ಹರಿಯಾಣ:ರಾಮಲೀಲಾ ನಾಟಕ ಪ್ರದರ್ಶನ ಮಾಡುತ್ತಿದ್ದ ವೇಳೆ ಹನುಮನ ಪಾತ್ರ ಮಾಡುತ್ತಿರುವ ವ್ಯಕ್ತಿ ವೇದಿಕೆಯ ಮೇಲೆ ಹೃದಯಾಘಾತಗೊಂಡು ಮೃತಪಟ್ಟಿರುವ ಘಟನೆ ಹರಿಯಾಣದ ಭೀಮನಿಯಲ್ಲಿ ನಡೆದಿದೆ.
ಇದನ್ನೂ ಓದಿ:ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಸಿಗಲಿ: ಎಲಾನ್ ಮಸ್ಕ್ ಕಿವಿಮಾತು
ಹರೀಶ್​ ಮೆಹ್ತಾ ಮೃತ ದುರ್ದೈವಿ. ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೌರಾಣಿಕ ರಾಮಲೀಲಾ ನಾಟಕ ಆಯೋಜಿಸಲಾಗಿತ್ತು. ಈ ವೇಳೆ ದುರಂತ ಘಟನೆ ಸಂಭವಿಸಿದೆ.
ಭಿವಾನಿಯ ಜವಾಹರ್ ಚೌಕ್​ ಸ್ಥಳದಲ್ಲಿ ರಾಮನ ಮೇಲಿನ ಭಕ್ತಿಯಿಂದ ರಾಜ್​ ತಿಲಕ್​ ಎಂಬ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಮೃತ ಹರೀಶ್ ರಾಮನ ಪಾದಗಳಿಗೆ ನಮಸ್ಕರಿಸಬೇಕಿತ್ತು. ಆ ಸಮಯದಲ್ಲಿ ಹೃದಯಾಘಾತವಾಗಿ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಈ ಸನ್ನಿವೇಶವನ್ನು ನಾಟಕದ ಭಾಗವಾಗಿರಬಹುದು ಎಂದುಕೊಂಡಿದ್ದರು. ಆದರೆ ವೇದಿಕೆ ಮೇಲಿದ್ದ ಇತರೆ ಪಾತ್ರಧಾರಿಗಳು ಕೂಡಲೇ ಹರೀಶ್​ ಅವರನ್ನು ಎತ್ತುವಾಗಲೇ ಗೊತ್ತಾಗಿದ್ದು ಇದು ನಾಟಕವಲ್ಲ ಎಂದು.
ಈ ಕೂಡಲೇ ಹರೀಶ್​ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟೊತ್ತಿಗಾಗಲೇ ಅವರು ಪ್ರಾಣ ಬಿಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಹರೀಶ್ ವಿದ್ಯುತ್ ಇಲಾಖೆಯಲ್ಲಿ ಜೂನಿಯರ್ ಇಂಜಿನಿಯರ್ ವೃತ್ತಿಯಿಂದ ನಿವೃತ್ತರಾಗಿದ್ದರು. ಕಳೆದ 25 ವರ್ಷಗಳಿಂದ ಹನುಮಂತನ ಪಾತ್ರ ಮಾಡಿ ಅಪಾರ ಜನಮನ್ನಣೆಗಳಿಸಿದ್ದರು ಎನ್ನಲಾಗಿದೆ.
ಕಂಗನಾ ಅಭಿನಯದ ಬಹುನಿರೀಕ್ಷಿತ ‘ಎಮರ್ಜೆನ್ಸಿ’ ರಿಲೀಸ್ ಡೇಟ್ ಫಿಕ್ಸ್!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 − eight =
Remember me
