ಮೈಸೂರು:ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಕರ್ನಾಟಕದ ಹೆಮ್ಮೆಯ ಶಿಲ್ಪಿ ಮೈಸೂರಿನ ಸಿದ್ದಾಂತಿ ಅರುಣ್‌ ಯೋಗಿರಾಜ್‌ ಕೆತ್ತಿದ ಶ್ರೀರಾಮ ಮೂರ್ತಿ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲು ಆಯ್ಕೆಯಾಗಿದೆ.
ಇದನ್ನೂ ಓದಿರಿ:ಉಜ್ವಲಾ ಯೋಜನೆಯ ಫಲಾನುಭವಿ ಮನೆಗೆ ಪ್ರಧಾನಿ ದಿಢೀರ್​ ಭೇಟಿ; ಹಮ್ಮುಬಿಮ್ಮಿಲ್ಲದೆ ಚಹಾ ಸೇವಿಸಿದ ಮೋದಿ
ಕರ್ನಾಟಕ ಹೆಮ್ಮೆ:ಮೈಸೂರಿನ ಹಿರಿಯ ಶಿಲ್ಪ ಕಲಾವಿದರ ಕುಟುಂಬದ ಐದನೇ ತಲೆಮಾರಿನ ಕುಡಿಯಾಗಿರುವ ಅರುಣ್‌ ಯೋಗಿರಾಜ್‌ ಅವರು ಕೆತ್ತಿರುವ ರಾಮನ ವಿಗ್ರಹವನ್ನು ಅಯೋಧ್ಯೆ ರಾಮಮಂದಿರ ಸಮಿತಿಯು ಆಯ್ಕೆ ಮಾಡಿದೆ. ಈ ಮೂಲಕ ಕರ್ನಾಟಕಕ್ಕೂ ಹೆಮ್ಮೆಪಡುವ ಕ್ಷಣ ಬಂದಿದೆ.ಹೊಸ ವರ್ಷದ ದಿನವೇ ಆಯೋಧ್ಯೆ ರಾಮಮಂದಿರ ಸಮಿತಿಯು ಖುದ್ದು ಅರುಣ್‌ ಯೋಗಿರಾಜ್‌ ಅವರಿಗೆ ಕರೆ ಮಾಡಿ ನೀವು ರೂಪಿಸಿದ ವಿಗ್ರಹವನ್ನೇ ಆಯ್ಕೆ ಮಾಡಲಾಗಿದೆ ಎನ್ನುವ ಸಂದೇಶವನ್ನು ರವಾನಿಸಿದೆ. ಇದನ್ನು ಖುದ್ದು ಅರುಣ್‌ ಯೋಗಿರಾಜ್‌ ಅವರೇ ಖಚಿತಪಡಿಸಿದ್ದಾರೆ.
ಮೂವರಲ್ಲಿ ಒಬ್ಬರದ್ದು ಅಂತಿಮ:ಕಳೆದ ವರ್ಷವೇ ರಾಮನವಿಗ್ರಹ ತಯಾರಿಸಲು ದೇಶದ ಹಲವಾರು ಕಲಾವಿದರನ್ನು ಆಯ್ಕೆ ಮಾಡಲಾಗಿತ್ತು.ಇವರು ಕಳುಹಿಸಿದ ಮಾದರಿಗಳನ್ನು ಗುರುತಿಸಿ ಕೊನೆಗೆ ಕರ್ನಾಟಕದ ಇಬ್ಬರು ಹಾಗೂ ರಾಜಸ್ಥಾನದ ಒಬ್ಬರು ಕಲಾವಿದರ ಹೆಸರು ಅಂತಿಮಗೊಳಿಸಲಾಗಿತ್ತು. ಇದರಲ್ಲಿ ಅರುಣ್‌ ಯೋಗಿರಾಜ್‌, ಜಿ.ಎಸ್.‌ಭಟ್‌ ಕರ್ನಾಟಕದವರಾದರೇ. ಸಂಜಯ್‌ ಪಾಂಡೆ ಎನ್ನುವ ಕಲಾವಿದರು ರಾಜಸ್ಥಾನದವರು. ಈ ಮೂವರು ತಾವು ಕೆತ್ತಿದ್ದ ಮೂರ್ತಿಗಳನ್ನು ತೆಗೆದುಕೊಂಡು ಹೋಗಿದ್ದರು. ಇದರಲ್ಲಿ ಅತ್ಯುತ್ತಮ ಎನ್ನುವ ರೀತಿಯಲ್ಲಿರುವ ಅರುಣ್‌ ರೂಪಿಸಿದ 25 ಅಡಿ ಎತ್ತರದ ವಿಗ್ರಹವನ್ನು ಅಂತಿಮಗೊಳಿಸಲಾಗಿದೆ. ಈಗಾಗಲೇ ಅರುಣ್‌ ಯೋಗಿ ರಾಜ್‌ ಅವರು ಕೆಲ ದಿನಗಳ ಹಿಂದೆ ರೂಪಿಸಿದ್ದ ಎರಡು ಪ್ರಮುಖ ಮೂರ್ತಿಗಳು ಪ್ರತಿಷ್ಠಾಪನೆಗೊಂಡಿವೆ. ಉತ್ತರ ಭಾರತದ ಪ್ರಮುಖ ಸ್ಥಳಗಳಲ್ಲಿ ಪ್ರತಿಷ್ಠಾಪನೆಗೊಂಡಿವೆ. ಉತ್ತರಾಖಂಡದ ಕೇದಾರನಾಥಕ್ಕೆ 12 ಅಡಿ ಆದಿ ಶಂಕರಾಚಾರ್ಯರ ವಿಗ್ರಹ ಹಾಗೂ ಭಾರತ ಸರ್ಕಾರ ದೆಹಲಿ ಇಂಡಿಯಾ ಗೇಟ್ ನಲ್ಲಿ ಸ್ಥಾಪಿಸಿರುವ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಏಕಶಿಲೆಯ ಕಪ್ಪು ಗ್ರಾನೈಟ್ ಕಲ್ಲಿನ ಶಿಲ್ಪ ಕೂಡ ಅರುಣ್‌ ಯೋಗಿರಾಜ್‌ ನಿರ್ಮಿಸಿದ್ದೇ.
ಯಾರು ಈ ಯೋಗಿರಾಜ್‌:ಮೈಸೂರಿನ ಐದು ತಲೆಮಾರಿನ ಪ್ರಸಿದ್ಧ ಶಿಲ್ಪಿಗಳ ಕೌಟುಂಬಿಕ ಹಿನ್ನೆಲೆ ಹೊಂದಿರುವ ಅರುಣ್ ಯೋಗಿರಾಜ್ ಪ್ರಸ್ತುತ ದೇಶದ ಬಹುಬೇಡಿಕೆಯ ಶಿಲ್ಪಿ.ಅರುಣ್ ಅವರ ಕೈಚಳಕದಿಂದ ಸಾಧಕರ ಪ್ರತಿಮೆಗಳು ತಲೆ ಎತ್ತಬೇಕು ಎಂಬ ಬೇಡಿಕೆಯಿಂದಾಗಿ ದೇಶದ ವಿವಿಧ ರಾಜ್ಯಗಳು ಅರುಣ್ ಅವರನ್ನು ಹುಡುಕಿಕೊಂಡು ಬರುತ್ತಿವೆ. ತನಗೆ ಸಿಕ್ಕ ಅವಕಾಶಗಳ ಸಮರ್ಥ ಬಳಕೆಗೆ ಬಂದಾಗ ಅರುಣ್ ಉದ್ಯಮಶೀಲ. ಹೀಗಾಗಿಯೇ ದೇಶದ ನಾನಾ ರಾಜ್ಯಗಳಲ್ಲಿ ಇವರ ಕಲೆಗೆ ಬೇಡಿಕೆ ಸೃಷ್ಟಿಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅರುಣ್ ಅವರ ಪ್ರತಿಭೆಯನ್ನು ಶ್ಲಾಘಿಸಿದ್ದಾರೆ. ಅರುಣ್ ತಂದೆ ಯೋಗಿರಾಜ್ ಕೂಡ ನುರಿತ ಶಿಲ್ಪಿ. ಕೆಲ ದಿನಗಳ ಹಿಂದೆಯಷ್ಟೇ ಅವರು ಮೃತಪಟ್ಟಿದ್ದಾರೆ. ಅವರ ಅಜ್ಜ ಬಸವಣ್ಣ ಶಿಲ್ಪಿಯಾಗಿದ್ದು, ಮೈಸೂರು ರಾಜರಿಂದ ಪೋಷಕರಾಗಿದ್ದರು. ಈ ತಲೆಮಾರಿನವರಾದ ಅರುಣ್ ಯೋಗಿರಾಜ್ ಅವರು ಬಾಲ್ಯದಿಂದಲೂ ಕೆತ್ತನೆಯಲ್ಲಿ ತೊಡಗಿಸಿಕೊಂಡಿದ್ದರು.ಎಂಬಿಎ ಮುಗಿಸಿದ ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಕಾಲ ಕೆಲಸ ಮಾಡುತ್ತಿದ್ದರು. ಆದರೆ ಉದ್ದಕ್ಕೂ ಅವನಲ್ಲಿ ಸಹಜವಾಗಿಯೇ ಇದ್ದ ಶಿಲ್ಪಕಲೆ ವೃತ್ತಿಯ ಕೌಶಲದಿಂದ ತಪ್ಪಿಸಿಕೊಳ್ಳಲಾಗಲಿಲ್ಲ. ಹೀಗಾಗಿ 2008ರಿಂದ ಕೆತ್ತನೆ ವೃತ್ತಿ ಮುಂದುವರಿಸಿ ಹದಿನೈದು ವರ್ಷದಲ್ಲಿ ಹೆಮ್ಮೆಯ ಸಾಧನೆ ಮಾಡಿದ್ದಾರೆ.ಕೈಯಿಂದ ಕೆತ್ತಿದ ಮಂಟಪಗಳು, ವಿವಿಧ ಕಲ್ಲಿನ ಕಂಬದ ಕೆಲಸಗಳು ಮತ್ತು ಇನ್ನೂ ಅನೇಕ ಶಿಲ್ಪಗಳನ್ನು ಅರುಣ್‌ಹಲವಾರು ಕೆತ್ತನೆಗಳು:ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಚುಂಚುನಕಟ್ಟೆಯಲ್ಲಿ ಹೊಯ್ಸಳ ಶೈಲಿ 21 ಅಡಿ ಏಕಶಿಲೆಯ ಕಲ್ಲಿನ ಹನುಮಾನ್ ಶಿಲ್ಪಮೈಸೂರಿನ ಪುರಭವನ ಎದುರು 15 ಅಡಿ ಏಕಶಿಲೆಯ ಬಿಳಿ ಅಮೃತಶಿಲೆಯ ಡಾ.ಬಿ.ಆರ್.ಅಂಬೇಡ್ಕರ್ ಅವರ ಪೀಠದೊಂದಿಗೆ ಶಿಲ್ಪ, ಮೈಸೂರಿನಲ್ಲಿ ಭಾರತದ ಅತಿ ದೊಡ್ಡ 10 ಅಡಿ ಏಕಶಿಲೆಯ ಬಿಳಿ ಅಮೃತಶಿಲೆಯ ಶ್ರೀ ರಾಮಕೃಷ್ಣ ಪರಮಹಂಸರ ಶಿಲ್ಪ, ಮೈಸೂರಿನಲ್ಲಿ 15 ಅಡಿ ಏಕಶಿಲೆಯ ಬಿಳಿ ಅಮೃತಶಿಲೆಯ ಮಹಾರಾಜರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಪೀಠದೊಂದಿಗೆ ಶಿಲ್ಪ, ಮೈಸೂರು ವಿಶ್ವವಿದ್ಯಾನಿಲಯದಲ್ಲಿ “ಕ್ರಿಯೇಶನ್ ಆಫ್ ಕ್ರಿಯೇಶನ್” ಪರಿಕಲ್ಪನೆಯಲ್ಲಿ 11 ಅಡಿ ಏಕಶಿಲೆಯ ಆಧುನಿಕ ಕಲಾ ಕಲ್ಲಿನ ಶಿಲ್ಪ, ಬೆಂಗಳೂರಿನ ಇಸ್ರೋದಲ್ಲಿ ಯು ಆರ್ ರಾವ್ ಅವರ ಕಂಚಿನ ಪ್ರತಿಮೆ, ಮೈಸೂರಿನಲ್ಲಿ 5 ಅಡಿಯ ಗರುಡ ದೇವರ ವಿಗ್ರಹ, ಕೆಆರ್ ನಗರದಲ್ಲಿ 7 ಅಡಿ ಎತ್ತರದ ಯೋಗಾನರಸಿಂಹ ಸ್ವಾಮಿ ದೇವರ ವಿಗ್ರಹ, ಸರ್ ಎಂ.ವಿಶ್ವೇಶ್ವರಯ್ಯನವರ ಅಸಂಖ್ಯಾತ ಪ್ರತಿಮೆಗಳು, ಪಂಚಮುಖಿ ಗಣಪತಿ, ಭಗವಾನ್ ಮಹಾವಿಷ್ಣು, ದೇವರು ಬುದ್ಧ, ನಂದಿ, ಸ್ವಾಮಿ ಶಿವಬಾಲ ಯೋಗಿ, ಶಿವಕುಮಾರ ಸ್ವಾಮೀಜಿ ಮತ್ತು ಬನಶಂಕರಿ ದೇವಿ ಸೇರಿ ನೂರಾರು ಶಿಲ್ಪಿಗಳನ್ನು ಕೆತ್ತಿದ ಕೀರ್ತಿ ಅವರಿಗೆ ಸಲ್ಲುತ್ತದೆ.ಕರ್ನಾಟಕದ ಹೆಮ್ಮೆಯ ಶಿಲ್ಪಿ ಮೈಸೂರಿನ ಶ್ರೀ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಶ್ರೀರಾಮನ ಮೂರ್ತಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದ್ದು, ಶ್ರೀರಾಮನ ವಿಗ್ರಹ ಕೆತ್ತನೆಗೆ ಬಳಸಲಾದ ಕಲ್ಲು ಸಹ ನಮ್ಮ ಕರ್ನಾಟಕದ ಎಚ್.ಡಿ.ಕೋಟೆಯದ್ದು ಎಂಬುದು ಮತ್ತೊಂದು ವಿಶೇಷ.
ಬಿ.ವೈ.ವಿಜಯೇಂದ್ರ, ಅಶೋಕ್‌ ಟ್ವೀಟ್‌:ಕರ್ನಾಟಕದ ಹೆಮ್ಮೆಯ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಶ್ರೀರಾಮನ ಮೂರ್ತಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದ್ದು, ಶ್ರೀರಾಮನ ವಿಗ್ರಹ ಕೆತ್ತನೆಗೆ ಬಳಸಲಾದ ಕಲ್ಲು ಸಹ ನಮ್ಮ ಕರ್ನಾಟಕದ ಎಚ್.ಡಿ.ಕೋಟೆಯದ್ದು ಎಂಬುದು ಮತ್ತೊಂದು ವಿಶೇಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿ ಪಕ್ಷನಾಯಕ ಆರ್‌.ಅಶೋಕ್‌ ಅಭಿನಂದಿಸಿದ್ದಾರೆ.
ಜೈ ಶ್ರೀರಾಮ ರಸಪ್ರಶ್ನೆ ಸ್ಪರ್ಧೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
