ಮೀರತ್​:ವಧು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಕಲ್ಯಾಣ ಮಂಟಪದ ಬುಕ್ಕಿಂಗ್​ ರದ್ದು ಮಾಡಿರುವ ಅಮಾನುಷ ಘಟನೆ ಉತ್ತರಪ್ರದೇಶದ ಮೀರತ್​ನಲ್ಲಿ ನಡೆದಿದೆ.
ಘಟನೆ ಸಂಬಂಧ ಕಲ್ಯಾಣ ಮಂಟಪದ ಮಾಲೀಕ ರಾಯಿಸ್​ ಅಬ್ಬಾಸಿಯನ್ನು ಪೊಲೀಸರು ಬಂಧಿಸಿದ್ದು. ಬುಕ್​ ಮಾಡಿರುವ ಛತ್ರದಲ್ಲೇ ಮದುವೆ ಮಾಡಿಸಿಕೊಡುವುದಾಗಿ ಕುಟುಂಬಸ್ಥರಿಗೆ ಭರವಸೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಖಾರ್​ ಖೌಧ ಠಾಣಾಧಿಕಾರಿ ರುಚಿತಾ ಚೌಧರಿ ಸ್ಥಳೀಯ ನಿವಾಸಿ ಜೈದೀಪ್​ ತಮ್ಮ ಸಹೋದರಿ ಮದುವೆಯನ್ನು ಏಪ್ರಿಲ್​ 9ರಂದು ನಿಶ್ಚಯಿಸಿದ್ದರು. ಇದರ ಸಂಬಂಧ ರಾಯಿಸ್​ ಅಬ್ಬಾಸಿ ಒಡೆತನದ ಕಲ್ಯಾಣ ಮಂಟಪವನ್ನು ಬುಕ್​ ಮಾಡಿದ್ದರು.
ಇದನ್ನೂ ಓದಿ:ಗದಗದಲ್ಲಿ ಸಿಡಿಲು ಬಡಿದು ಇಬ್ಬರು ಮೃತ್ಯು; ರೋಣದಲ್ಲಿ ಬಿತ್ತು ಆಲಿಕಲ್ಲು ಮಳೆ
ವಧು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ನಿಮ್ಮ ಕಲ್ಯಾಣ ಮಂಟಪದ ಬುಕ್ಕಿಂಗ್​ ಅನ್ನು ಕ್ಯಾನ್ಸಲ್​ ಮಾಡಲಾಗಿದೆ. ನೀವು ಬೇರೆ ಛತ್ರವನ್ನು ನೋಡಿಕೊಳ್ಳಿ ಎಂದು ಮಾಲೀಕರು ದೂರುದಾರರಿಗೆ ಕರೆ ಮಾಡಿ ಹೇಳಿದ್ದರು. ಈ ಸಂಬಂಧ ಛತ್ರದ ಮಾಲೀಕನ ವಿರುದ್ಧ FIR ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಲೀಕ ರಾಯಿಸ್​ ಅಬ್ಬಾಸಿ ತಮ್ಮ ಮೇಲೆ ಮಾಡಿರುವ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ನಾವು ಬುಕ್ಕಿಂಗ್​ ಕ್ಯಾನ್ಸಲ್​ ಮಾಡಿಲ್ಲ ಮಾಂಸಹಾರವನ್ನು ಮಾಡಬೇಡಿ ಎಂದು ಹೇಳಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
