ತಿರುವನಂತಪುರಂ:ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಪರವಾಗಿ ತೀರ್ಪು ನೀಡಲಿಲ್ಲ ಎಂದು ಸಿಟ್ಟಿಗೆದ್ದ ವ್ಯಕ್ತಿಯೋರ್ವ ನ್ಯಾಯಾಧೀಶರ ಕಾರನ್ನು ಹೊಡೆದು ಹಾಕಿರುವ ಘಟನೆ ಕೇರಳದ ತಿರುವಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದಿದೆ.
ಸದ್ಯ ವೈರಲ್​ ಆಗಿರುವ ವಿಡಿಯೋದಲ್ಲಿ 55 ವರ್ಷದ ವ್ಯಕ್ತಿ ನ್ಯಾಯಾಲಯದಿಂದ ಹೊರ ಬಂದ ಬಳಿಕ ಜಡ್ಜ್​ ಕಾರಿನ ಗ್ಲ್ಯಾಸ್​ಅನ್ನು ಪುಡಿ ಮಾಡಿ ತನ್ನ ಆಕ್ರೋಶವನ್ನು ಹೊರಹಾಕುತ್ತಿರುವುದನ್ನು ನೋಡಬಹುದಾಗಿದೆ.
പുള്ളിയെ അറിയാമോ ?https://t.co/ZTw3K9kJKT
ಇದನ್ನೂ ಓದಿ:ಚಾಕ್ಲೆಟ್ ಕೊಡಿಸ್ತೀನಿ ಬಾ…ಎಂದು 11 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಘಟನೆಕಯ ಕುರಿತು ಪ್ರತಿಕ್ರಿಯಿಸಿರುವ ತಿರುವಲ್ಲಾ ಪೊಲೀಸ್​ ಠಾಣೆಯ ಅಧಿಕಾರಿಯೊಬ್ಬರು ನ್ಯಾಯಾಲಯದ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಆರೋಪಿಯನ್ನು ವಶಕ್ಕೆ ಪಡೆದು FIR ದಾಖಲಿಸಲಾಗಿದೆ. ತನ್ನ ಪತ್ನಿಯೊಂದಿಗೆ ಪ್ರತಿನಿತ್ಯ ಜಗಳವಾಡುತ್ತಿದ್ದ ಆರೋಪಿಯೂ ತನಗೆ ನ್ಯಾಯ ಸಿಗುತ್ತಿಲ್ಲ ವಿಚ್ಛೇದನ ನೀಡುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದ.
ಆದರೆ, ಆತನ ವಿರುದ್ಧ ಪತ್ನಿಯೇ ಮೊದಲಿಗೆ ಡಿವೊರ್ಸ್​ ಅರ್ಜಿ ಹಾಕಿದ್ದಳು. ತನ್ನ ಪತ್ನಿ ಪರವಾಗಿ ವಾದಿಸುತ್ತಿರುವ ವಕೀಲರು ಹಾಗೂ ನ್ಯಾಯಾಧೀಶರು ನ್ಯಾಯಾಲಯದಲ್ಲಿ ತನಗೆ ಮಾತನಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದು ಆರೋಪಿ ಜಡ್ಜ್​ ಕಾರಿನ ಮೇಲೆ ದಾಳಿ ಮಾಡಿದ್ಧಾನೆ. 2017ರಲ್ಲಿ ಆರೋಪಿಯೂ ತನ್ನ ಪತ್ನಿ ಕಿರುಕುಳ ನೀಡುತ್ತಿದ್ಧಾಳೆ ತನಗೆ ವಿಚ್ಛೇದನ ಕೊಡಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದ ಎಂದು ತಿರುವಲ್ಲಾ ಪೊಲೀಸ್​ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + ten =
Remember me
