ನವದೆಹಲಿ:ಮನೆಕೆಲಸ ಮಾಡುತ್ತಿದ್ದ 12 ವರ್ಷದ ಬಾಲಕಿಗೆ ಈ ದಂಪತಿ ಬಿಸಿ ಬಾಣಲೆ, ಬಿಸಿ ಚಾಕು ಮತ್ತು ಸಿಗರೇಟುಗಳಿಂದ ಸುಟ್ಟು ಚಿತ್ರಹಿಂಸೆ ನೀಡಿದ ಘಟನೆ ನಾಗ್‍ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅದಕ್ಕಿಂತಲೂ ದುಃಖಕರ ಸಂಗತಿ ಏನೆಂದರೆ, ಈ ಜೋಡಿ ಬೆಂಗಳೂರಿಗೆ ಪ್ರಯಾಣಿಸುವಾಗ ನಾಲ್ಕು ದಿನಗಳ ಕಾಲ ಅವಳನ್ನು ಒಬ್ಬಂಟಿಯಾಗಿ ಬಿಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ನಾಗ್‍ಪುರದ ಅಥರ್ವ ನಗರಿ ಸೊಸೈಟಿಯಲ್ಲಿರುವ ದಂಪತಿಯ ಮನೆಯಲ್ಲಿ ಮನೆಕೆಲಸ ಮಾಡಲು ಬಾಲಕಿಯನ್ನು ಮೂರು ವರ್ಷಗಳ ಹಿಂದೆ ಬೆಂಗಳೂರಿನಿಂದ ಕರೆತರಲಾಗಿತ್ತು. ಎನ್‍ಜಿಒ ಕಾರ್ಯಕರ್ತೆ ಶೀತಲ್ ಪಾಟೀಲ್ ಅವರ ಪ್ರಕಾರ, ಹುಡುಗಿ ಕೆಲಸದಲ್ಲಿ ತಪ್ಪು ಮಾಡಿದರೆ ಉದ್ಯೋಗದಾತರು ಆಕೆಗೆ ಬಿಸಿ ಪ್ಯಾನ್ ಅಥವಾ ಸಿಗರೇಟುಗಳಿಂದ ಸುಡುತ್ತಿದ್ದರು.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಚಿತ್ರಹಿಂಸೆಯ ಲಕ್ಷಣಗಳು ಕಂಡುಬಂದಿವೆ ಎಂದು ಪೊಲೀಸ್ ಅಧಿಕಾರಿ ವಿಕ್ರಾಂತ್ ಸಂಗಾನೆ ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದು ಅವರು ಆರೋಪಿ ದಂಪತಿಯನ್ನು ಬಂಧಿಸಿ ನಾಗ್‍ಪುರ ಪೊಲೀಸರಿಗೆ ಒಪ್ಪಿಸಿದರು. ದಂಪತಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ನಾಗ್‍ಪುರಕ್ಕೆ ಕರೆತಂದ ನಂತರ ಬಾಲಕಿ ಶಿಕ್ಷಣ ಮತ್ತು ಆರೈಕೆಯನ್ನು ಒದಗಿಸುವುದಾಗಿ ಆರೋಪಿ ದಂಪತಿಗಳು ಬಾಲಕಿಯ ಪೋಷಕರಿಗೆ ಭರವಸೆ ನೀಡಿದ್ದರು ಎಂದು ವರದಿಯಾಗಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 1 =
Remember me
