ಛತ್ತೀಸ್‌ಗಢ:ರಾಯ್‌ಗಢ ಜಿಲ್ಲೆಯಲ್ಲಿ ಭಾನುವಾರ 38 ವರ್ಷದ ವ್ಯಕ್ತಿಯೊಬ್ಬ ತನ್ನ ಮೂವರು ಅಪ್ರಾಪ್ತ ಮಕ್ಕಳನ್ನು ನದಿಗೆ ಎಸೆದು ತಾನೂ ನದಿಗೆ ಹಾರಿದ ಘಟನೆ ನಡೆದಿದೆ.ನದಿಯಲ್ಲಿ ಅವರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದ್ದು,ಈ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಅಪಾಯವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ;ಕದ್ದುಮುಚ್ಚಿ ಭಾರತದ ಭೂಪ್ರದೇಶಕ್ಕೆ ಬಂದ ಪಾಕ್​ ಮೀನುಗಾರರು ಬಿಎಸ್​ಎಫ್​ ಯೋಧರನ್ನು ನೋಡಿ ನೀರಿಗೆ ಹಾರಿದರು
“ಈ ಘಟನೆ ಖಾರ್ಸಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಾಂಡ್ ನದಿಯ ಸೇತುವೆಯಲ್ಲಿ ನಡೆದಿದೆ ಎಂದು ರಾಯಗಢ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ತಿಳಿಸಿದ್ದಾರೆ.ಎಡು ಗ್ರಾಮ ಮೂಲದ ಕಾರ್ತಿಕೇಶ್ವರ ರತಿಯಾ ಎಂದು ಗುರುತಿಸಲ್ಪಟ್ಟ ಈ ವ್ಯಕ್ತಿ ತನ್ನ ಮಕ್ಕಳಾದ ಖಿರ್ಸಾಗರ್ (5), ನರ್ಮದಾ (3) ಮತ್ತು ಎಂಟು ತಿಂಗಳ ತೇಜ್ ಪ್ರಕಾಶ್ ಅವರೊಂದಿಗೆ ಮೋಟಾರ್ ಸೈಕಲ್‌ನಲ್ಲಿ ಬಾರ್ರಾ ಗ್ರಾಮದತ್ತ ತೆರಳುತ್ತಿದ್ದ. ಆತ ಇದ್ದಕ್ಕಿದ್ದಂತೆ ವಾಹನವನ್ನು ಸೇತುವೆಯ ಮೇಲೆ ನಿಲ್ಲಿಸಿ ತಮ್ಮ ಮಕ್ಕಳನ್ನು ನದಿಗೆ ಎಸೆದು ನಂತರ ಆತನೂ ನದಿಗೆ ಹಾರಿದ ಎಂದು ಅವರು ಹೇಳಿದರು.
ಇದನ್ನೂ ಓದಿ:ಗಣೇಶನ ಮೂರ್ತಿಗಳನ್ನು ಎತ್ತಿಎತ್ತಿ ಒಡೆದಳು: ‘ಗುಡ್‌ ಜಾಬ್‌’ ಎಂದ ಕೆಲ ಕಮೆಂಟಿಗರು
“ಮಾಹಿತಿ ಪಡೆದ ನಂತರ ಪೊಲೀಸರು ಕೆಲವು ಡೈವರ್‌ಗಳೊಂದಿಗೆ ಸ್ಥಳಕ್ಕೆ ಧಾವಿಸಿ ನದಿಯಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ, ಈವರೆಗೆ ಯಾರೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದರು.ಪ್ರಾಥಮಿಕ ಮಾಹಿತಿಯ ಪ್ರಕಾರ, ಸೌತ್ ಈಸ್ಟರ್ನ್ ಕೋಲ್​​ಫೀಲ್ಡ್ಸ್ ಲಿಮಿಟೆಡ್ (ಎಸ್‌ಇಸಿಎಲ್) ನ ವಿದ್ಯುತ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ರತಿಯಾ ಕೈಗೊಂಡ ಈ ದುರಂತ ನಡೆಯ ಹಿಂದೆ ಕುಟುಂಬ ವಿವಾದ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.
ತಾಯಿಯಿಂದ ಹಣ ಸುಲಿಗೆಗೆ ಸ್ವ ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ಬಾಲಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 8 =
Remember me
