ಬೆಂಗಳೂರು:ಯು.ಎಸ್. ಮಿಷನ್ ಇಂಡಿಯಾ ಚಾರ್ಜೆ ಡಿ’ ಅ‍ಫೇರ್ಸ್ ಪೆಟ್ರೀಷಿಯಾ ಲಸಿನಾ ಅವರು ಆಗಸ್ಟ್ 10ರಂದು ಬೆಂಗಳೂರಿನ ವಾಣಿಜ್ಯೋದ್ಯಮ ನೇತಾರರು ಮತ್ತು ಉದ್ಯಮಿಗಳನ್ನು ಭೇಟಿ ಮಾಡಿ ಅಮೆರಿಕ- ಭಾರತದ ನಡುವಿನ ಸುಭದ್ರ ಆರ್ಥಿಕ ಮತ್ತು ವಾಣಿಜ್ಯ ಒಡನಾಟದ ಬಗ್ಗೆ ಸಂವಾದ ನಡೆಸಿದರು. ಚಾರ್ಜೆ ಲಸಿನಾ ಅವರು ಸೆಪ್ಟಂಬರ್‌ 2021ರಲ್ಲಿ ಅಧಿಕಾರ ವಹಿಸಿಕೊಂಡಿದ್ದು, ಅವರು ಬೆಂಗಳೂರಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಸಲ.
ಚಾರ್ಜೆ ಅವರೊಂದಿಗೆ ಚೆನ್ನೈನ ಯು.ಎಸ್.ಕಾನ್ಸಲ್ ಜನರಲ್ ಜುಡಿತ್ ರೇವಿನ್ ಮತ್ತು ಯು.ಎಸ್.ನ್ಯಾಷನಲ್ ಸೈನ್ಸ್ ಫೌಂಡೇಷನ್(ಎನ್‌ಎಸ್‌ಎಫ್) ನಿರ್ದೇಶಕ ಡಾ. ಸೇತುರಾಮನ್ ಪಂಚನಾಥನ್ ಉಪಸ್ಥಿತರಿದ್ದರು. ವಾಣಿಜ್ಯ ಮತ್ತು ಉದ್ಯಮ ನಾಯಕರಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ಚಾರ್ಜೆ ಲಸಿನಾ ಹತ್ತಾರು ಸಾವಿರ ಭಾರತದ ನಾಗರಿಕರನ್ನು ಔಪಚಾರಿಕ ವಲಯದಲ್ಲಿ ಉನ್ನತ ಗುಣಮಟ್ಟದ ಕೆಲಸದ ಪರಿಸರಗಳಲ್ಲಿ ಉದ್ಯೋಗ ನೀಡಿರುವ ಬೆಂಗಳೂರಿನಲ್ಲಿರುವ 650ಕ್ಕೂ ಹೆಚ್ಚು ಯು.ಎಸ್. ಕಂಪನಿಗಳ ಕೊಡುಗೆ ಸ್ಮರಿಸಿದ ಅವರು, ಈ ಮೂಲಕ ಆರ್ಥಿಕ ಸಂಬಂಧ ಮತ್ತು ಬಂಡವಾಳದ ಮೂಲಕವಷ್ಟೇ ಅಲ್ಲದೇ ಕಾರ್ಪೋರೇಟ್‌ ಸಾಮಾಜಿಕ ಹೊಣೆಗಾರಿಕೆ ಉಪಕ್ರಮಗಳ ಮೂಲಕ ಮತ್ತು ಉದ್ಯೋಗಿಗಳ ಕೌಶಲ ಅಭಿವೃದ್ಧಿಗೆ ಬದ್ಧತೆಯ ಮೂಲಕ ನೀಡುತ್ತಿರುವ ಅಪಾರ ಕೊಡುಗೆಯನ್ನು ಶ್ಲಾಘಿಸಿದರು.
ಈ ವರ್ಷ ನಮ್ಮ ಎರಡೂ ದೇಶಗಳು 75 ವರ್ಷಗಳ ರಾಜತಾಂತ್ರಿಕ ಬಾಂಧವ್ಯ ಮತ್ತು ವಿಶ್ವಾಸಾರ್ಹ ಪಾಲುದಾರಿಕೆಯನ್ನು ಸಂಭ್ರಮಾಚರಣೆ ಮಾಡುತ್ತಿದ್ದು, ನಾವು ಯು.ಎಸ್.-ಭಾರತ ಸಹಯೋಗವನ್ನು ಅಧ್ಯಕ್ಷ ಬೈಡೆನ್ ಅವರು ಇತ್ತೀಚೆಗೆ ಹೇಳಿದಂತೆ `ನಮ್ಮ ಜನರು, ಕೌಟುಂಬಿಕ ಬಾಂಧವ್ಯಗಳು, ಮಿತ್ರತ್ವ ಮತ್ತು ಹಂಚಿಕೊಂಡ ಮೌಲ್ಯಗಳ ಮೂಲಕ ಗಟ್ಟಿಗೊಂಡಿರುವ ಆಳವಾದ ಸಂಪರ್ಕವನ್ನು ಸಂಭ್ರಮಿಸುತ್ತಿದ್ದೇವೆ. ಯು.ಎಸ್. ಮತ್ತು ಭಾರತದ ಉದ್ಯಮಗಳ ನಡುವೆ ಈ ಸಮಾನ ಮೌಲ್ಯಗಳಿಂದಾಗಿ ಅಮೆರಿಕ ಮತ್ತು ಭಾರತದ ಕಂಪನಿಗಳು ಜತೆಯಾಗಿ ಸುಲಲಿತವಾಗಿ ಕೆಲಸ ಮಾಡುವ ಮೂಲಕ, ಆವಿಷ್ಕಾರ ಮತ್ತು ಸಮೃದ್ಧಿಯತ್ತ ಮುನ್ನಡೆಯುತ್ತಿವೆ ಎಂದು ಜಾರ್ಜೆ ಹೇಳಿದರು.
ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರಗಳಲ್ಲಿ ಸದೃಢ ಸಹಯೋಗವನ್ನು ವಿಸ್ತರಿಸುವ ಉದ್ದೇಶದಿಂದ ಬೆಂಗಳೂರಿಗೆ ಭೇಟಿ ನೀಡಿರುವ ಎನ್‌ಎಸ್‌ಎಫ್ ನಿರ್ದೇಶಕ ಡಾ.ಪಂಚನಾಥನ್, ಮೂಲತಃ ಚೆನ್ನೈ ನಿವಾಸಿ. ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್ ಸೈನ್ಸ್​​ನ ಪದವೀಧರರಾಗಿರುವ ಡಾ.ಪಂಚನಾಥನ್ ಯು.ಎಸ್. ಮತ್ತು ಭಾರತದ ವಿಶ್ವವಿದ್ಯಾಲಯಗಳ ಪ್ರಯೋಗಾಲಯಗಳಲ್ಲಿ 35 ಸಹಯೋಗದ ಸಂಶೋಧನಾ ಯೋಜನೆಗಳಿಗೆ ಎನ್‌ಎಸ್‌ಎಫ್ ಅನುದಾನ ಪ್ರಕಟಿಸಲು ಭಾರತಕ್ಕೆ ಬಂದಿದ್ದಾರೆ.
ಡಾ.ಪಂಚನಾಥನ್ ಅವರ ಮಾರ್ಗದರ್ಶನದಲ್ಲಿ ವಿಸ್ತಾರ ಶ್ರೇಣಿಯ ವೈಜ್ಞಾನಿಕ ವಲಯಗಳಲ್ಲಿ ಆವಿಷ್ಕಾರದಲ್ಲಿ ಅಮೆರಿಕವನ್ನು ಮುಂಚೂಣಿಗೆ ತರುವ ಉದ್ದೇಶವನ್ನು ಎನ್ಎಸ್‌ಎಫ್ ಹೊಂದಿದೆ. ಎನ್‌ಎಸ್‌ಎಫ್ ಇತ್ತೀಚೆಗೆ ಪ್ರಮುಖ ಶಾಸನ ತಂದಿದ್ದು, ಅದರಂತೆ ಮೂಲಭೂತ ಸಂಶೋಧನೆಯ ಎಲ್ಲ ಕ್ಷೇತ್ರಗಳಿಗೂ ಅನುದಾನ ನೀಡಿ ಬೆಂಬಲಿಸುವುದಲ್ಲದೆ, ತಂತ್ರಜ್ಞಾನ, ಆವಿಷ್ಕಾರ ಮತ್ತು ಸಹಭಾಗಿತ್ವದ ಮೂಲಕ ಸಂಶೋಧನೆಯನ್ನು ಅನ್ವಯಿಕತೆಗೆ ವಿಸ್ತರಿಸುತ್ತದೆ. ಡಾ.ಪಂಚನಾಥನ್ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯಲ್ಲಿ ಡಾ.ಎಂ.ಎ.ಗೋವಿಂದ್ ರಾವು ಫೌಂಡರ್ ಸ್ಮಾರಕ ಉಪನ್ಯಾಸ ನೀಡಿದರು.
ಚಾರ್ಜೆ ಲಸಿನಾ ಅವರು ಇದೇ ಸಂದರ್ಭದಲ್ಲಿ ಹೊಸ ಕಾನ್ಸುಲರ್‌ ಫಾರ್‌ ಕಮರ್ಷಿಯಲ್‌ ಅಫೇರ್ಸ್ ಕ್ಯಾರೀ ಅರುಣ್ ಅವರನ್ನು ಪರಿಚಯಿಸಿದರು. ಚೆನ್ನೈನಲ್ಲಿರುವ ಕ್ಯಾರಿ ಅರುಣ್ ಅವರು ದಕ್ಷಿಣ ಭಾರತದ ಯು.ಎಸ್. ಕಮರ್ಷಿಯಲ್ ಸರ್ವೀಸ್‌ನ ಉಸ್ತುವಾರಿ ವಹಿಸಿದ್ದು, ಅಮೆರಿಕ ಮತ್ತು ಭಾರತದ ವ್ಯಾಪಾರ ಮತ್ತು ವಾಣಿಜ್ಯ ಅವಕಾಶಗಳನ್ನು ಬೆಂಬಲಿಸಲಿದ್ದಾರೆ. ಯು.ಎಸ್. ಕಮರ್ಷಿಯಲ್ ಸರ್ವಿಸ್​ ಚೆನ್ನೈ ಮತ್ತು ಬೆಂಗಳೂರಿನಲ್ಲಿ ಕಚೇರಿಗಳನ್ನು ಹೊಂದಿದೆ.
ಆದಾಯ ತೆರಿಗೆ ಪಾವತಿಸುತ್ತಿದ್ದರೆ ನಿಮಗೆ ಈ ಯೋಜನೆಯ ಪ್ರಯೋಜನ ಸಿಗಲ್ಲ; ಹೊಸ ಆದೇಶ ಎಂದಿನಿಂದ ಜಾರಿ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 3 =
Remember me
