ಶಹಜಹಾನ್​ಪುರ್​​:ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ವ್ಯಕ್ತಿ ಒಬ್ಬನನ್ನು ಅಮಾನುಷವಾಗಿ ಹೊಡೆದು ಕೊಲೆ ಮಾಡಿ ಆತನ ಶವವನ್ನು ಸರ್ಕಾರಿ ಆಸ್ಪತ್ರೆ ಮುಂದೆ ಎಸೆದಿರುವ ಘಟನೆ ಉತ್ತರಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ.
ಶಿವಂ ಜೊಹ್ರಿ(32) ಮೃತ ದುರ್ದೈವಿ ಎಂದು ತಿಳಿದು ಬಂದಿದ್ದು. ಇವರನ್ನು ಕಂಬಕ್ಕೆ ಕಟ್ಟಿ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಟ್ರಾನ್ಸ್​ಪೋರ್ಟ್​ ಕಂಪನಿ ಒಂದರಲ್ಲಿ ಮ್ಯಾನೇಜರ್​ ಆಗಿ ಏಳು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಶಿವಂ ಮೇಲೆ ಕಳ್ಳತನ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಸಂಸ್ಥೆಯ ಮಾಲೀಕ ಬಂಕಿಮ್​ ಸೂರಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದವರನ್ನು ಹಿಡಿದು ಥಳಿಸಿ ಬಾಯಿ ಬಿಡಿಸಲು ಯತ್ನಿಸಿದ್ದಾರೆ.
Warning: Disturbing videoIn a UP shocker, 4 workers including a manager at a transport company were allegedly held captive, flogged and brutally tortured on suspicion of theft in Shahjahanpur district. Manager Shivam Johri (in the video) succumbed to the brutal torture.pic.twitter.com/ThH9lv23Oq
ಇದನ್ನೂ ಓದಿ:VIDEO| ಅರಣ್ಯ ಇಲಾಖೆ ಕರೆದೊಯ್ದಿದ್ದ ಕೊಕ್ಕರೆ-ಆರಿಫ್​ ಒಂದಾಗಬೇಕು: ಬಿಜೆಪಿ ಸಂಸದ
ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಶಿವಂ ಮೃತಪಟ್ಟಿದ್ದು ಅವರ ದೇಹವನ್ನು ಸರ್ಕಾರಿ ಆಸ್ಪತ್ರೆ ಮುಂಭಾಗ ಎಸೆದು ಆರೋಪಿಗಳು ಪರಾರಿಯಾಗಿದ್ದರು.
ಸರ್ಕಾರಿ ಆಸ್ಪತ್ರೆಯಲ್ಲಿ ಬಳಿ ಶಿವಂ ಶವ ದೊರೆತ ಬಗ್ಗೆ ಪೊಲೀಸರಿಗೆ ತಿಳಿಸಿದ್ದರು. ಈ ವೇಳೆ ಕುಟುಂಬಸ್ಥರು ಕರೆಂಟ್​ ಹೊಡೆದು ಮೃತಪಟ್ಟಿರುವುದಾಗಿ ತಿಳಿಸಿದ್ದರು.
ಶಿವಂ ದೇಹದ ಮೇಲೆ ಗಾಯದ ಗುರುತುಗಳನ್ನು ಗಮನಿಸಿದ ಪೊಲೀಸ್​ ಸಿಬ್ಬಂದಿ ತನಿಖೆ ಪ್ರಾರಂಭಿಸಿದ್ದಾರೆ.
ಇತ್ತೀಚಿಗೆ ಕನ್ಹಿಯಾ ಹೊಸೈರಿ ಸಂಸ್ಥಗೆ ಸೇರಿದ್ದ ಪ್ಯಾಕೇಜ್​ ಒಂದು ಕಾಣೆಯಾಗಿತ್ತು. ಇದರ ಬಗ್ಗೆ ವಿಚಾರಿಸಲು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನೌಕರರನ್ನು ಥಳಿಸಲಾಗಿದೆ.
ಘಟನೆ ಸಂಬಂಧ ಏಳು ಮಂದಿ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದ್ದು ಇದು ಟ್ರಾನ್ಸ್​ಪೋರ್ಟ್​​ ಸಂಸ್ಥೆ ಮಾಲೀಕ ಬಂಕಿಮ್​ ಸೂರಿ ಹಾಗೂ ಕನ್ಹಿಯಾ ಹೊಸೈರಿ ಮಾಲೀಕ ನೀರಜ್ ಗುಪ್ತಾ ಅವರನ್ನು ಹೆಸರಿಸಲಾಗಿದ್ದು ಆರೋಪಿಗಳು ತಲೆ ಮಾರಿಸಿಕೊಂಡಿದ್ದಾರೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 + 12 =
Remember me
