ಇಂದೋರ್​:ನಾಲ್ಕು ವರ್ಷದ ಮರಿಮೊಮ್ಮಗನನ್ನು ಮುತ್ತಾತ ಹೊಡೆದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ.
ಏಪ್ರಿಲ್​ 7ರಂದು ಘಟನೆ ನಡೆದಿದ್ದು ಪ್ರಕರಣ ಸಂಬಂಧ ಶೋಭರಾಮ್​ ಚೌಧರಿ(80)ಯನ್ನು ಬಂಧಿಸಲಾಗಿದ್ದು ಮೃತ ಬಾಲಕನನ್ನು ಶ್ರೇಯಾಂಶ್​(4) ಎಂದು ಗುರುತಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹಿತುಕಾ ವಸಲ್​ ಕೌಟುಂಬಿಕ ಕಲಹದ ಕಾರಣ ಶ್ರೇಯಾಂಶ್​ ಹಾಗೂ ಅವರ ತಾಯಿ ನೀತು ಪ್ರತ್ಯೇಕವಾಗಿ ಅವರ ತವರು ಮನೆಯಲ್ಲಿ ನೆಲೆಸಿದ್ದರು.
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ನೀತು ಹಾಗೂ ಅವರ ಪುತ್ರನನ್ನು ಹೊರೆ ಎಂದು ಪರಿಗಣಿಸಿ ತವರು ಮನೆಯಲ್ಲಿ ಮಾನಸಿಕ ಕಿರುಕುಳ ಕೊಡಲಾಗುತ್ತಿತ್ತು. ಈ ವೇಳೆ ಆರೋಪಿ ಶೋಭರಾಮ್ ಬಳಿ ಆಕೆಯ ಪೋಷಕರು ಮಗು ಬೆಳೆದು ದೊಡ್ಡವನಾದ ಮೇಲೆ ಆಸ್ತಿಯಲ್ಲಿ ಪಾಲು ಕೇಳಬಹುದು ಎಂದು ಹೇಳಿದ್ಧಾರೆ.
ಈ ವೇಳೆ ಆರೋಪಿಯೂ ಮಗುವಿನಿಂದ ಸಮಸ್ಯೆಯಾಗುತ್ತಿದೆ ಎಂದು ಭಾವಿಸಿ ಆತನನ್ನು ಮುಗಿಸಿದರೆ ಇದಕ್ಕೊಂದು ಅಂತ್ಯ ಹಾಡಬಹುದು ಎಂದು ಪ್ಲ್ಯಾನ್​ ಹಾಕಿದ್ಧಾನೆ. ಪತ್ರಿ ರಾತ್ರಿ ಮರಿಮೊಮ್ಮಗ ತನ್ನ ಜೊತೆ ಮಲಗುತ್ತಿದ್ದ ಅವಕಾಶವನ್ನು ಬಳಸಿಕೊಂಡ ಆರೋಪಿ ಉಸಿರುಗಟ್ಟಿಸಿ ಹತ್ಯೆಗೈದಿದ್ಧಾನೆ.
ಕುಟುಂಬಸ್ಥರು ನೀಡಿರುವ ಹೇಳಿಕೆಯನ್ನು ಆಧರಿಸಿ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹಿತುಕಾ ವಸಲ್ ಮಾಹಿತಿ ನೀಡಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
