Manipur: ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆ (ಸೆಪ್ಟೆಂಬರ್ 27)ಯಿಂದ ಸೆಪ್ಟೆಂಬರ್ 29(ಶುಕ್ರವಾರ) ವರೆಗೆ ರಜೆ ಘೋಷಿಸಲಾಗಿತ್ತು. ಇದೀಗ ಷೇಧವನ್ನು ಅಕ್ಟೋಬರ್ 11 ರವರೆಗೆ ವಿಸ್ತರಿಸಲಾಗಿದೆ ಎಂದು ಮಣಿಪುರ ಪೊಲೀಸರು ಸರ್ಕ್ಯುಲರ್​​​ ಹೊರಡಿಸಿದ್ದಾರೆ. ಈಶಾನ್ಯ ರಾಜ್ಯದ ಕೆಲವು ಭಾಗಗಳಲ್ಲಿ ಅಶಾಂತಿ ಮತ್ತು ಹಿಂಸಾಚಾರದ ಘಟನೆಗಳ ಮುಂದುವರೆದ ನಿಟ್ಟಿನಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಗಲಭೆಯ ನಡುವೆ ಹಿಂಸಾಚಾರವನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಬಹುದು ಮತ್ತು ದ್ವೇಷದ ಭಾಷಣವನ್ನು ಬಳಸಬಹುದೆಂಬ ಭಯವಿದೆ ಎಂದು ಮಣಿಪುರದ ಪೊಲೀಸ್ ಮಹಾನಿರ್ದೇಶಕರು ಹೇಳಿದ್ದಾರೆ.
ರಾಜ್ಯ ಸರ್ಕಾರವು ಭಾನುವಾರ ಹೊರಡಿಸಿದ ಅಧಿಸೂಚನೆಯಲ್ಲಿ, “ಕೆಲವು ಸಮಾಜ ವಿರೋಧಿ ಶಕ್ತಿಗಳು ಸಾರ್ವಜನಿಕರ ಭಾವೋದ್ರೇಕಗಳನ್ನು ಪ್ರಚೋದಿಸುವ ಚಿತ್ರಗಳು, ದ್ವೇಷ ಭಾಷಣ ಮತ್ತು ದ್ವೇಷದ ವೀಡಿಯೊ ಸಂದೇಶಗಳನ್ನು ಪ್ರಸಾರ ಮಾಡಲು ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ಬಳಸಿಕೊಳ್ಳುವ ಆತಂಕವಿದೆ.
ಇದು ಸಮಾಜದ ಶಾಂತಿಯುತ ಜೀವನಕ್ಕೆ ಧಕ್ಕೆ ತರಬಹುದು. ಮಣಿಪುರ ರಾಜ್ಯದಲ್ಲಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
