ಮುಂಬೈ:ತನ್ನ ಮೊದಲ ಸಲ ಋತುಸ್ರಾವ ಸಂಭವಿಸಿದಾಗ ಉಂಟಾದ ನೋವು ತಾಳಲಾರದೇ ಮುಂಬೈನ 14 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮುಂಬಯಿನ ಮಲಾಡ್ ಪ್ರದೇಶದಲ್ಲಿ ಮಾರ್ಚ್ 26ರಂದು ಈ ಹೃದಯ ವಿದ್ರಾವಕ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಹುಡುಗಿಗೆ ಋತುಚಕ್ರದ ಬಗ್ಗೆ ಯಾವುದೇ ಜ್ಞಾನವಿಲ್ಲದೇ ಇರುವುದು ಸಾವಿಗೆ ಪ್ರಮುಖ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ನೋವು ನಿವಾರಕ ಮಾತ್ರೆ ಸೇವಿಸುತ್ತಾ ಹಾಸಿಗೆಯಲ್ಲಿದ್ದೆ: ಕಣ್ಣೀರಿಟ್ಟ ರಿಯಾನ್ ಪರಾಗ್!
ತನ್ನ ಮೊದಲ ಅವಧಿಯ ಋತುಸ್ರಾವವಾದಾಗ ಬಗ್ಗೆ ತನ್ನ ಕುಟುಂಬ ಸದಸ್ಯರಿಗೆ ತಿಳಿಸಿದ್ದಳು. ಇದಲ್ಲದೆ ಮುಟ್ಟಿನ ನೋವಿನಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು ನೋವು ತಡೆದುಕೊಳ್ಳಲಾಗದೆ ಬಾಲಕಿ ಚಡಪಡಿಸಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ಕುಟುಂಬದವರು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಆದರೆ ಬರುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಯಾವುದೇ ದುಷ್ಕೃತ್ಯ ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟೋತ್ತಿಗಾಗಲೇ ಬಾಲಕಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಯಾವುದೇ ದುಷ್ಕೃತ್ಯ ಕಂಡುಬಂದಿಲ್ಲದ ಕಾರಣ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಬಾಲಕಿಯ ಕುಟುಂಬ ಸದಸ್ಯರು ಮತ್ತು ಶಾಲೆ ಮತ್ತು ಸ್ಥಳೀಯ ಸ್ನೇಹಿತರ ಹೇಳಿಕೆಗಳನ್ನು ಪಡೆದು ತನಿಖೆ ಆರಂಭಿಸಿದ್ದಾರೆ.
ಈ ಘಟನೆಯು ಋತುಚಕ್ರದ ಬಗ್ಗೆ ಹದಿಹರೆಯದವರಲ್ಲಿ ಅರಿವಿಲ್ಲದಿರುವುದು ಮತ್ತು ತಪ್ಪು ಮಾಹಿತಿಯ ಬಗ್ಗೆ ಕಳವಳವನ್ನು ಉಂಟುಮಾಡಿದೆ. ಮುಟ್ಟಿನ ಬಗ್ಗೆ ಹದಿಹರೆಯದವರೊಂದಿಗೆ ಸರಿಯಾದ ಸಮಾಲೋಚನೆಯನ್ನು ಹೊಂದುವ ಅಗತ್ಯವನ್ನು ಮತ್ತು ಅದನ್ನು ಹೇಗೆ ಎದುರಿಸಬೇಕೆಂಬುದನ್ನು ಇದು ಒತ್ತಿಹೇಳುತ್ತದೆ.
ಕಾಂಗ್ರೆಸ್‌ಗೆ ಮತ್ತೆ ಶಾಕ್​: ಆದಾಯ ತೆರಿಗೆ ಇಲಾಖೆಯಿಂದ 1,700 ಕೋಟಿ ರೂ. ಮೊತ್ತದ ನೋಟಿಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
