ನವದೆಹಲಿ: 2016ರ ನವೆಂಬರ್ 8, ಯಾರಿಗೆ ತಾನೇ ನೆನಪಿರಲ್ಲ ಹೇಳಿ. ಅಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಲೈವ್ ಬಂದು ‘ಮಿತ್ರೋಂ’ ಎನ್ನುತ್ತ ಡಿಮಾನಿಟೈಸೇಷನ್​ ಬಗ್ಗೆ ಹೇಳಿದ್ದೇ ತಡ, ಇಡಿ ದೇಶಾದ್ಯಂತ ದೊಡ್ಡ ಸಂಚಲನವೇ ಸೃಷ್ಟಿ ಆಗಿತ್ತು.
ಅದಾಗಿ ಈಗ ನಾಲ್ಕು ವರ್ಷ. ಡಿಮಾನಿಟೈಸೇಷನ್​ ಕುರಿತು ಈ ನಡುವೆ ನಾನಾ ರೀತಿಯ ವ್ಯಾಖ್ಯಾನಗಳು, ಅಭಿಪ್ರಾಯಗಳು ಬಂದುಹೋಗಿವೆ. ಇದೀಗ ನಾಲ್ಕನೇ ವರ್ಷದ ಸಂದರ್ಭದಲ್ಲಿ ಪ್ರತಿಪಕ್ಷ ಡಿಮಾನಿಟೈಸೇಷನ್ ವಿಷಯದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿದ ಬೆನ್ನಿಗೇ ಪ್ರಧಾನಿ ಅದಕ್ಕೆ ತಕ್ಕ ಉತ್ತರವನ್ನೇ ನೀಡಿದ್ದಾರೆ.
ಡಿಮಾನಿಟೈಸೇಷನ್​ ಕಪ್ಪು ಹಣವನ್ನು ಕಡಿಮೆ ಮಾಡುವಲ್ಲಿ, ತೆರಿಗೆ ಪಾವತಿ ಹೆಚ್ಚಿಸುವಲ್ಲಿ ಹಾಗೂ ಪಾರದರ್ಶಕತೆಯನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ. ತೆರಿಗೆ ಪಾವತಿಸದೇ ಇರುವ 13 ಸಾವಿರ ಕೋಟಿ ರೂ.ಗೂ ಮಿಕ್ಕಿದ ಸೆಲ್ಫ್​ ಅಸೆಸ್​​ಮೆಂಟ್​ ಟ್ಯಾಕ್ಸ್​ ತೆರಿಗೆ ಇದರಿಂದಾಗಿಯೇ ಸಂಗ್ರಹವಾಗಿದೆ. ಮಾತ್ರವಲ್ಲ ನಗದು ಚಲಾವಣೆ ಕೂಡ ಕಡಿಮೆಯಾಗಿದೆ. ಇದರಿಂದ ಉಗ್ರ ಹಾಗೂ ಎಡಪಂಥೀಯ ಸಂಘಟನೆಗಳಿಗೆ ಹೋಗುತ್ತಿದ್ದ ಆರ್ಥಿಕ ನೆರವು ಕೂಡ ತಗ್ಗಿದೆ ಎಂದಿದ್ದಾರೆ ಮೋದಿ. (ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve + 20 =
Remember me
