ನವದೆಹಲಿ:ವಿವಿಧ ರಾಜ್ಯ ಘಟಕಗಳ ಉಸ್ತುವಾರಿಯನ್ನು ಕಳೆದ ವಾರ ವಹಿಸಿಕೊಂಡ ನೂತನ ಪದಾಧಿಕಾರಿಗಳ ಜತೆಗಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಮೊದಲ ಸಭೆ ಗುರುವಾರ ನಡೆಯಲಿದೆ. ಮುಂದಿನ ವರ್ಷ ಪೂರ್ವಾರ್ಧದಲ್ಲಿ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಕಾರಣ ಈ ಸಭೆ ಮಹತ್ವದ್ದೆನಿಸಿದೆ.
ಜೆಪಿ ನಡ್ಡಾ ಅವರು ಕಳೆದವಾರ ಪಕ್ಷದ ವಿವಿಧ ರಾಷ್ಟ್ರೀಯ ಪದಾಧಿಕಾರಿಗಳನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಉಸ್ತುವಾರಿಗಳನ್ನಾಗಿ ಘೋಷಿಸಿದ್ದರು. ಬಹುತೇಕ ಹೊಸ ಮುಖಗಳು ಪಟ್ಟಿಯಲ್ಲಿದ್ದು, ಪಕ್ಷ ಸಂಘಟನೆಯ ವಿಚಾರದಲ್ಲಿ ಎಲ್ಲರಿಗೂ ಹೊಸ ಸವಾಲು ಎದುರಾಗಿದೆ. ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಇದಕ್ಕೆ ಪಕ್ಷ ಸಂಘಟನಾ ಮಟ್ಟದಲ್ಲಿ ಹೇಗೆ ತಯಾರಿ ನಡೆಸಬೇಕೆಂಬ ವಿಚಾರವೂ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ.
ಇದನ್ನೂ ಓದಿ:ಡಿ.5ರಂದು ಕರ್ನಾಟಕ ಬಂದ್​ಗೆ ಕರೆ: ಮುಖ್ಯಮಂತ್ರಿ ಏನೆಂದ್ರು?
ಪಶ್ಚಿಮ ಬಂಗಾಳ ಚುನಾವಣೆಯನ್ನು ಆದ್ಯತೆಯ ಮೇರೆಗೆ ಪರಿಗಣಿಸಿದ್ದು, ಅಲ್ಲಿ ಆಡಳಿತ ಚುಕ್ಕಾಣಿ ಹಿಡಿಯುವ ನಿಟ್ಟಿನಲ್ಲಿ ಹೆಚ್ಚಿನ ಗಮನಕೇಂದ್ರೀಕರಿಸಿದೆ. ಕಳೆದ ವರ್ಷ ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಆಡಳಿತಾರೂಢ ತೃಣಮೂಲ ಕಾಂಗ್ರೆಸ್​ಗೆ ಬಿಜೆಪಿ ನೇರ ಸವಾಲು ಒಡ್ಡತೊಡಗಿದೆ. ಅಸ್ಸಾಂನಲ್ಲಿ ಪಕ್ಷವೇ ಅಧಿಕಾರದಲ್ಲಿರುವ ಕಾರಣ ಹೆಚ್ಚಿನ ಪ್ರಯತ್ನ ಬೇಕಾಗಿಲ್ಲ ಎಂಬುದು ಸದ್ಯದ ಲೆಕ್ಕಾಚಾರ. ಇದೇ ರೀತಿ, ತಮಿಳುನಾಡಿನಲ್ಲಿ ಆಡಳಿತಾರೂಢ ಎಐಎಡಿಎಂಕೆ ಮತ್ತು ಡಿಎಂಕೆ ಪಕ್ಷಗಳ ಪ್ರಾಬಲ್ಯದ ನಡುವೆ ತಮ್ಮ ನೆಲೆ ಕಂಡುಕೊಳ್ಳಲು ಬಿಜೆಪಿ ನಾಯಕರು ಪ್ರಯತ್ನಿಸಿದ್ದಾರೆ. ಕೇರಳದಲ್ಲೂ ಇದೇ ಸ್ಥಿತಿ ಇದ್ದು, ಹೆಚ್ಚಿನ ಪ್ರಯತ್ನ ನಡೆಸಲು ಪಕ್ಷದ ನಾಯಕತ್ವ ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ. (ಏಜೆನ್ಸೀಸ್)
ಬೃಹತ್ ಪ್ರಮಾಣದ ನಕಲಿ ನೋಟು – ನಾಲ್ವರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
