ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಜನವರಿ 22ರಂದು ಗಲ್ಲಿಗೇರಿಸಲಾಗದು. ಅದು ಸರಿಯಲ್ಲ ಎಂದು ದೆಹಲಿ ಸರ್ಕಾರ ಬುಧವಾರ ಹೈಕೋರ್ಟ್​ಗೆ ಹೇಳಿದೆ.
ನಿರ್ಭಯಾ ರೇಪಿಸ್ಟ್​ಗಳನ್ನು ಜನವರಿ 22ರಂದು ಗಲ್ಲಿಗೇರಿಸುವುದಕ್ಕೆ ದಿನ ನಿಗದಿಯಾಗಿದೆ. ಈ ತಿಂಗಳ ಆರಂಭದಲ್ಲಿ ಜನವರಿ 22ರ ಬೆಳಗ್ಗೆ 7 ಗಂಟೆಗೆ ನೇಣಿಗೇರಿಸುವಂತೆ ದೆಹಲಿ ಕೋರ್ಟ್ ಆದೇಶಿಸಿತ್ತು.
ತಿಹಾರ್ ಜೈಲು ಆಡಳಿತದ ಪರ ನ್ಯಾಯವಾದಿ ರಾಹುಲ್ ಮೆಹ್ರಾ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ್ದು, ರಾಷ್ಟ್ರಪತಿಗಳು ದಯಾ ಅರ್ಜಿಯನ್ನು ತಿರಸ್ಕರಿಸಿದ ಬಳಿಕವಷ್ಟೇ ಅಪರಾಧಿಗಳನ್ನು ಗಲ್ಲಿಗೇರಿಸುವುದು ಸಾಧ್ಯ. ನಾವು ಕಾನೂನಿನ ಚೌಕಟ್ಟಿನಲ್ಲಿ ಬದುಕುತ್ತಿರುವ ಕಾರಣ ರಾಷ್ಟ್ರಪತಿಗಳಿಂದ ದಯಾ ಅರ್ಜಿ ತಿರಸ್ಕೃತವಾದ 14 ದಿನಗಳ ಬಳಿಕವಷ್ಟೇ ನೇಣು ಶಿಕ್ಷೆ ಜಾರಿಯಾಗಬೇಕು. ಈ ಹದಿನಾಲ್ಕು ದಿನಗಳ ಅವಧಿಯನ್ನು ಅಪರಾಧಿಗಳಿಗೆ ನೀಡಬೇಕಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಕೇಶ್ ದಯಾ ಅರ್ಜಿಯನ್ನು ಮಂಗಳವಾರವಷ್ಟೇ ರಾಷ್ಟ್ರಪತಿಗಳಿಗೆ ರವಾನಿಸಿದ್ದಾನೆ. ಮರಣ ದಂಡನೆ ಶಿಕ್ಷೆ ಪರಿಷ್ಕರಿಸುವಂತೆ ಕೋರಿ ದೆಹಲಿ ಹೈಕೋರ್ಟ್​ಗೂ ಅರ್ಜಿ ಸಲ್ಲಿಸಿದ್ದಾನೆ. ಅಪರಾಧಿಯ ದಯಾ ಅರ್ಜಿ ದೆಹಲಿಯ ಎಲ್​ಜಿ ಮತ್ತು ರಾಷ್ಟ್ರಪತಿಗಳ ಎದುರು ಬಾಕಿ ಇರುವಾಗ ಮರಣದಂಡನೆ ಶಿಕ್ಷೆ ಜಾರಿಗೊಳಿಸಲಾಗದು ಎಂಬ ಅಂಶವೂ ಅರ್ಜಿಯಲ್ಲಿದೆ. (ಏಜೆನ್ಸೀಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × five =
Remember me
