ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಸುದೀರ್ಘ ರಾಜಕೀಯ ಇತಿಹಾಸವನ್ನು ಹೊಂದಿರುವ ಮಂಡ್ಯ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದೆ. ರಾಜ್ಯದಲ್ಲಿ ಒಕ್ಕಲಿಗರ ಪ್ರಾಬಲ್ಯವಿರುವ ಮಂಡ್ಯ ಕ್ಷೇತ್ರವು, ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್​​ ಮತ್ತು ಜೆಡಿಎಸ್​​ ನಡುವಿನ ಪೈಪೋಟಿಗೆ ಹೆಸರುವಾಸಿಯಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್​​​ ಮೈತ್ರಿಯಿಂದಾಗಿ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಎಚ್​ಡಿಕೆ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್​​ ಸ್ಟಾರ್​ ಚಂದ್ರು ಎಂದೇ ಖ್ಯಾತಿಯಾಗಿರುವ ವೆಂಕಟರಮಣೇಗೌಡ ಅವರನ್ನು ಕಣಕ್ಕಿಳಿಸಿತು. ಮಂಡ್ಯ ಸ್ಪರ್ಧಿಗಳ ಒಳ-ಹೊರಗಿನ ಹೋರಾಟದ ಈ ರಣರಂಗದಲ್ಲಿ ಎಚ್​.ಡಿ.ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಇದನ್ನು ಓದಿ:AIMIM ಭದ್ರಕೋಟೆ ಬಲಪಡಿಸಿಕೊಂಡ ಅಸಾದುದ್ದೀನ್ ಓವೈಸಿ : ಹೈದರಾಬಾದ್​ನಲ್ಲಿ 1,13,683 ಮತಗಳ ಅಂತರದಿಂದ ಮುನ್ನಡೆ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಪ್ರಸ್ತುತ ಹಿಂದುಳಿದಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗವು ತನ್ನ ಪೋಸ್ಟ್​ನಲ್ಲಿ ತಿಳಿಸಿದೆ.
ಮಂಡ್ಯ ಲೋಕಸಭೆ ಕ್ಷೇತ್ರವು ಅದರ ಅಡಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಮಳವಳ್ಳಿ (ಎಸ್‌ಸಿ), ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೃಷ್ಣರಾಜಪೇಟೆ ಮತ್ತು ಕೃಷ್ಣರಾಜನಗರ ಕ್ಷೇತ್ರಗಳನ್ನು ಒಳಗೊಂಡಿದೆ.
ಮಧ್ಯಾಹ್ನ 01.56ರ ಟ್ರೆಂಡ್​ ಪ್ರಕಾರ ಒಟ್ಟು 545 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 295ರಲ್ಲಿ ಮತ್ತು ಕಾಂಗ್ರೆಸ್​ 230ರಲ್ಲಿ ಹಾಗೂ ಇತರೆ 18ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 16, ಕಾಂಗ್ರೆಸ್​​ 10 ಮತ್ತು ಜೆಡಿಎಸ್​​ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. (ಏಜೆನ್ಸೀಸ್​)
ರಜನಿಕಾಂತ್​​ ಫ್ಯಾನ್ಸ್​ಗೆ ಡಬಲ್​ ಧಮಾಕಾ : ವೆಟ್ಟೈಯಾನ್ ಬಿಡುಗಡೆ ಜತೆಗೆ ಮುಂದಿನ ಪ್ರಾಜೆಕ್ಟ್​​​ ಸುಳಿವು ಕೊಟ್ರು ಸೂಪರ್​ಸ್ಟಾರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + fifteen =
Remember me
