ಬೆಂಗಳೂರು:2023ರ ಕೇಂದ್ರ ಬಜೆಟ್​ಗೆ ಅನುಗುಣವಾಗಿ ಅಕ್ಟೋಬರ್​ 1ರಿಂದ ಜಾರಿಗೆ ಬರುವಂತೆ ಹಣಕಾಸು ಸ್ಥಿತಿಗತಿ ಮೇಲೆ ಪರಿಣಾಮ ಬಿರುವಂತಹ ಹಲವು ಸಮಗತಿಗಳು ನಡೆಯಲಿವೆ ಎಂದು ಹೇಳಲಾಗಿದೆ. ಹೀಗಾಗಿ ಅಕ್ಟೋಬರ್​ ಒಂದಕ್ಕೂ ಮೊದಲೇ ನೀವು ಅಪ್ಡೇಟ್​ ಮಾಡಿಸುವುದು ಒಳಿತು ಎಮದು ಹೇಳಲಾಗಿದೆ.
ಆಧಾರ್​ ಕಾರ್ಡ್​ನಲ್ಲಿ ವಿವರ ಬದಲಾವಣೆ, ಮ್ಯೂಚುವಲ್​ ಫಂಡ್, ಡಿಮ್ಯಾಟ್ ಅಥವಾ ಟ್ರೇಡಿಂಗ್​ ಖಾತೆಗಳಿಗೆ ನಾಮಿನಿಗಳ ನೇಮಕ ಅಥವಾ ಬದಲಾವಣೆ, ಟಿಸಿಎಸ್​ ನಿಯಮಗಳು, ಎರಡು ಸಾವಿರ ಮುಖಬೆಲೆಯ ನೋಟುಗಳ ಬದಲಾವಣೆ, ಜನನ-ಮರಣ ಪ್ರಮಾಣಪತ್ರ ಸಲ್ಲಿಕೆ ಮಾಡಬೇಕಾಗಿದೆ.
ಆಧಾರ್​ ಜೋಡಣೆ: ಸಾರ್ವಜನಿಕ ಭವಿಷ್ಯ ನಿಧಿ, ಸುಕನ್ಯಾ ಸಮೃದ್ಧಿ ಯೋಜನೆ, ಅಂಚೆ ಕಚೇರಿ ಠೇವಣಿ ಮತ್ತು ಇತರ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಿದವರು ಈ ತಿಂಗಳ ಅಂತ್ಯದೊಳಗೆ ತಮ್ಮ ಆಧಾರ್ ಸಂಖ್ಯೆಯನ್ನು ಅಂಚೆ ಕಚೇರಿ ಅಥವಾ ಬ್ಯಾಂಕ್ ಶಾಖೆಗೆ ಸಲ್ಲಿಸಬೇಕು. ಸೆಪ್ಟೆಂಬರ್ 30ರಂದು ಗಡುವು ನೀಡಲಾಗಿದೆ. ಇಲ್ಲದಿದ್ದಲ್ಲಿ ಈ ಹೂಡಿಕೆಗಳನ್ನು ಫ್ರೀಜ್ ಮಾಡುವ ಸಂಭವವಿದೆ.
ಮ್ಯೂಚುಯಲ್ ಫಂಡ್‌ಗಳಿಗೆ ನಾಮಿನಿ: ಅಸ್ತಿತ್ವದಲ್ಲಿರುವ ಎಲ್ಲಾ ಮ್ಯೂಚುಯಲ್ ಫಂಡ್​ಗಳಿಗೆ ನಾಮಿನಿಯ ಹಜೆಸರನ್ನು ಸೇರಿಸಲು ಸೆಪ್ಟೆಂಬರ್​ 30ರಂದು ಕೊನೆಯ ದಿನವಾಗಿದೆ. ಒಂದು ವೇಳೆ ಸೆಪ್ಟೆಂಬರ್​ 30ರ ಒಳಗಾಗಿ ನಾಮಿನಿಯನ್ನು ಹೆಸರಿಸಲು ವಿಫಲವಾದಲ್ಲಿ ಮ್ಯೂಚುವಲ್​ ಫಂಡ್​ಗಳನ್ನು ಡೆಬಿಟ್​ಗಳಾಗಿ ಫ್ರೀಜ್​ ಮಾಡಲಾಗುತ್ತದೆ.
ಇದನ್ನೂ ಓದಿ:ರಾಜಕೀಯ ಹಿತಾಸಕ್ತಿಗಾಗಿ ಕಾಂಗ್ರೆಸ್​ ರಾಜ್ಯದ ಹಿತವನ್ನು ಬಲಿಕೊಟ್ಟಿದೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಿಡಿ
ಟಿಸಿಎಸ್​ ನಿಯಮಗಳು: ಕ್ರೆಡಿಟ್​ ಕಾರ್ಡ್​ ಮೂಲಕ ಸಾಗರೋತ್ತರ ವೆಚ್ಚಗಳು ಏಳು ಲಕ್ಷ ರೂಪಾಯಿಗೂ ಹೆಚ್ಚು ಮೊತ್ತವನ್ನು ಖರ್ಚು ಮಾಡಿದ್ದರೆ ಅಕ್ಟೋಬರ್​ 1ರಿಂದ ಜಾರಿಗೆ ಬರುವಂತೆ ಶೇ.20ರಷ್ಟು ಟಿಸಿಎಸ್​ಗೆ ನೀವು ಒಳಪಡುತ್ತೀರಿ. ಒಂದು ವೇಳೆ ಕ್ರೆಡಿಟ್​ ಕಾರ್ಡ್​ಗಳನ್ನು ಶೈಕ್ಷಣಿಗೆ ಹಾಗೂ ವೈದ್ಯಕೀಯ ಉದ್ಧೇಶಗಳಿಗೆ ಬಳಸಿದ್ದರೆ ಶೇ.05ರಷ್ಟು ಟಿಸಿಎಸ್​ ವಿಧಿಸಲಾಗುತ್ತದೆ. ಕೇಂದ್ರವು 2023-24ರ ಬಜೆಟ್‌ನಲ್ಲಿ ಸಾಗರೋತ್ತರ ಪ್ರವಾಸ ಪ್ಯಾಕೇಜ್‌ ಮತ್ತು LRS ಅಡಿಯಲ್ಲಿ ರವಾನೆಯಾಗುವ ಹಣಕ್ಕೆ ಟಿಸಿಎಸ್​ ದರಗಳನ್ನು ಪ್ರಸ್ತುತ ಶೇ. 055ರಿಂದ ಶೇಕಡಾ 20ಕ್ಕೆ ಹೆಚ್ಚಿಸಿದೆ.
ಡಿಮ್ಯಾಟ್ ಅಥವಾ ಟ್ರೇಡಿಂಗ್​ ಖಾತೆಗಳಿಗೆ ನಾಮಿನಿ: ಅಸ್ತಿತ್ವದಲ್ಲಿರುವ ಟ್ರೇಡಿಂಗ್ ಮತ್ತು ಡಿಮ್ಯಾಟ್ ಖಾತೆದಾರರಿಗೆ ಫಲಾನುಭವಿಗಳನ್ನು ನಾಮನಿರ್ದೇಶನ ಮಾಡುವ ಗಡುವು ಸೆಪ್ಟೆಂಬರ್ 30ರಂದು ಕೊನೆಗೊಳ್ಳುತ್ತದೆ. ಅಕ್ಟೋಬರ್ 1ರ ನಂತರ ವಿವಿಧ ನಿಬಂಧನೆಗಳನ್ನು ವಿಧಿಸಲಾಗುತ್ತದೆ ಎಂದು ಹೇಳಲಾಗಿದೆ.
ನೋಟುಗಳ ವಿನಿಮಯ: ಮೇ 19ರಂದು ಭಾರತೀಯ ರಿಸರ್ವ್​ ಬ್ಯಾಂಕ್​ ಎರಡು ಸಾವಿರ ಮುಖಬೆಲೆಯ ನೋಟುಗಳ ಚಲಾವಣೆಯನ್ನು ಹಿಂಪಡೆದಿತ್ತು. ನಿಮ್ಮಲ್ಲಿ ಕೆಲವರು ಇನ್ನೂ ರೂ. 2000 ನೋಟುಗಳನ್ನು ಹೊಂದಿದ್ದರೆ, 30 ಸೆಪ್ಟೆಂಬರ್ 2023ರೊಳಗೆ ನೋಟುಗಳನ್ನು ಬದಲಾಯಿಸಲು ಗಡುವು ನಿಗದಿಪಡಿಸಿದೆ.
ಜನನ-ಮರಣ ಪ್ರಮಾಣಪತ್ರ ಸಲ್ಲಿಕೆ: ಹಣದ ವಿಷಯಗಳ ಹೊರತಾಗಿ, ಜನನ ಪ್ರಮಾಣಪತ್ರಗಳು ಮುಂದಿನ ತಿಂಗಳಿನಿಂದ ಆಧಾರ್ ಮತ್ತು ಸರ್ಕಾರಿ ಉದ್ಯೋಗಗಳಿಗೆ ಒಂದೇ ದಾಖಲೆಯಾಗಿ ಮಾರ್ಪಟ್ಟಿವೆ. ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯಿದೆ, 2023 ಅಕ್ಟೋಬರ್ 1, 2023 ರಿಂದ ದೇಶದಲ್ಲಿ ಜಾರಿಗೆ ಬರಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 14 =
Remember me
