ಲಖನೌ:ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಗುರುವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಇರ್ಫಾನ್, ವಹಿದುನ್ ನಿಶಾ, ಅಜೀಜ್ ಅಹ್ಮದ್ (ಅಲಿಯಾಸ್ ಬುದ್ಧ), ತಾಹಿರಾ ಬಾನೋ ಮತ್ತು ಸಬ್ರೀನ್ ಎಂದು ಗುರುತಿಸಲಾಗಿದೆ, ಎಲ್ಲರೂ ಬಾರಾಬಂಕಿ ಜಿಲ್ಲೆಯ ಒಂದೇ ಕುಟುಂಬದವರು. ಕಾರು ಚಾಲಕ ವಿವೇಕ್ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
बाराबंकी में एक और भीषण सड़क हादसा, बैट्री रिक्शा से अंतिम संस्कार में शामिल होने जा रहे एक ही परिवार को बेकाबू कार ने रौंदा। कार तालाब में गई और सवारी रोड पर गिर गई. पिछे से आ रही ट्रक ने सबको कुचलते हुए 5 लोगों को मौत की नींद सुला दी, 4 गंभीर घायल हैं#Barabanki#Accidentpic.twitter.com/LMLSlzRrIl
ಇದನ್ನೂ ಓದಿ:ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಕೋಮು ದ್ವೇಷವಲ್ಲ: ಮುಹಮ್ಮದ್​ ಯೂನಸ್​
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮೆಹಮೂದಾಬಾದ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಲಖನೌ ಕಡೆಗೆ ವೇಗವಾಗಿ ತೆರಳುತ್ತಿದ್ದ ಕಾರೊಂದು ಮೊದಲಿಗೆ ಆಟೋಗೆ ಡಿಕ್ಕಿ ಹೊಡೆದಿದೆ. ಬಳಿಕ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಎರಡನೇ ಕಾರು ಸಮೀಪದ ಹೊಂಡಕ್ಕೆ ಹಾರಿದೆ.
ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಗಾಯಾಳುಗಳನ್ನು ರಕ್ಷಣೆ ಮಾಡಲು ಮುಂದಾದರು.  ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಚಿಕಿತ್ಸೆ ವೇಳೆ ಕೊನೆಯುಸಿರೆಳೆದಿದ್ದಾರೆ. ಮೃತರೆಲ್ಲರೂ ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಟೋದಲ್ಲಿ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − three =
Remember me
