ಛತ್ತೀಸಗಢ:19 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ, ಮೋಸ್ಟ್​ ವಾಂಟೆಡ್ ನಕ್ಸಲ್​ವೋರ್ವನನ್ನು ದಂತೇವಾಡದಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಕಾಟೆಕಲ್ಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಜಬ್ರಾಮೆಟ್ಟಾ ಅರಣ್ಯದಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್​ ಪೊಲೀಸರೊಂದಿಗೆ ಸೋಮವಾರ ಮಧ್ಯರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಈ ನಕ್ಸಲ್​ ಹತನಾಗಿದ್ದಾನೆ.
ಅರಣ್ಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಪಡೆಗಳನ್ನು ಗುರಿಯಾಗಿಸಿ ನಕ್ಸಲರು ದಾಳಿ ಮಾಡಿದಾಗ, ಡಿಆರ್​ಜಿ ಯೋಧರು ಪ್ರತಿದಾಳಿ ನಡೆಸಿದರು. ಆದರೆ, ಕತ್ತಲೆ ಇದ್ದುದರಿಂದ ಕೆಲ ನಕ್ಸಲರು ಪರಾರಿಯಾಗುವಲ್ಲಿ ಸಫಲರಾಗಿದ್ದಾರೆ. ನಂತರ ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ನಕ್ಸಲ್ ಓರ್ವನ ಮೃತದೇಹ ದೊರೆತಿದೆ. ಮೃತನನ್ನು ಬುಧರಾಮ್ ಮಾರ್ಕಮ್ ಎಂದು ಗುರುತಿಸಲಾಗಿದ್ದು, ಈತ ನಿಷೇಧಿತ ನಕ್ಸಲ್ ಸಂಘಟನೆಯ ಕಾಟೆಕಲ್ಯಾಣ ಪ್ರದೇಶದ ಸದಸ್ಯ ಎಂದು ತಿಳಿದು ಬಂದಿದೆ.
ಎಲ್ಲಾ ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದು, ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಭದ್ರತಾ ಪಡೆ ಅಧಿಕಾರಿಗಳು ಹೇಳಿದ್ದಾರೆ.
ಖಾತೆ ನಿಷೇಧಿಸಿದರೆ ನಮ್ಮ ಉದ್ಯಮವೇ ಇರಲ್ಲ ಎಂದ ಟ್ವಿಟ್ಟರ್​: ಅರ್ಜಿ ಕುರಿತು ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 8 =
Remember me
