ನವದೆಹಲಿ:ಚೀನಾದಲ್ಲಿ ವೇಗವಾಗಿ ಹರಡುವ ಮೂಲಕ ಮತ್ತೆ ಮರಣ ಮೃದಂಗ ಬಾರಿಸುತ್ತಿರುವ ಒಮಿಕ್ರಾನ್​ ಬಿಎಫ್​-7 ರೂಪಾಂತರಿ, ಭಾರತದಲ್ಲೂ ಆತಂಕ ಸೃಷ್ಟಿಸಿದೆ. ಇದು ಅಪಾಯಕಾರಿ ತಳಿ ಎಂದೂ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ಮಾಸ್ಕ್​ ಕಡ್ಡಾಯ ಸೇರಿದಂತೆ ಕೋವಿಡ್​ ಮಾರ್ಗಸೂಚಿಯನ್ನು ಹೊರಡಿಸಿದೆ.
ಮಾಸ್ಕ್​ ಮತ್ತು ಸ್ಯಾನಿಟೈಸರ್​ ಸೇರಿದಂತೆ ಕೋವಿಡ್​ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್​ ಮಾಡಂವೀಯ ಹೇಳಿದ್ದಾರೆ. ಯಾರು ಲಸಿಕೆ ತೆಗೆದುಕೊಂಡಿಲ್ಲವೋ ಅವರು ತಕ್ಷಣ ಲಸಿಕೆಯನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಕೋವಿಡ್​ ಭೀತಿ ಆವರಿಸಿರುವ ಸಂದರ್ಭದಲ್ಲಿ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ ರೋಗನಿರೋಧಕ ಕೋವಿಡ್-19 ಕಾರ್ಯಕಾರಿ ಗುಂಪಿನ ಮುಖ್ಯಸ್ಥ ಡಾ. ಎನ್​.ಕೆ ಅರೋರಾ ಅವರು ಹೊಸ ಕರೊನಾ ರೂಪಾಂತರಿ ಬಗ್ಗೆ ಸಾರ್ವಜನಿಕರು ಯಾವುದೇ ಆತಂಕಪಡಬೇಕಿಲ್ಲ ಎಂದು ಧನಾತ್ಮಕ ಮಾತುಗಳನ್ನಾಡಿದ್ದಾರೆ.
ಭಾರತೀಯ ವೈದ್ಯಕೀಯ ಸಂಘದ ಪ್ರತಿನಿಧಿ ಡಾ. ಅನಿಲ್​ ಗೋಯೆಲ್​ ಮಾತನಾಡಿ, ದೇಶದ ಶೇ. 95 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಹೀಗಾಗಿ ಲಾಕ್​ಡೌನ್​ನ ಅವಶ್ಯಕತೆ ಇಲ್ಲ ಎಂದಿದ್ದಾರೆ. ಅಲ್ಲದೆ, ಚೀನಾ ಮಂದಿಗಿಂತ ಭಾರತೀಯರಲ್ಲಿ ಪ್ರತಿರೋಧಕ ವ್ಯವಸ್ಥೆ ಉತ್ತಮವಾಗಿದೆ. ಹೀಗಾಗಿ ಕರೊನಾ ಭಾರತೀಯರನ್ನು ಹೆಚ್ಚು ಬಾಧಿಸುವುದಿಲ್ಲ ಎಂಬ ಭರವಸೆ ತುಂಬಿದ್ದಾರೆ.
ಭಾರತೀಯರು ಹೈಬ್ರಿಡ್ ನಿರೋಧಕ ಶಕ್ತಿಯನ್ನು ಹೊಂದಿದ್ದಾರೆ ಮತ್ತು ನೈಸರ್ಗಿಕ ಕೋವಿಡ್ ವೈರಸ್ ದೇಶದ ಶೇ. 90 ಜನಸಂಖ್ಯೆಯ ಮೇಲೆ ಪರಿಣಾಮ ಬೀರಿದೆ. ಭಾರತದಲ್ಲಿನ ಜನರು ಹೈಬ್ರಿಡ್ ಇಮ್ಯುನಿಟಿ ಲಸಿಕೆಯನ್ನು ಪಡೆದಿದ್ದಾರೆ. INSACOG ಡೇಟಾ ಪ್ರಕಾರ, ಪ್ರಪಂಚದ ಇತರ ಭಾಗಗಳಲ್ಲಿ ಕಂಡುಬರುವ ಒಮಿಕ್ರಾನ್​ನ ಉಪ-ವರ್ಗಗಳ ಎಲ್ಲಾ ರೂಪಾಂತರಗಳು ಭಾರತದಲ್ಲಿವೆ. ಹೀಗಾಗಿ ಹೆದರುವ ಅವಶ್ಯಕತೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.(ಏಜೆನ್ಸೀಸ್​)
ಮೈಮಾಟ ಪ್ರದರ್ಶಿಸಲು ಹೋಗಿ ಎಡವಟ್ಟು: ದುಬೈನಲ್ಲಿ ಬೋಲ್ಡ್​ ಬ್ಯೂಟಿ ಉರ್ಫಿ ಜಾವೇದ್​ ಬಂಧನ

ವೇದ ಚಿತ್ರದ ರೆಬೆಲ್ ಲೇಡೀಸ್!

ಮುನ್ನೆಚ್ಚರಿಕೆ ಕ್ರಮಕ್ಕೆ ರಾಜ್ಯಗಳಿಗೆ ಸೂಚನೆ; ಬೂಸ್ಟರ್ ಡೋಸ್ ಹೆಚ್ಚಳ | ಸಂಸತ್ತಿನಲ್ಲಿ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹೇಳಿಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen + 1 =
Remember me
