ರಾಯಚೂರು:ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಮುಚ್ಚಿದ್ದ ಮಂತ್ರಾಲಯದ ರಾಘವೇಂದ್ರಸ್ವಾಮಿ ಮಠದ ಬಾಗಿಲನ್ನು ಜುಲೈ 2ರಿಂದ ಸಾರ್ವಜನಿಕರಿಗಾಗಿ ತೆರೆಯಲಾಗುತ್ತಿದೆ ಎಂದು ಕಳೆದ ವಾರವಷ್ಟೇ ಆಡಳಿತ ಮಂಡಳಿ ತಿಳಿಸಿತ್ತು.
ಆದರೆ ಕರೊನಾ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯ ರಾಯರ ಮಠವನ್ನು ತೆರೆಯುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.
ಜೂನ್ ಒಂದರಿಂದ ಷರತ್ತಿನೊಂದಿಗೆ ದೇವಸ್ಥಾನ ತೆರೆಯಲು ಸರ್ಕಾರ ಅನುಮತಿ ನೀಡಿದ್ದರೂ ಮಠ ತೆರೆದಿರಲಿಲ್ಲ. ನಂತರ ಜುಲೈ 2ರಿಂದ ತೆರೆಯುವುದಾಗಿ ತಿಳಿಸಿತ್ತು. ಆದರೆ ಇದೀಗ ಪುನಃ ದಿನಾಂಕವನ್ನು ಮುಂದೂಡಿದೆ. ಈ ಕುರಿತು ಮಂತ್ರಾಲಯ ಮಠದ ಆಡಳಿತ ಮಂಡಳಿಯ ವ್ಯವಸ್ಥಾಪಕ ವೆಂಕಟೇಶ್ ಜೋಷಿ ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಮಠವನ್ನು ತೆರೆಯುವ ದಿನಾಂಕವನ್ನು ತಿಳಿಸಲಾಗಿಲ್ಲ.
65 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದೊಳಗಿನ ಮಕ್ಕಳಿಗೆ ಪ್ರವೇಶವಿಲ್ಲ, ಗರ್ಭಿಣಿಯರಿಗೆ ಹಾಗೂ ವಯೋಸಹಸ ಸಂಬಂಧಿಸಿದಂತೆ ಕಾಯಿಲೆ ಇದ್ದವರಿಗೆ ಪ್ರವೇಶವಿಲ್ಲ, ದರ್ಶನಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಆಧಾರ ಸಂಖ್ಯೆ ನೀಡಬೇಕು, ಮೊಬೈಲ್‌ ಸಂಖ್ಯೆ ನೀಡುವುದೂ ಕಡ್ಡಾಯ, ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಹಾಗೂ ಸಂಜೆ 4 ರಿಂದ 6ರವರೆಗೂ ದರ್ಶನಕ್ಕೆ ಅವಕಾಶ, ಬೇರೆಡೆಯಿಂದ ಬರುವ ಭಕ್ತರಿಗೆ ಮಠದ ವಸತಿ ನಿಲಯದಲ್ಲಿ ಒಂದು ಕೋಣೆಯಲ್ಲಿ ಇಬ್ಬರು ಒಂದು ದಿನ ಮಾತ್ರ ತಂಗಲು ಅವಕಾಶ ಕಲ್ಪಿಸಲಾಗುತ್ತದೆ ಎಂಬಿತ್ಯಾದಿ ಷರತ್ತುಗಳೊಂದಿಗೆ ಜುಲೈ 2ರಿಂದ ದೇವಾಲಯದ ಬಾಗಿಲು ತೆರೆಯುವುದಾಗಿ ತಿಳಿಸಲಾಗಿತ್ತು.
‘ದಯವಿಟ್ಟು ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ..’ ಧ್ವನಿ ಬಿಟ್ಟು ಮರೆಯಾದ ಉಷಾ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 2 =
Remember me
