೆಕ್ಕಿಯೊಬ್ಬ ಬುರ್ಖಾ ಧರಿಸಿ ಶೌಚಾಲಯಕ್ಕೆ ಪ್ರವೇಶಿಸಿರೋದು ಮಾತ್ರವಲ್ಲ ಅಲ್ಲಿ ವಿಡಿಯೋ ರೆಕಾರ್ಡ್​​ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೇರಳದ ಕೊಚ್ಚಿಯಲ್ಲಿರುವ ಲುಲುಮಾಲ್​​ನಲ್ಲಿನ ಮಹಿಳೆಯರ ಶೌಚಾಲಯಕ್ಕೆ ಬುರ್ಖಾ ಧರಿಸಿ ಶೌಚಾಲಯಕ್ಕೆ ಪ್ರವೇಸಿ ಕೃತ್ಯ ಎಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೊಚ್ಚಿಯಲ್ಲಿರುವ ಲುಲುಮಾಲ್​​ನಲ್ಲಿ ಘಟನೆ ನಡೆದಿದ್ದು, ಐಟಿ ಉದ್ಯೋಗಿ ಅಭಿಮನ್ಯು(23) ಈ ಕೃತ್ಯ ಎಸಗಿದ್ದಾನೆ. ಆತ ಬಿಟೆಕ್ ಪದವೀಧರನಾಗಿರುವ ಆರೋಪಿ ಐಟಿ ಕಂಪನಿಯ ಉದ್ಯೋಗಿಯಾಗಿದ್ದಾನೆ. ಮಹಿಳೆಯ ಸೋಗಿನಲ್ಲಿ ಬುರ್ಖಾ ಧರಿಸಿ ಲುಲುಮಾಲ್​ಗೆ ಬಂದಿದ್ದ, ಈ ವೇಳೆ ಮಹಿಳೆಯರ ಶೌಚಾಯಲಕ್ಕೆ ತೆರಳಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ.
ಶೌಚಾಲಯದಲ್ಲಿ ಮೊಬೈಲ್ ಇಟ್ಟು ಹೊರಬಂದು ನಿಂತಿದ್ದ ವ್ಯಕ್ತಿಯನ್ನ ಕಂಡು, ಸಿಬ್ಬಂದಿಗೆ ಅನುಮಾನ ಬಂದು ಮಾಲ್​ನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೊಚ್ಚಿ ಪೊಲೀಸರು ಅಭಿಮನ್ಯುವನ್ನು ಬಂಧಿಸಿದ್ದಾರೆ.
ಪ್ರಕರಣ ದಾಖಲಾಗುತ್ತಿದ್ದಂತೆಯೇ ಪೊಲೀಸರು ತನಿಖೆ ನಡೆಸಿದ ಪೊಲೀಸರ ಪ್ರಕಾರ, ಕೊಚ್ಚಿಯ ಪ್ರಸಿದ್ಧ ಮಾಲ್‌ನಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಕೊಚ್ಚಿಯಲ್ಲಿ ಕೆಲಸ ಮಾಡುವ ರೊಬೊಟಿಕ್ಸ್ ಎಂಜಿನಿಯರಿಂಗ್ ಪದವೀಧರ ಅಭಿಮನ್ಯು ಮಹಿಳೆಯಂತೆ ಪೋಸ್ ನೀಡಲು ಬುರ್ಖಾ (ಮುಸುಕು) ಧರಿಸಿ ಮಹಿಳೆಯರ ವಾಶ್‌ರೂಮ್‌ನಲ್ಲಿ ವೀಡಿಯೊಗಳನ್ನು ಚಿತ್ರೀಕರಿಸುವಾಗ ಸಿಕ್ಕಿಬಿದ್ದಿದ್ದಾನೆ. ಸ್ಥಳೀಯ ನ್ಯಾಯಾಲಯದಿಂದ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Kerala techie arrested for planting camera in Kochi mall's women's bathroomPolice arrested Abhimanyu (23) for trying to place a camera in the washroom of Lulu Mall, Kochi, KeralaThe mobile camera was placed inside the washroom after wearing a Burqa.pic.twitter.com/oJ39qEGfzC
ಈ ವ್ಯಕ್ತಿ ಈ ಹಿಂದೆಯೂ ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ ಅದನ್ನು ತನಿಖೆ ಮಾಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸದ್ಯ ಪೊಲೀಸರು ಅಭಿಮನ್ಯು ಅವರ ಫೋನ್ ಮತ್ತು ಅಪರಾಧ ಮಾಡಲು ಬಳಸಿದ ಬುರ್ಖಾವನ್ನು ವಶಪಡಿಸಿಕೊಂಡಿದ್ದಾರೆ.
ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ರೆಕಾರ್ಡ್ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ವಿದ್ಯಾರ್ಥಿನಿಯರು ತಮಾಷೆಗೆಂದು ವಿಡಿಯೋ ಮಾಡಿ ನಂತರ ಡಿಲೀಟ್ ಮಾಡಿದ್ದಾರೆ ಎಂದು ಹೇಳಲಾಗಿತ್ತು.
ಇದಲ್ಲದೆ ಕರ್ನಾಟಕದಲ್ಲಿ ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣ ಎಂದು ಘೋಷಿಸಿದ ಬಳಿಕ ವ್ಯಕ್ತಿಯೊಬ್ಬರು ಬುರ್ಖಾ ಧರಿಸಿ ಬಸ್​ನಲ್ಲಿ ಪ್ರಯಾಣಿಸಿ ಸಿಕ್ಕಿಬಿದ್ದಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 16 =
Remember me
