ನವದೆಹಲಿ: ಬಿಹಾರದಲ್ಲಿ ಎನ್​ಡಿಎ ಮಿತ್ರ ಪಕ್ಷಗಳ ನಾಯಕರು ಪರಸ್ಪರ ದೋಷಾರೋಪಣೆ, ಭಿನ್ನಮತಗಳನ್ನು ವ್ಯಕ್ತಪಡಿಸುತ್ತಿದ್ದಾಗ್ಯೂ, ಎನ್​ಡಿಎ ನೇತೃತ್ವವಹಿಸಿಕೊಂಡಿರುವ ಬಿಜೆಪಿ ಭಿನ್ನಮತ ಶಮನಗೊಳಿಸುವ ವಿಶ್ವಾಸದಲ್ಲಿದೆ. ಬಿಹಾರದಲ್ಲಿ ಸಮೀಪಿಸುತ್ತಿರುವ ವಿಧಾನ ಸಭಾ ಚುನಾವಣೆಯಲ್ಲಿ ಆಡಳಿತಾರೂಢ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್​ (ಎನ್​ಡಿಎ)ನ ಎಲ್ಲ ಪಕ್ಷಗಳೂ ಒಗ್ಗಟ್ಟಾಗಿ ಸ್ಪರ್ಧಿಸಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸ್ಪಷ್ಟಪಡಿಸಿದ್ದಾರೆ.
ಬಿಹಾರದ ಬಿಜೆಪಿ ನಾಯಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ನಡ್ಡಾ, ಭಿನ್ನಮತಗಳು ಇರುವುದು ಸಹಜ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ. ಎನ್​ಡಿಎ ಮಿತ್ರಪಕ್ಷಗಳೆಲ್ಲವೂ ಒಟ್ಟಾಗಿಯೆ ಚುನಾವಣೆ ಎದುರಿಸೋಣ. ಚುನಾವಣಾ ಆಯೋಗ ಚುನಾವಣೆ ಯಾವಾಗ ನಡೆಸಬೇಕು ಎಂಬುದನ್ನು ತೀರ್ಮಾನಿಸುತ್ತದೆ. ಅದಕ್ಕೂ ಮೊದಲು ಸದ್ಯದ ಪರಿಸ್ಥಿತಿಯಲ್ಲಿ ಎಲ್ಲರೂ ಕರೊನಾ ವೈರಸ್ ಸಂಕಷ್ಟದಲ್ಲಿ ಜನರಿಗೆ ಸ್ಪಂದಿಸುವ ಕೆಲಸವನ್ನು ಮುಂದುವರಿಸಬೇಕು ಎಂದರು.
ಇದನ್ನೂ ಓದಿ:‘ರಬ್ಬರ್ ಸ್ಟ್ಯಾಂಪ್ ಸಿಎಂ’ ಆಗಿದ್ದೆ ಕಾಂಗ್ರೆಸ್ ಜತೆಗಿನ ಮೈತ್ರಿ ಸರ್ಕಾರದಲ್ಲಿ: ಎಚ್​.ಡಿ.ಕುಮಾರಸ್ವಾಮಿ ಹೇಳಿಕೆ!
ರಾಜ್ಯ ಸರ್ಕಾರದ ಆಡಳಿತಾವಧಿ ಅಕ್ಟೋಬರ್​-ನವೆಂಬರ್​ಗೆ ಮುಗಿಯಲಿದ್ದು, ಕೋವಿಡ್ -19 ಸೋಂಕು ದಿನೇದಿನೆ ಹೆಚ್ಚುತ್ತಿರುವ ಕಾರಣ ಚುನಾವಣೆ ಮುಂದೂಡಬೇಕು ಎಂಬ ಬೇಡಿಕೆ ರಾಜಕೀಯ ಪಕ್ಷಗಳ ನಾಯಕರು ಮುಂದಿಟ್ಟಿದ್ದಾರೆ. ವಿಪಕ್ಷ ಸ್ಥಾನದಲ್ಲಿರುವ ಆರ್​ಜೆಡಿ ಮತ್ತು ಬಿಜೆಪಿಯ ಮಿತ್ರ ಪಕ್ಷಗಳಲ್ಲಿ ಒಂದಾದ ಲೋಕ ಜನಶಕ್ತಿ ಪಕ್ಷಗಳ ನಾಯಕರು ಚುನಾವಣೆ ಮುಂದೂಡಬೇಕೆಂಬ ಬೇಡಿಕೆ ಇಟ್ಟವರು. ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಜೆ.ಪಿ.ನಡ್ಡಾ ಅವರು ಚುನಾವಣೆ ಯಾವಾಗ ನಡೆಸಬೇಕು ಎಂಬ ನಿರ್ಣಯವನ್ನು ಚುನಾವಣಾ ಆಯೋಗ ತೆಗೆದುಕೊಳ್ಳುತ್ತದೆ. ಅದು ಆಯೋಗದ ವಿವೇಚನೆಗೆ ಬಿಟ್ಟ ವಿಚಾರ ಎಂದರು. (ಏಜೆನ್ಸೀಸ್)
ಭಾರತದ ಮೇಲೆ ಜೈವಿಕಾಸ್ತ್ರ: ಪಾಕ್-ಚೀನಾ ನಡುವೆ ಮೂರು ವರ್ಷದ ರಹಸ್ಯ ಒಪ್ಪಂದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
