ಮುಂಬೈ:ನಗರದ ವರ್ಲಿಯಲ್ಲಿ ಸಂಭವಿಸಿದ್ದ ಬಿಎಂಡಬ್ಲ್ಯು ಕಾರು ಅಪಘಾತ ಪ್ರಕರಣದಲ್ಲಿ ದಾದರ್ ಸೆವ್ರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿ ಶಿವಸೇನಾ ನಾಯಕ ರಾಜೇಶ್ ಶಾ ಅವರಿಗೆ 15,000 ನಗದು ಪಾವತಿಸಿ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ ಎಂದು ಎಎನ್‌ಐ ವರದಿ ಮಾಡಿದೆ.
ಇದನ್ನೂ ಓದಿ:ಜೀರುಂಡೆ, ಮಿಡತೆ, ರೇಷ್ಮೆಹುಳು ಸೇರಿದಂತೆ 16 ಕೀಟಗಳ ಸೇವನೆಗೆ ಈ ದೇಶದಲ್ಲಿ ಅನುಮತಿ..!
ಇದಕ್ಕೂ ಮುನ್ನ ಇದೇ ನ್ಯಾಯಾಲಯ ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಎಂದು ಆದೇಶ ನೀಡಿತ್ತು. ಬಳಿಕ ಆರೋಪಿಯ ತಂದೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅವರ ಚಾಲಕ ರಾಜರುಷಿ ಬಿಡಾವತ್ ಅವರನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. 45 ವರ್ಷದ ಮಹಿಳೆಯ ಸಾವಿಗೆ ಕಾರಣವಾದ ಹಿಟ್ ಅಂಡ್ ರನ್ ಘಟನೆಯಲ್ಲಿ ಭಾಗಿಯಾಗಿದ್ದ ಮಿಹಿರ್ ಶಾಗೆ ಸ್ಥಳದಿಂದ ಪರಾರಿಯಾಗಲು ಸಹಾಯ ಮಾಡಿದ್ದಕ್ಕಾಗಿ ಅವರನ್ನು ಬಂಧಿಸಲಾಯಿತು.
ಮುಂಬೈನ ವರ್ಲಿ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಮಹಿಳೆಯೊಬ್ಬರು ತಮ್ಮ ದ್ವಿಚಕ್ರ ವಾಹನಕ್ಕೆ ಬಿಎಂಡಬ್ಲ್ಯು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ತಲೆಮರೆಸಿಕೊಂಡಿರುವ ಸಿಎಂ ಏಕನಾಥ್ ಶಿಂಧೆ ಅವರ ಶಿವಸೇನೆಯ ನಾಯಕರೊಬ್ಬರ ಪುತ್ರ ಮಿಹಿರ್ ಶಾ ಈ ಕಾರನ್ನು ಓಡಿಸಿದ್ದರು ಎನ್ನಲಾಗಿದೆ. ಶಾ ಮತ್ತು ಬಿಡಾವತ್ ಅವರು ಮರೈನ್ ಡ್ರೈವ್‌ನಲ್ಲಿ ಲಾಂಗ್ ಡ್ರೈವ್‌ನಿಂದ ಮನೆಗೆ ಮರಳುತ್ತಿದ್ದರು.
ಮಹಿಳೆಯೊಬ್ಬರನ್ನು ಕೊಂದ ಹಿಟ್ ಅಂಡ್ ರನ್ ಪ್ರಕರಣದ ಆರೋಪಿ ಮಿಹಿರ್ ಶಾ ಅವರ ತಂದೆ ರಾಜೇಶ್ ಶಾ ಅಪಘಾತದ ನಂತರ ತನ್ನ 24 ವರ್ಷದ ಮಗನಿಗೆ ಹಲವು ಬಾರಿ ಕರೆ ಮಾಡಿದ್ದಾರೆ ಎಂದು ವರ್ಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಘಟನೆಗೂ ಮುನ್ನ ಮಿಹಿರ್ ಸ್ನೇಹಿತರೊಂದಿಗೆ ಜುಹುವಿನ ಪಬ್‌ನಲ್ಲಿ ಪಾರ್ಟಿ ಮಾಡುತ್ತಿದ್ದ. ರಾತ್ರಿ ಆತನ ಜೊತೆಗಿದ್ದ ಮೂವರು ಸ್ನೇಹಿತರ ಹೇಳಿಕೆಯನ್ನು ಪೊಲೀಸರು ತೆಗೆದುಕೊಂಡಿದ್ದಾರೆ.
ಮುಂಬೈ ನಗರದ ವರ್ಲಿಯ ಡಾ. ಅನ್ನಿ ಬೆಸೆಂಟ್ ರಸ್ತೆಯಲ್ಲಿ ಮಿಹಿರ್ ಶಾ ಅವರು ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ನಂತರ ತಲೆಮರೆಸಿಕೊಂಡಿರುವ ಮಿಹಿರ್ ಶಾ ಅವರನ್ನು ಪತ್ತೆ ಮಾಡಲು ಮುಂಬೈ ಪೊಲೀಸರು 14 ತಂಡಗಳನ್ನು ರಚಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಮಿಹಿರ್‌ಗಾಗಿ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ.
45 ವರ್ಷದ ಕಾವೇರಿ ನಖ್ವಾ ಅವರು ತಮ್ಮ ಪತಿ ಪ್ರದೀಪ್ ಅವರೊಂದಿಗೆ ಅನ್ನಿ ಬೆಸೆಂಟ್ ರಸ್ತೆಯಲ್ಲಿ ಸವಾರಿ ಮಾಡುತ್ತಿದ್ದಾಗ ಐಷಾರಾಮಿ ಕಾರೊಂದು ಮುಂಜಾನೆ 5:30 ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿದೆ ಎಂದು ವರ್ಲಿ ಪೊಲೀಸರು ತಿಳಿಸಿದ್ದಾರೆ.
45 ವರ್ಷದ ಕಾವೇರಿ ನಖ್ವಾ ಅವರು ತಮ್ಮ ಪತಿ ಪ್ರದೀಪ್ ಅವರೊಂದಿಗೆ ಅನ್ನಿ ಬೆಸೆಂಟ್ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ ಐಷಾರಾಮಿ ಕಾರೊಂದು ಮುಂಜಾನೆ 5:30 ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಗುದ್ದಿದೆ. ಕಾವೇರಿ ರಸ್ತೆಗೆ ಬಿದ್ದಿದ್ದು, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ. ಆಕೆಯ ಪತಿಗೆ ಚಿಕಿತ್ಸೆ ನೀಡಿ ನಂತರ ಬಿಡುಗಡೆ ಮಾಡಲಾಗಿದೆ ಎಂದು ವರ್ಲಿ ಪೊಲೀಸರು ತಿಳಿಸಿದ್ದಾರೆ.
ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ; ಕಾರಣ ನಿಗೂಢ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
