ಬೆಂಗಳೂರು :ಸಾಮಾಜಿಕ ಜಾಲತಾಣದಲ್ಲಿ ಕಿಡ್ನಿ ಮಾರಾಟ ಮತ್ತು ಖರೀದಿ ಸೋಗಿನಲ್ಲಿ ಅಮಾಯಕರಿಗೆ ವಂಚನೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಬಾಗಲೂರು ಸಮೀಪದ ಮಾರೇನಹಳ್ಳಿಯ ದುರ್ಗಾನಾಥ ಸಿಟಿ ರೆಸಿಡೆನ್ಸಿಯಲ್ಲಿ ವಾಸವಾಗಿದ್ದ ಡ್ನೂಡಿಮ್​ ಓಬಿನ್ನಾ ಕಿಂಗ್​ಲ್ನೇ (30) ಬಂಧಿತ. ಪಾಸ್​ಪೋರ್ಟ್​ ಮತ್ತು ವೀಸಾ ಅವಧಿ ಮುಗಿದಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ಪರಿಶೀಲನೆ ಸಲುವಾಗಿ ಮನೆಗೆ ಹೋದಾಗ ಆರೋಪಿಯ ನಿಜ ಬಣ್ಣ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೈಜೀರಿಯಾ ಮೂಲದ ಆರೋಪಿಯು ವ್ಯಾಪಾರದ ವೀಸಾ ಪಡೆದು ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದ. ಆದರೆ, ಕಳೆದ ಏಪ್ರಿಲ್​ 18 ರಂದು ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಬ್​ಇನ್​ಸ್ಪೆಕ್ಟರ್​ ಅಣ್ಣಪ್ಪ ಕಾಗವಾಡ ನೇತೃತ್ವದ ತಂಡ ಆರೋಪಿಯ ಮನೆ ಮೇಲೆ ದಾಳಿ ನಡೆಸಿದಾಗ ಆರೋಪಿ ಲ್ಯಾಪ್​ಟಾಪ್​ನಲ್ಲಿ ಏನೋ ಕೆಲಸ ಮಾಡುತ್ತಿದ್ದ. ಲ್ಯಾಪ್​ಟಾಪ್​ ಪರಿಶೀಲನೆ ನಡೆಸಿದಾಗ ಹಣದಾಸೆ ತೋರಿಸಿ ಕಿಡ್ನಿ ಮಾರಾಟ ಮತ್ತು ಕಿಡ್ನಿ ಖರೀದಿಸುವ ಇಮೇಲ್​ಗಳನ್ನು ಸಾರ್ವಜನಿಕರಿಗೆ ಕಳುಹಿಸಿರುವುದು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡುತ್ತಿರುವುದು ತಿಳಿದುಬಂತು.
ಇದನ್ನೂ ಓದಿ:ಸಿಟಿ ಸ್ಕ್ಯಾನ್ ಗೆ ಹೆಚ್ಚು ದರ ಪಡೆದರೆ ಕಾನೂನು ಕ್ರಮ: ಡಿಎಚ್‌ಒ
ಈ ಬಗ್ಗೆ ಆರೋಪಿಯನ್ನು ಪ್ರಶ್ನೆ ಮಾಡಿದಾಗ ಕಿಡ್ನಿ ಖರೀದಿ ಮತ್ತು ಕಿಡ್ನಿ ಮಾರಾಟದ ಬಗ್ಗೆ ಜಾಹೀರಾತು ಪ್ರಕಟಿಸುತ್ತೇನೆ. ಕಿಡ್ನಿ ಅಗತ್ಯ ಇರುವವರು ಖರೀದಿಗೆ ಕರೆ ಮಾಡುತ್ತಾರೆ. ಹಣ ಬೇಕಾದವರು ಕಿಡ್ನಿ ಮಾರಾಟಕ್ಕೆ ಕರೆ ಮಾಡುತ್ತಾರೆ. ಒಂದೆಡೆ ಕಿಡ್ನಿ ಕೊಡುವುದಾಗಿ ಹೇಳಿ ಹಣ ಪಡೆದರೆ, ಇನ್ನು ಕಿಡ್ನಿ ದಾನಿಗಳಿಂದ ವೈದ್ಯಕೀಯ ಪರೀಕ್ಷೆ ನೆಪದಲ್ಲಿ ಹಣ ಪಡೆದು ವಂಚನೆ ಮಾಡುತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಜೊತೆಗೆ, ವೀಸಾ ಮತ್ತು ಪಾಸ್​ಪೋರ್ಟ್​ ಪರಿಶೀಲಿಸಿದಾಗ ಅವಧಿ ಮುಗಿದಿರುವುದು ಬೆಳಕಿಗೆ ಬಂದಿದೆ.
ಮನೆಯನ್ನು ಪರಿಶೀಲನೆ ನಡೆಸಿದಾಗ ಕೃತ್ಯಕ್ಕೆ ಬಳಸುತ್ತಿದ್ದ 3 ಲ್ಯಾಪ್​ಟಾಪ್​, 10 ಮೊಬೈಲ್​, 1 ವೈಫೈ ಕನೆಕ್ಟರ್​, 1 ಹಾರ್ಡ್​ ಡಿಸ್ಕ್​, 1 ವೈರಲೆಸ್​ ಮೌಸ್​ ಪತ್ತೆಯಾಗಿದ್ದು, ಎಲ್ಲವನ್ನೂ ಜಪ್ತಿ ಮಾಡಿಕೊಳ್ಳಲಾಗಿದೆ. ವಂಚನೆ ಮತ್ತು ವಿದೇಶಾಂಗ ಇಲಾಖೆ ಕಾನೂನು ಉಲ್ಲಂಘನೆ ಆರೋಪದ ಮೇಲೆ ಎಫ್​​​ಐಆರ್​ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ನಟ ಅನುಪಮ್‌ ಖೇರ್‌ಗೆ ಬಿಗ್‌ ಶಾಕ್‌… ರಾತ್ರೋರಾತ್ರಿ 80 ಸಾವಿರ ಫಾಲೋವರ್ಸ್‌ ಮಿಸ್ಸಿಂಗ್‌!
ಬ್ಯಾಂಕ್​ ಖಾತೆ ಪರಿಶೀಲನೆ : ಆರೋಪಿ ಎಷ್ಟು ಮಂದಿಗೆ ಕಿಡ್ನಿ ಮತ್ತು ಹಣದಾಸೆ ತೋರಿಸಿ ವಂಚನೆ ಮಾಡಿದ್ದಾನೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಬ್ಯಾಂಕ್​ ಖಾತೆ, ಮೊಬೈಲ್​ ಕರೆಗಳು ಮತ್ತು ಇಮೇಲ್​ ಪರಿಶೀಲನೆ ನಡೆಸಲಾಗುತ್ತಿದೆ. ನೂರಾರು ಮಂದಿಗೆ ಮೋಸ ಮಾಡಿರುವ ಶಂಕೆ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ : ಡಿಸಿಎಂ ಸವದಿ

ಡೇಟಿಂಗ್​ ಆ್ಯಪ್​ ಮೂಲಕ ಪುಸಲಾಯಿಸಿ ಕರೆದರು, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್​ ಮಾಡಿದರು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:9 + 3 =
Remember me
