ನವದೆಹಲಿ:ಸಂಸತ್ತಿನಲ್ಲಿ ಪ್ರಶ್ನೆ ಕೇಳುವ ಸಲುವಾಗಿ ನಗದು ಪಡೆದಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಆದೇಶಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಲೋಕಪಾಲ್ ಆದೇಶಿಸಿದೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ. ಪ್ರಶ್ನೆಗಾಗಿ ನಗದು ಪ್ರಕರಣದ ಮೂಲಕ ರಾಷ್ಟ್ರದ ಭದ್ರತೆಗೆ ಧಕ್ಕೆ ತರುವಂಥ ಭ್ರಷ್ಟಾಚಾರದಲ್ಲಿ ಭಾಗಿಯಾದ್ದರಿಂದ ಸಿಬಿಐ ಈ ತನಿಖೆಗೆ ಆದೇಶಿಸಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನು ಈ ಹಿನ್ನೆಲೆಯಲ್ಲಿ ತಮಗೆ ಕರೆ ಮಾಡಿ ಪ್ರತಿಕ್ರಿಯೆ ಕೇಳುತ್ತಿರುವ ಮಾಧ್ಯಮದವರಿಗಾಗಿ ಸೋಷಿಯಲ್ ಮೀಡಿಯಾ ಮೂಲಕ ಮೊಯಿತ್ರಾ ತಮ್ಮ ಪ್ರತಿಕ್ರಿಯೆ ಪೋಸ್ಟ್ ಮಾಡಿದ್ದಾರೆ. ಸಿಬಿಐ ಅವರು ಮೊದಲು 13 ಸಾವಿರ ಕೋಟಿ ರೂ. ಅದಾನಿ ಕಲ್ಲಿದ್ದಲು ಹಗರಣದ ಬಗ್ಗೆ ಎಫ್​ಐಆರ್ ದಾಖಲಿಸಬೇಕು. ಕೇಂದ್ರ ಗೃಹ ಸಚಿವಾಲಯದ ನೆರವಿನೊಂದಿಗೆ ದೇಶದ ಬಂದರು ಮತ್ತು ವಿಮಾನನಿಲ್ದಾಣಗಳನ್ನು ಅದಾನಿ ಖರೀದಿಸುತ್ತಿರುವುದು ಹೇಗೆ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂಥದ್ದು ಎಂಬುದನ್ನು ಸಿಬಿಐ ಮೊದಲು ಗಮನಿಸಲಿ ಎಂಬುದಾಗಿಯೂ ಹೇಳಿರುವ ಮೊಯಿತ್ರಾ, ಸಿಬಿಐನವರಿಗೆ ನನ್ನ ಮನೆಗೆ ಸ್ವಾಗತ, ಬಂದು ನನ್ನ ಶೂಗಳನ್ನು ಎಣಿಸಿಕೊಂಡು ಹೋಗಲಿ ಎಂದೂ ಹೇಳಿದ್ದಾರೆ.
लोकपाल ने आज मेरे कम्प्लेन पर आरोपी सांसद महुआ जी के राष्ट्रीय सुरक्षा को गिरवी रखकर भ्रष्टाचार करने पर CBI inquiry का आदेश दिया
— Dr Nishikant Dubey (@nishikant_dubey)November 8, 2023

ಇದನ್ನೂ ಓದಿ:ವಿಶ್ವಕಪ್ ಕ್ರಿಕೆಟ್​: ಭಾರತ-ಪಾಕಿಸ್ತಾನ ಸೆಮಿಫೈನಲ್ ಫಿಕ್ಸಾ?
ಉದ್ಯಮಿ ಗೌತಮ್ ಅದಾನಿಯನ್ನು ಗುರಿಯಾಗಿಸಿ ಉದ್ಯಮಿ ದರ್ಶನ್ ಹೀರಾನಂದಾನಿ ಅವರ ಪರವಾಗಿ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹಣ ಪಡೆದಿದ್ದರು ಎಂಬ ಆರೋಪ ಅವರ ವಿರುದ್ಧ ಕೇಳಿಬಂದಿದೆ. ಅಲ್ಲದೆ ಆಕೆ ಕೂಡ ದರ್ಶನ್ ಹೀರಾನಂದಾನಿ ತಮ್ಮ ಫ್ರೆಂಡ್ ಎಂದು ಹೇಳಿಕೊಂಡಿದ್ದು, ಅವರೊಂದಿಗೆ ಸಂಸದೀಯ ಲಾಗಿನ್​ ವಿವರ ಹಂಚಿಕೊಂಡಿದ್ದಾಗಿಯೂ ಒಪ್ಪಿಕೊಂಡಿದ್ದಾರೆ.
ಅದಾನಿ ವಿರುದ್ಧ ಪ್ರಶ್ನೆ ಕೇಳಲು ಟಿಎಂಸಿ ಸಂಸದೆಯ ಲಾಗಿನ್ ವಿವರ ಬಳಸಿಕೊಂಡಿರುವ ಬಗ್ಗೆ ಕಳೆದ ತಿಂಗಳಲ್ಲಿ ಲೋಕಸಭಾ ಸಮಿತಿಗೆ ಸಹಿ ಮಾಡಿ ನೀಡಲಾದ ಅಫಿಡವಿಟ್​ನಲ್ಲಿ ಉದ್ಯಮಿ ದರ್ಶನ್ ಹೀರಾನಂದಾನಿ ಕೂಡ ಉಲ್ಲೇಖಿಸಿದ್ದರು.
For media calling me- my answer:1. CBI needs to first file FIR on ₹13,000 crore Adani coal scam2. National security issue is how dodgy FPI owned (inc Chinese & UAE ) Adani firms buying Indian ports & airports with@HMOIndiaclearance
Then CBI welcome to come, count my shoes
— Mahua Moitra (@MahuaMoitra)November 8, 2023

ಫೇಸ್​ಬುಕ್​ನಲ್ಲಿ ‘ಬ್ಯಾಕ್ ಪೇನ್​’; ಬಳಕೆದಾರರಿಂದ ವಿಶೇಷ ಬೇಡಿಕೆ..

ಪ್ರಧಾನಿ ಮೋದಿ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ ಮುಸ್ಲಿಂ ಮಹಿಳೆ; ವಿರೋಧ ಎದುರಾದ್ರೂ ಛಲ ಬಿಡಲಿಲ್ಲ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three − 1 =
Remember me
