ನವದೆಹಲಿ:ಇಂದು ಪ್ರಧಾನಿ ನರೇಂದ್ರ ಮೋದಿಯವರು 51 ಸಾವಿರ ಯುವಕರಿಗೆ ನೇಮಕಾತಿ ಪತ್ರ ಹಸ್ತಾಂತರಿಸುತ್ತಿದ್ದಾರೆ. ಇತ್ತ ಕಡೆ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ಮಿಜೋರಾಂ ಮತ್ತು ತೆಲಂಗಾಣದ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಜನರ ಕಣ್ಣುಗಳು ಈ ರಾಜ್ಯಗಳ ಮೇಲೆ ನೆಟ್ಟಿವೆ. ಈ ಹಿನ್ನೆಲೆಯಲ್ಲಿ ಇಂದು ದೇಶ ಮತ್ತು ಜಗತ್ತಿನಲ್ಲಿ ನಡೆಯಲಿರುವ ಪ್ರಮುಖ ಘಟನೆಗಳ ಸಂಕ್ಷಿಪ್ತ ಮಾಹಿತಿ ಕೊಡಲಾಗಿದೆ ನೋಡಿ….
*ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 1 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸುಮಾರು 51 ಸಾವಿರ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿಯವರು ಉದ್ಯೋಗ ಪಡೆಯುವ ಯುವಜನತೆ ಉದ್ದೇಶಿಸಿ ಮಾತನಾಡಲಿದ್ದಾರೆ.
*ಐಸಿಸಿ ವಿಶ್ವಕಪ್ 2023 ರಲ್ಲಿ ದಕ್ಷಿಣ ಆಫ್ರಿಕಾವು ಪಾಕಿಸ್ತಾನವನ್ನು 1 ವಿಕೆಟ್‌ನಿಂದ ಸೋಲಿಸಿತು. ಈ ಪಂದ್ಯವನ್ನು ಗೆಲ್ಲುವ ಮೂಲಕ, ದಕ್ಷಿಣ ಆಫ್ರಿಕಾ ತಂಡವು ವಿಶ್ವಕಪ್ 2023 ರ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ತಲುಪಿತು. ಭಾರತ ತಂಡ ಎರಡನೇ ಸ್ಥಾನಕ್ಕೆ ಕುಸಿದಿದೆ. ಇದೇ ವೇಳೆ ಪಂದ್ಯದ ಸೋಲಿನ ಬಳಿಕ ಪಾಕಿಸ್ತಾನ ತಂಡ ಸೆಮಿಫೈನಲ್​​​​ಗೆ ಬರುವ ಆಸೆಗೆ ಹಿನ್ನಡೆಯಾಗಿದೆ.
*ರಷ್ಯಾದ ಪಡೆಗಳು ಶುಕ್ರವಾರ ದಕ್ಷಿಣ ಉಕ್ರೇನಿಯನ್ ನಗರವಾದ ಖೆರ್ಸನ್ ಮೇಲೆ ಶೆಲ್ ದಾಳಿ ನಡೆಸಿದ್ದು, ಎಂಟು ಜನರು ಗಾಯಗೊಂಡಿದ್ದಾರೆ ಮತ್ತು ಕನಿಷ್ಠ 15 ಕಟ್ಟಡಗಳನ್ನು ನಾಶಪಡಿಸಿದ್ದಾರೆ ಅಥವಾ ಹಾನಿಗೊಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಫೋಟೋಗಳಲ್ಲಿ ಕನಿಷ್ಠ ಮೂರು ಸೈಟ್‌ಗಳು ಭಗ್ನಾವಶೇಷಗಳಿಂದ ತುಂಬಿವೆ ಮತ್ತು ಕಟ್ಟಡದ ಒಳಭಾಗ ನಿರ್ಮಾಣ ಸಾಮಗ್ರಿಗಳು ಮತ್ತು ಇತರ ಅವಶೇಷಗಳಿಂದ ಆವೃತವಾಗಿವೆ.
*ಇಸ್ರೇಲ್ ಹಮಾಸ್​​​ ಯುದ್ಧ:ಅನೇಕ ಭಯೋತ್ಪಾದಕರು ಗಾಜಾ ಆಸ್ಪತ್ರೆಯಲ್ಲಿ ಅಡಗಿಕೊಂಡಿದ್ದಾರೆ ಎಂದು ಹೇಳಲಾಗಿದೆ.ಸೇನೆಯ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗೇರಿ, “ಗಾಜಾ ಪಟ್ಟಿಯಲ್ಲಿರುವ ಈ ಅತಿದೊಡ್ಡ ಆಸ್ಪತ್ರೆಯ ಅಡಿಯಲ್ಲಿ, ಹಮಾಸ್ ಹಲವಾರು ಬ್ಲಾಕ್‌ಗಳನ್ನು ಹೊಂದಿದ್ದು, ಅಲ್ಲಿ ಹಲವು ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.  ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಟ್ವಿಟರ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ.
Hamas-ISIS is sick.
They turn hospitals into headquarters for their terror.
We just released intelligence proving it.
Here it is:pic.twitter.com/F82OxaIPN6
— Benjamin Netanyahu – בנימין נתניהו (@netanyahu)October 27, 2023

*ಬೆಲ್ಟ್ ಮತ್ತು ರೋಡ್ ಇನಿಶಿಯೇಟಿವ್ ಅಥವಾ ಬಿಆರ್​​ಐ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆ ಆರಂಭವಾಗಿ 10 ವರ್ಷಗಳು ಕಳೆದಿವೆ. ಈ ಸಂದರ್ಭದಲ್ಲಿ ಚೀನಾ ಇತ್ತೀಚೆಗೆ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದರು. ಮಾಸ್ಕೋ ಬಿಆರ್​​ಐ ಜೊತೆ ಅಧಿಕೃತ ಸಂಬಂಧವನ್ನು ಹೊಂದಿಲ್ಲವಾದರೂ, ಈವೆಂಟ್‌ನಲ್ಲಿ ಪುಟಿನ್ ಅವರ ಉಪಸ್ಥಿತಿಯು ವಿಶ್ವದ ಇಬ್ಬರು ನಿರಂಕುಶ ಆಡಳಿತಗಾರರು ಪರಸ್ಪರ ಹೇಗೆ ಹತ್ತಿರವಾಗುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ.
ರಾಜ್ಯಕಾರಣದಲ್ಲಿ ನಾರಿಶಕ್ತಿ: ಅರ್ಧಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮಹಿಳೆಯರೇ ಮುಂಚೂಣಿ; ಕರಡು ಮತದಾರರ ಪಟ್ಟಿಯಲ್ಲಿ ಹಲವು ಅಚ್ಚರಿ ಅಂಶ ಬೆಳಕಿಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
