ನವದೆಹಲಿ:ವ್ಯಕ್ತಿಯೊಬ್ಬ ತನ್ನ ಮಗಳನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಬಳಿಕ ಮಗಳ ಶವವನ್ನು ಜಮೀನಿನಲ್ಲಿ ಬಿಟ್ಟು ಹೋಗಿರುವ ಘಟನೆ ನವದೆಹಲಿಯಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಆಘಾತಕಾರಿ ಘಟನೆ ನವದೆಹಲಿ ರೋಹಿಣಿಯ ಕಂಝವಾಲಾ ಪ್ರದೇಶದಲ್ಲಿ ನಡೆದಿದೆ. ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ಅನ್ಯ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದೇ ಈ ಭೀಕರ ಕೃತ್ಯಕ್ಕೆ ಕಾರಣ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ರಾಯ್​ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಗಾ: ವಯನಾಡ್​ದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ!
ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. 46 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಗುರಿಕ್ಬಾಲ್ ಸಿಂಗ್ ಸಿಧು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮಹಿಳೆಯ ದೇಹದ ಮೇಲೆ ಸಾಕಷ್ಟು ಬಾರಿ ಇರಿದಿರುವ ಗಾಯಗಳಾಗಿತ್ತು. ಕಾಂಝಾವಾಲಾದ ಚಂದ್‌ಪುರ ಗ್ರಾಮದ ಕೃಷಿಭೂಮಿಯಲ್ಲಿ ಶವ ಪತ್ತೆಯಾಗಿತ್ತು. ರೋಹಿಣಿ ಉಪ ಪೊಲೀಸ್ ಆಯುಕ್ತ ಗುರಿಕ್ಬಾಲ್ ಸಿಂಗ್ ಸಿಧು ಅವರು 46 ವರ್ಷದ ಆರೋಪಿಯ ಬಂಧನವನ್ನು ಖಚಿತಪಡಿಸಿದ್ದಾರೆ.ಭಾನುವಾರ ರಾತ್ರಿ 8:53ಕ್ಕೆ ಈ ಕೊಲೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಆ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಗಿದೆ.
ಈ ಪ್ರಕರಣದ ತನಿಖೆಗಾಗಿ ಅನೇಕ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಲಾಗಿದೆ ಎಂದಿದ್ದಾರೆ.ಪೊಲೀಸರ ಮಾಹಿತಿಯಂತೆ, ಆರೋಪಿ ತಂದೆ ಪ್ರೇಮ್ ನಗರದಲ್ಲಿರುವ ಅವರ ಮನೆಗೆ ಹೋಗಲು ಕ್ಯಾಬ್ ಬಾಡಿಗೆಗೆ ಪಡೆದಿದ್ದನು. ಆದರೆ ದಾರಿಯಲ್ಲಿ ಆಕೆಯ ಮದುವೆಯ ಬಗ್ಗೆ ಮಗಳೊಂದಿಗೆ ಜಗಳವಾಡಿದನು. ತಮ್ಮನ್ನು ಕಂಜ್ವಾಲಾದಲ್ಲಿ ಬಿಡುವಂತೆ ಚಾಲಕನಿಗೆ ಸೂಚಿಸಿದರು. ಆಗ ಅವರು ಅವಳನ್ನು ಜಮೀನಿಗೆ ಕರೆದೊಯ್ದು, ಕತ್ತು ಸೀಳಿ ಹಲವಾರು ಬಾರಿ ಚಾಕುವಿನಿಂದ ಇರಿದಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
-ಮಗಳು ಬಳಸುತ್ತಿದ್ದ ಕ್ಯಾಬ್‌ನ ನೋಂದಣಿ ಸಂಖ್ಯೆಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ತಾಂತ್ರಿಕ ಪುರಾವೆಗಳ ಆಧಾರದ ಮೇಲೆ, ಪೊಲೀಸರು ಮಹಿಳೆಯನ್ನು ಗುರುತಿಸಿದ್ದಾರೆ ಮತ್ತು ಆ ವ್ಯಕ್ತಿ ಆಕೆಯ ತಂದೆ ಎಂದು ಕಂಡುಹಿಡಿದಿದ್ದಾರೆ ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಈ ಕುಟುಂಬ ಬಿಹಾರದ ಮುಜಾಫರ್‌ಪುರ ಮೂಲದವರು ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ಮುಜಾಫರ್‌ಪುರದಲ್ಲಿ ತನ್ನ ಮಗಳು ಅನ್ಯ ಜಾತಿಯ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಾಳೆ ಮತ್ತು ಅವನನ್ನೂ ಮದುವೆಯಾಗಲು ಬಯಸಿದ್ದಳು, ಕುಟುಂಬದ ಹೆಸರಿಗೆ ಕಳಂಕ ತರುತ್ತಿದ್ದಳು ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.
ತೆಲುಗು ದೇಶಂ ಪಕ್ಷದ ಅಧ್ಯಕ್ಷರಾಗಿ ಶ್ರೀನಿವಾಸರಾವ್​ ಯಾದವ್ ನೇಮಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + eighteen =
Remember me
