ತಿರುವನಂತಪುರಂ:ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಲ್ಲಿ ಸ್ವಲ್ಪದರಲ್ಲೇ ಸೋಲಿನ ದವಡೆಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇದನ್ನೂ ಓದಿ:ದೆಹಲಿ ನೀರಿನ ಬಿಕ್ಕಟ್ಟು: ಎಎಪಿ ಸರ್ಕಾರಕ್ಕೆ ಸುಪ್ರೀಂ ತರಾಟೆ
ಕೇರಳದ ಮಲಪ್ಪುರಂನಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಅಯೋಧ್ಯೆಯ ಜನರು ಬಿಜೆಪಿಯನ್ನು ಸೋಲಿಸಿದಂತೆಯೇ ವಾರಣಾಸಿಯಲ್ಲಿ ಮೋದಿಯನ್ನು ಸೋಲಿಸುತ್ತಿದ್ದರು. ಆದರೆ ಸ್ವಲ್ಪದರಲ್ಲೇ ಬಚಾವ್​ ಆಗಿದ್ದಾರೆ ಎಂದರು.
ಇನ್ನು ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚನೆಗೆ ಅಗತ್ಯವಾದ ಸ್ಥಾನಗಳನ್ನು ಗೆಲ್ಲದಿರುವ ಬಗ್ಗೆ ಮೋದಿ ನೈತಿಕ ಹೊಣೆ ಹೊರಬೇಕು ಎಂದು ರಾಹುಲ್ ಆಗ್ರಹಿಸಿದರು.
ಬಿಜೆಪಿ ನಾಯಕರು ಚುನಾವಣೆಗೂ ಮುನ್ನ ಸಂವಿಧಾನ ಬದಲಿಸುವ ಮಾತನ್ನಾಡಿದ್ದರು. ಆದರೆ ಪ್ರಮಾಣ ವಚನ ಸ್ವೀಕರಿಸುವಾಗ ಮೋದಿ ಅದೇ ಸಂವಿಧಾನದ ಮೇಲೆ ಮಂತ್ರದಂಡ ಹಾಕಿದ್ದಾರೆ. ಇದನ್ನು ನೋಡಿದರೆ ದೇಶದ ಜನತೆಗೆ ಏನು ಬೇಕು ಎಂಬುದನ್ನು ಪ್ರಧಾನಿಯವರಿಗೆ ಸ್ಪಷ್ಟಪಡಿಸಿದ್ದಾರೆ ಎಂದರು.
ವಾರಣಾಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅವರಿಗಿಂತ 1,50,000 ಮತಗಳ ಬಹುಮತದಿಂದ ಮೋದಿ ಗೆದ್ದಿದ್ದಾರೆ. ಅಯೋಧ್ಯೆಯಲ್ಲಿ ಸಮಾಜವಾದಿ ಪಕ್ಷದ ಅವದೇಶ್ ಪ್ರಸಾದ್ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ವಿರುದ್ಧ ಜಯಗಳಿಸಿದ್ದಾರೆ. ಬಿಜೆಪಿಯ ಭದ್ರಕೋಟೆಯಾದ ಉತ್ತರ ಪ್ರದೇಶದ ಆರು ಸ್ಥಾನ ಸೇರಿದಂತೆ ಭಾರತದಲ್ಲಿ ಒಟ್ಟು 99 ಸ್ಥಾನಗಳನ್ನು ಕಾಂಗ್ರೆಸ್​ ಗೆದ್ದುಕೊಂಡಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದಿದ್ದರೂ, ಸರ್ಕಾರ ರಚಿಸಲು ಇನ್ನೂ 32 ಸ್ಥಾನಗಳ ಅಗತ್ಯವಿತ್ತು. ಆದ್ದರಿಂದ ಸರ್ಕಾರ ರಚಿಸಲು ಚಂದ್ರಬಾಬು ನಾಯ್ಡು (ಟಿಡಿಪಿ) ಮತ್ತು ನಿತೀಶಕುಮಾರ್ (ಜೆಡಿಯು) ಸಹಾಯವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಜೂನ್ 24 ರಂದು ಸಂಸತ್ ಅಧಿವೇಶನ: ಸದಸ್ಯರ ಪ್ರಮಾಣ ವಚನ ಸ್ವೀಕಾರಕ್ಕೆ ಹೊಸ ಲೋಕಸಭೆ ಸಜ್ಜು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 − fifteen =
Remember me
