ಲಖನೌ:ಜೈಲಿನಲ್ಲಿದ್ದ ದರೋಡೆಕೋರ-ರಾಜಕಾರಣಿ ಮುಕ್ತಾರ್ ಅನ್ಸಾರಿ ಸಾವಿನ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯಿಸಿದರು.
ಇದನ್ನೂ ಓದಿ:ಕೈಕುಲುಕಲು ನಿರಾಕರಿಸಿದ ಸೋಷಿಯಲ್ ಮೀಡಿಯಾ ಸೆನ್ಸೇಷನ್ ಓರ್ರಿ..ಕಂಟೆಂಟ್ ಕ್ರಿಯೇಟರ್ ರುಚಿಕಾ ಮೇಲೆ ಕೇಸ್​ ಹಾಕುವ ಬೆದರಿಕೆ!
ಪ್ರಕರಣದ ಸತ್ಯಾಸತ್ಯತೆ ಸಾರ್ವಜನಿಕರ ಮುಂದೆ ಬರಬೇಕಾಗಿದೆ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.
63 ವರ್ಷದ ಅನ್ಸಾರಿ ಗುರುವಾರ ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಆಸ್ಪತ್ರೆಯಲ್ಲಿ ಹೃದಯ ಸ್ತಂಭನದಿಂದ ನಿಧನರಾದರು.
ಜೈಲಿನಲ್ಲಿ ಮುಖ್ತಾರ್ ಅನ್ಸಾರಿ ಸಾವಿನ ಬಗ್ಗೆ ಅವರ ಕುಟುಂಬವು ಶಂಕೆ ವ್ಯಕ್ತಪಡಿಸಿತ್ತು. ಹೀಗಾಗಿ ಆ ಕುಟುಂಬದ ಆತಂಕ ದೂರಮಾಡಲು ಉನ್ನತ ಮಟ್ಟದ ತನಿಖೆಯ ಅಗತ್ಯವಿದೆ, ಇದರಿಂದ ಅವರ ಸಾವಿನ ನಿಜವಾದ ಸಂಗತಿಗಳು ಬಹಿರಂಗಗೊಳ್ಳಬಹುದು ಎಂದು ಅವರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.ಭೀಮ್ ಆರ್ಮಿ ಸಂಸ್ಥಾಪಕ ಮತ್ತು ಆಜಾದ್ ಸಮಾಜ ಪಕ್ಷದ (ಕಾನ್ಶಿ ರಾಮ್) ಅಧ್ಯಕ್ಷ ಚಂದ್ರಶೇಖರ್ ಆಜಾದ್, ಅನ್ಸಾರಿ ನಿಧನದಿಂದ ತುಂಬಾ ದುಃಖವಾಗಿದೆ. ಈ ಹಿಂದೆ ಅವರು ತಮ್ಮನ್ನು ಕೊಲೆ ಮಾಡುತ್ತಾರೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದರು. ಅವರ ಸಾವಿನ ಬಗ್ಗೆ ಸಿಬಿಐ ತನಿಖೆಗೆ ಉತ್ತರ ಪ್ರದೇಶದ ಅಲಹಾಬಾದ್‌ನ ಹೈಕೋರ್ಟ್‌ನಿಂದ ನಾನು ಒತ್ತಾಯಿಸುತ್ತೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
63 ವರ್ಷದ ಅನ್ಸಾರಿಯನ್ನು ಗುರುವಾರ ಸಂಜೆ ಹೃದಯ ಸ್ತಂಭನದ ನಂತರ ಆಸ್ಪತ್ರೆಯಲ್ಲಿ ನಿಧನರಾದರು. ಆದರೆ ಆತನಿಗೆ ಜೈಲಿನಲ್ಲಿಯೇ ಸ್ಲೋ ಪಾಯ್ಸನಿಂಗ್‌ಗೆ ಒಳಪಡಿಸಲಾಗಿದೆ ಎಂದು ಅವರ ಕುಟುಂಬ ಆರೋಪಿಸಿದೆ, ಅಧಿಕಾರಿಗಳು ಆರೋಪವನ್ನು ನಿರಾಕರಿಸಿದ್ದಾರೆ.
ಅನ್ಸಾರಿ ಐದು ಬಾರಿ ಶಾಸಕರಾಗಿದ್ದರು. ಅವರು 2005 ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್‌ನ ಜೈಲಿನಲ್ಲಿದ್ದರು. ಅವರ ವಿರುದ್ಧ 60 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ. ಉತ್ತರ ಪ್ರದೇಶದ ವಿವಿಧ ನ್ಯಾಯಾಲಯಗಳಿಂದ ಸೆಪ್ಟೆಂಬರ್ 2022 ರಿಂದ ಎಂಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಯಿತು. ಪ್ರಸ್ತುತ ಬಂದಾ ಜೈಲಿನಲ್ಲಿ ಇರಿಸಲಾಗಿತ್ತು. ಕಳೆದ ವರ್ಷ ಉತ್ತರ ಪ್ರದೇಶ ಪೊಲೀಸರು ನೀಡಿದ 66 ದರೋಡೆಕೋರರ ಪಟ್ಟಿಯಲ್ಲಿ ಈತನ ಹೆಸರಿತ್ತು.
ಕೇಜ್ರಿವಾಲ್​ಗೆ ಬೆಂಬಲ ಪಡೆಯಲು ಪತ್ನಿ ವಾಟ್ಸಾಪ್ ಅಭಿಯಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
