ತಿರುವನಂತಪುರಂ:ರಾಜಕೀಯ ಎಂದಮೇಲೆ ಆರೋಪ-ಪ್ರತ್ಯಾರೋಪಗಳು ಸಹಜ. ಟೀಕೆ-ಪ್ರತಿಟೀಕೆಗಳಿಂದಲೇ ರಾಜಕಾರಣಿಗಳು ಸದ್ದು ಮಾಡುವುದು ಕೂಡ ಅಷ್ಟೇ ಸಾಮಾನ್ಯ. ಈಗ ಒಬ್ಬ ರಾಜಕಾರಣಿಯನ್ನು ದೇಶದ ಅತಿಭ್ರಷ್ಟ ಮುಖ್ಯಮಂತ್ರಿ ಎಂದು ಒಂದು ಪಕ್ಷದ ಮುಖಂಡರೊಬ್ಬರು ಆರೋಪ ಮಾಡಿದ್ದಾರೆ.
ಅವರು ಅತಿಭ್ರಷ್ಟ ಮುಖ್ಯಮಂತ್ರಿ ಮಾತ್ರವಲ್ಲ, ದೇಶದ ವಿವಿಧ ತನಿಖಾ ಏಜೆನ್ಸಿಗಳು ಅವರ ಮನೆಯ ಬಾಗಿಲು ತಟ್ಟುತ್ತಿರುವುದರಿಂದ ಪುಕ್ಕಲರು ಕೂಡ ಆಗಿದ್ದಾರೆ. ಹೀಗೊಂದು ಆರೋಪಕ್ಕೆ ಈಡಾಗಿರುವುದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್​. ಈ ಆರೋಪವನ್ನು ಮಾಡಿರುವುದು ಕೇರಳದ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್. ಕಾಂಪ್ಟ್ರಾಲರ್ ಆ್ಯಂಡ್​ ಆಡಿಟರ್ ಜನರಲ್ ಆಫ್​ ಇಂಡಿಯಾ (ಸಿಎಜಿ) ಬಗ್ಗೆ ವಿಜಯನ್ ಇತ್ತೀಚೆಗೆ ಮಾಡಿರುವ ಟೀಕೆ ಹಿನ್ನೆಲೆಯಲ್ಲಿ ಸುರೇಂದ್ರನ್​ ಈ ಆರೋಪ ಮಾಡಿದ್ದಾರೆ.
ಕಾಂಪ್ಟ್ರಾಲರ್ ಆ್ಯಂಡ್​ ಆಡಿಟರ್ ಜನರಲ್ ಆಫ್​ ಇಂಡಿಯಾ (ಸಿಎಜಿ)ಯನ್ನು ಕೇಂದ್ರ ಸರ್ಕಾರ ರಾಜಕೀಯಕ್ಕೆ ಬಳಸುತ್ತಿದೆ ಎಂದು ಮುಖ್ಯಮಂತ್ರಿಯೊಬ್ಬರು ಟೀಕೆ ಮಾಡುತ್ತಿರುವುದು ಅಚ್ಚರಿ ಹಾಗೂ ವಿಚಿತ್ರ ಎನಿಸುತ್ತಿದೆ. ಇದುವರೆಗೂ ಯಾವುದೇ ವಿರೋಧ ಪಕ್ಷ ಕೂಡ ಇಂಥದ್ದೊಂದು ಆರೋಪ ಮಾಡಿರಲಿಲ್ಲ. ಡ್ರಾಫ್ಟ್​ನಲ್ಲಿ ಇರದ್ದನ್ನು ಸಿಎಜಿ ತನ್ನ ಅಂತಿಮ ವರದಿಯಲ್ಲಿ ಹೇಳಿದೆ ಎನ್ನುವುದನ್ನು ಯಾರೇ ಆಗಲಿ ಹಾಗೇ ಊಹೆ ಮೇಲೆ ಹೇಳಲು ಹೇಗೆ ಸಾಧ್ಯ? ಅಂದರೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಆ ವರದಿ ಅಧಿವೇಶನದಲ್ಲಿ ಮಂಡನೆ ಆಗುವ ಮುನ್ನವೇ ಅದನ್ನು ನೋಡಿದ್ದಾರೆ ಎಂದರ್ಥ ಎಂದಿರುವ ಸುರೇಂದ್ರನ್​, ಈ ಮೂಲಕ ಪಿಣರಾಯಿ ವಿಜಯನ್ ಆಡಳಿತಕ್ಕೆ ಸಂಬಂಧಿಸಿದ ರಹಸ್ಯವನ್ನು ಕಾಪಾಡುವ ನಿಯಮ ಉಲ್ಲಂಘಿಸಿದ್ದಾರೆ ಎಂದು ಹೇಳಿದ್ದಾರೆ. (ಏಜೆನ್ಸೀಸ್​)
ರಸ್ತೆ ತೆರಿಗೆಯಲ್ಲಿ ಶೇ. 50 ಮನ್ನಾ; ವಾಣಿಜ್ಯ ವಾಹನ ಮಾಲೀಕರಿಗೆ ಸಂತೋಷದ ಸುದ್ದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 2 =
Remember me
