ಬೆಂಗಳೂರು:ಹವಾಮಾನ ಇಲಾಖೆಯ ಪ್ರಕಾರ, ಡಿಸೆಂಬರ್ 30 ರಿಂದ ವೆಸ್ಟರ್ನ್ ಡಿಸ್ಟರ್ಬನ್ಸ್ ಸಕ್ರಿಯವಾಗಲಿದೆ, ಇದರಿಂದಾಗಿ ಅನೇಕ ರಾಜ್ಯಗಳಲ್ಲಿ ಮಳೆ ಆರಂಭವಾಗಲಿದೆ.
ಹೌದು, ದೇಶಾದ್ಯಂತ ನಡುಗುವ ಚಳಿಯ ನಡುವೆ ವಾತಾವರಣ ಮತ್ತೊಮ್ಮೆ ತಿರುವು ಪಡೆದುಕೊಳ್ಳಲಿದೆ. ಹವಾಮಾನ ಇಲಾಖೆ ಪ್ರಕಾರ, ಡಿಸೆಂಬರ್ ಅಂತ್ಯದ ವೇಳೆಗೆ ಪಾಶ್ಚಾತ್ಯ ಅಡಚಣೆ (ವೆಸ್ಟರ್ನ್ ಡಿಸ್ಟರ್ಬನ್ಸ್) ಉಂಟಾಗಲಿದ್ದು, ಈ ಕಾರಣದಿಂದಾಗಿ ಹಲವು ರಾಜ್ಯಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಐಎಂಡಿ ಪ್ರಕಾರ, ಡಿಸೆಂಬರ್ 30 ರಿಂದ ಈಶಾನ್ಯ ರಾಜ್ಯಗಳಲ್ಲಿ, ಇಂದಿನಿಂದ ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಮಳೆ ಮತ್ತೆ ಪ್ರಾರಂಭವಾಗಲಿದೆ.
ರಾಜಧಾನಿ ದೆಹಲಿಯಲ್ಲಿ ಮೊದಲಿಗಿಂತ ಚಳಿ ಹೆಚ್ಚಾಗಿದೆ. ಏತನ್ಮಧ್ಯೆ, ದೆಹಲಿ-ಎನ್‌ಸಿಆರ್‌ನಲ್ಲಿ ಇಂದು ಅಂದರೆ ಮಂಗಳವಾರ (ಡಿಸೆಂಬರ್ 26) ದಟ್ಟವಾದ ಮಂಜು ಕವಿದಿದ್ದು, ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಜನರು ಮನೆಯಿಂದ ಹೊರಬರುವ ಮುನ್ನ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಈ ಮಂಜು ಡಿಸೆಂಬರ್ 28 ರವರೆಗೆ ಇರುತ್ತದೆ ಎಂದು ಐಎಂಡಿ ಹೇಳಿದೆ. ದೆಹಲಿ-ಎನ್‌ಸಿಆರ್‌ನ ಎಕ್ಯೂಐ (ಗಾಳಿಯ ಗುಣಮಟ್ಟ) ಕುರಿತು ಹೇಳುವುದಾದರೆ ಇಲ್ಲಿ ಎಕ್ಯೂಐ ನಿರಂತರವಾಗಿ ‘ಅತ್ಯಂತ ಕಳಪೆ’ ವಿಭಾಗದಲ್ಲಿದೆ ಮತ್ತು 400 ರ ಆಸುಪಾಸಿನಲ್ಲಿ ಉಳಿದಿದೆ.
ಮುಂದಿನ 3 ರಿಂದ 4 ದಿನಗಳಲ್ಲಿ ವಾಯುವ್ಯ ಮತ್ತು ಮಧ್ಯ ಭಾರತದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದಲ್ಲದೆ, ಡಿಸೆಂಬರ್ 30 ರಿಂದ ಜನವರಿ 1, 2024 ರವರೆಗೆ ತಮಿಳುನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆ ಪ್ರಕಾರ, ಡಿಸೆಂಬರ್ 27 ರವರೆಗೆ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಅತ್ಯಂತ ದಟ್ಟವಾದ ಮಂಜು ಇರುವ ಸಾಧ್ಯತೆಯಿದೆ. ಹೀಗಾಗಿ ಇಂದು ರಾಜಸ್ಥಾನದ ವಿವಿಧ ಭಾಗಗಳಲ್ಲಿ ದಟ್ಟ ಮಂಜಿನ ಎಚ್ಚರಿಕೆ ನೀಡಲಾಗಿದೆ. ಇದಲ್ಲದೇ ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಮುದ್ರಾಂಕ ಇಲಾಖೆಗೆ ಕಾಯಕಲ್ಪ; ಹೆಚ್ಚುವರಿ ಡಿಐಜಿಆರ್, ಎಐಜಿಆರ್/ ಡಿಆರ್ ಹುದ್ದೆಗಳ ಸೃಜನೆಗೆ ಶಿಫಾರಸು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:18 − ten =
Remember me
