ಹೈದರಾಬಾದ್​:ಆಘಾತಕಾರಿ ಘಟನೆಯೊಂದರಲ್ಲಿ ಅರ್ಚಕರೊಬ್ಬರು ತಮ್ಮ ಪ್ರೇಯಸಿಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ಮ್ಯಾನ್​ಹೋಲ್​ಗೆ ಎಸೆದಿರುವ ಘಟನೆ ತೆಲಂಗಾಣದ ರಾಜಧಾನಿ ಹೈದರಬಾದಿನಲ್ಲಿ ನಡೆದಿದೆ.
ಶಂಶಾಭಾದ್​ನಲ್ಲಿರುವ ಬಂಗಾರು ಮೈಸಮ್ಮ ದೇವಸ್ಥಾನದ ಅರ್ಚಕ ವೆಂಕಟಸೂರ್ಯ ಸಾಯಿಕೃಷ್ಣ(36) ಎಂದು ತಿಳಿದು ಬಂದಿದ್ದು, ಮೃತ ದುರ್ದೈವಿಯನ್ನು ಕುರುಗಂಟಿ ಅಪ್ಸರಾ(30) ಎಂದು ವರದಿಯಾಗಿದೆ.
ವೃತ್ತಿಯಲ್ಲಿ ಅರ್ಚಕ, ಬಿಲ್ಡರ್​ ಆಗಿ ಕೆಲಸ ಮಾಡುತ್ತಿರುವ ಸಾಯಿಕೃಷ್ಣಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದು, ಆರೋಪಿ ಅಪ್ಸರಾ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಈ ನಡುವೆ ಆತನ ಪ್ರೇಯಸಿಯೂ ಮೊದಲ ಪತ್ನಿಗೆ ವಿಚ್ಛೇದನ ನೀಡಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು.


Shocking, a temple#priestwas allegedly killed a woman and her body was dumped in a manhole in Saroornagar, files missing complaint in Shamshabad.Married priest Sai Krishna (36) and Apsara (30) were allegedly in a relationship for over a year.#Hyderabad#Murder#TemplePriestpic.twitter.com/WLIPfM9U3k
ದಿನದಿಂದ ದಿನಕ್ಕೆ ಅಪ್ಸರಾ ಮದುವೆಯಾಗುವಂತೆ ಸಾಯಿಕೃಷ್ಣ ಮೇಲೆ ಒತ್ತಡ ಹೇರುತ್ತಿದ್ದ ಕಾರಣ ಆರೋಪಿಯೂ ಆಕೆಯ ಕೊಲೆ ಮಾಡಲು ಸಂಚು ರೂಪಿಸಿದ್ದಾನೆ. ಮೊದಲಿಗೆ ಅಪ್ಸರಾಳನ್ನು ಮಾತನಾಡುವ ನೆಪದಲ್ಲಿ ಭೇಟಿ ಮಾಡಿದ ಆರೋಪಿಯೂ ಆಕೆಯನ್ನು ಕೊಲೆ ಮಾಡಿ ಮೃತದೇಹವನ್ನು ಮ್ಯಾನ್​ಹೋಲ್​ ಒಳಗೆ ಎಸೆದಿದ್ದಾನೆ.
ಇದನ್ನೂ ಓದಿ:ಟೋಲ್​ ಸಿಬ್ಬಂದಿ ಹತ್ಯೆ ಪ್ರಕರಣ; ಇಬ್ಬರನ್ನು ಬಂಧಿಸಿದ ಪೊಲೀಸರು
ಬಳಿಕ ತನಗೂ ಇದಕ್ಕೂ ಶಂಬಂಧ ಇಲ್ಲ ಎಂಬಂತೆ ಮೃತಳ ಮನೆಗೆ ಹೋಗಿ ಪೋನ್​ ರಿಸೀವ್​ ಮಾಡುತ್ತಿಲ್ಲ ಎಂದು ಹೇಳಿ ಆಕೆಯ ಪೋಷಕರಿಗೆ ದೂರು ನೀಡುವಂತೆ ಸಲಹೆ ನೀಡಿ ಬಂದಿದ್ದಾನೆ. ಅದರಂತೆ ಅಪ್ಸರಾಳ ತಂದೆ-ತಾಯಿ ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ಧಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಮೊದಲಿಗೆ ಆಕೆಯ ನಂಬರ್​ ಟ್ರೇಸ್​ ಮಾಡಿದ್ದಾರೆ. ಬಳಿಕ ನಂಬರ್​ ಕಡೆಯದಾಗಿ ಪತ್ತೆಯಾದ ಸ್ಥಳಕ್ಕೆ ಹೋಗಿ ಸಿಸಿಟಿವಿಗಳ ಪರಿಶೀಲನೆ ನಡೆಸಿದಾಗ ಆರೋಪಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಬಳಿಕ ಸಾಯಿಕೃಷ್ಣನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಪ್ಸರಾ ತಾಯಿ ಶನಿವಾರ ನನ್ನ ಮಗಳು ಕೊಯಮತ್ತೂರಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದಾಳೆ. ಭಾನುವಾರ ಬೆಳಗ್ಗೆ ಸಾಯಿಕೃಷ್ಣ ನಮ್ಮ ಮನೆಗೆ ಬಂದು ಅಪ್ಸರಾ ಪೋನ್​ ರಿಸೀವ್ ಮಾಡುತ್ತಿಲ್ಲ ಎಂದು ಹೇಳಿದ. ಬಳಿಕ ನಾವು ಪೊಲೀಸರಿಗೆ ದೂರು ನೀಡಿದಾಗ ಆತನೇ ನನ್ನ ಮಗಳನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಬೇಸರಿಸಿದ್ಧಾರೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಸಾಯಿಕೃಷ್ಣ ತಂದೆ ನನ್ನ ಮಗ ತುಂಬಾ ಒಳ್ಳೆಯ ಮನುಷ್ಯ. ಮೃತ ಹುಡುಗಿಯೂ ಆಗಾಗ ನಮ್ಮ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಳು ಅವಳ ಜೊತೆ ಹೆಚ್ಚಾಗಿ ಮಾತನಾಡಬೇಡ ಎಂದು ಎಚ್ಚರಿಸಿದ್ದೆ. ಆಕೆ ನೀಡಿರುವ ಕಿರುಕುಳದಿಂದ ನನ್ನ ಮಗ ಕೃತ್ಯ ಎಸಗಿರಬಹುದು ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
