ನವದೆಹಲಿ:ಎಲ್ಲರ ಚಿತ್ತ ಅಯೋಧ್ಯೆ ರಾಮ ಮಂದಿರದ ಮೇಲಿದೆ. ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾಗಲಿದೆ. ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ಅಯೋಧ್ಯೆ ಈಗಾಗಲೇ ಸಜ್ಜಾಗುತ್ತಿದೆ. ಇತ್ತ ರಾಮನ ಭಕ್ತಿಯಲ್ಲಿ ಮುಳುಗಿದ ಯುವತಿಯೊಬ್ಬಳು ಇದೀಗ ಎಲ್ಲರ ಗಮನ ಸೆಳೆಯುತ್ತಿದ್ದಾಳೆ.
ರಾಮನ ಭಕ್ತಿಯಲ್ಲಿ ಮುಳುಗಿರುವ ಶಬ್ನಂ ಭುಜದ ಮೇಲೆ ಕೇಸರಿ ಧ್ವಜ, ಬೆನ್ನಿನಲ್ಲಿ ರಾಮ ಮಂದಿರದ ಫೋಟೋ ಮತ್ತು ತಲೆ ಮೇಲೆ ಹಿಜಾಬ್ ಧರಿಸಿರುವ ಯುವತಿ. ಮುಂಬೈನಿಂದ ತನ್ನ ಇಬ್ಬರು ಸ್ನೇಹಿತರೊಂದಿಗೆ ಸುಮಾರು 1,500 ಕಿ.ಮೀ ದೂರ ಕ್ರಮಿಸಿ ಅಯೋಧ್ಯೆ  ಶ್ರೀರಾಮನ ದರ್ಶನ ಪಡೆಯಲಿದ್ದಾರೆ. ಇಲ್ಲಿಯವರೆಗೆ ಶಬನಂ ಇನ್ನೂರೈವತ್ತು ಕಿಲೋಮೀಟರ್ ಕ್ರಮಿಸಿ ನಾಸಿಕ್ ತಲುಪಿದ್ದಾಳೆ. ಅಕಾಶ ಸಿಕ್ಕರೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡುವುದಾಗಿ ಶಬನಂ ಹೇಳಿದ್ದಾರೆ.
ಶಬನಂಗೆ ರಾಮನನ್ನು ನೋಡುವ ಆಸೆ. ಶಬನಂಗೆ ಬಾಲ್ಯದಿಂದಲೂ ರಾಮಾಯಣದ ಅಭಿರುಚಿ ಇತ್ತು. ಅವರು ಸಂಪೂರ್ಣ ಮಹಾಭಾರತ ಧಾರಾವಾಹಿಯನ್ನು ವೀಕ್ಷಿಸಿದ್ದಾರೆ. ರಾಮಾಯಣ ಮತ್ತು ಮಹಾಭಾರತಗಳು ಅವಳ ಜೀವನದ ಮೇಲೆ ಬಹಳ ಪ್ರಭಾವ ಬೀರಿದವು. ಅವಳು ಶ್ರೀರಾಮನನ್ನು ತನ್ನ ರೋಲ್ ಮಾಡೆಲ್ ಎಂದು ಪರಿಗಣಿಸುತ್ತಾಳೆ. ಆಕೆಯ ಕುಟುಂಬಸ್ಥರೂ ಆಕೆಯನ್ನು ಅಯೋಧ್ಯೆಗೆ ಹೋಗುವಂತೆ ಪ್ರೋತ್ಸಾಹಿಸಿದರು. ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ನಂತರ ಅಯೋಧ್ಯೆಯ ಧನಿಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಮಸೀದಿಗೆ ತೆರಳಲಿದ್ದಾರೆ. ಈ ಮೂಲಕ ತನಗೆ ಎರಡೂ ಧರ್ಮಗಳಲ್ಲಿ ಆಸಕ್ತಿ ಇದೆ ಎಂಬ ಸಂದೇಶವನ್ನು ಸಾರಲು ಹೊರಟಿದ್ದಾಳೆ. ಆಕೆಯ ಭದ್ರತೆಗಾಗಿ ಮಹಾರಾಷ್ಟ್ರ ಸರ್ಕಾರ ಮೂವರು ಮಹಿಳಾ ಪೊಲೀಸರನ್ನು ನಿಯೋಜಿಸಿದೆ.
ತನಗೆ ರಾಮಾಯಣ ಮತ್ತು ಭಗವಾನ್ ಶ್ರೀರಾಮನಲ್ಲಿ ತುಂಬಾ ಆಸಕ್ತಿ ಇದೆ ಎಂದು ಪ್ರತಿಕ್ರಿಯಿಸಿದ್ದಾರೆ. ಅದೇ ರೀತಿ ಅಯೋಧ್ಯೆಗೆ ಹೋಗಿ ಶ್ರೀರಾಮಚಂದ್ರನ ಕುರಿತು ಇನ್ನಷ್ಟು ತಿಳಿದುಕೊಳ್ಳುವುದು ತನ್ನ ಮಹತ್ವಾಕಾಂಕ್ಷೆಯಾಗಿದೆ ಎಂದು ಶಬನಮ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕೆಲಸದಿಂದ ನಾನು ಸ್ಫೂರ್ತಿ ಪಡೆದಿದ್ದೇನೆ ಎಂದು ಶಬನಮ್ ಹೇಳಿದ್ದಾರೆ.
‘ಬಾ ಬಾರೋ ರಸಿಕ’ ನಟಿ ಆಶಿತಾ ಈಗಲೂ ಸಖತ್​ ಬೋಲ್ಡ್​; ಫೋಟೋ ನೋಡಿದ್ರೆ ಕಳೆದು ಹೋಗುವುದು ಪಕ್ಕಾ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × four =
Remember me
