ನವದೆಹಲಿ:ಈ ವರ್ಷದ ಡಿಸೆಂಬರ್​ ಅಂತ್ಯದ ವೇಳೆಗೆ ರಾಷ್ಟ್ರೀಯ ಹೆದ್ದಾರಿಗಳನ್ನು ಗುಂಡಿಮುಕ್ತಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಂಡಿಮುಕ್ತ ರಾಷ್ಟ್ರೀಯ ಹೆದ್ದಾರಿಗಳನ್ನು ಖಚಿತಪಡಿಸಿಕೊಳ್ಳಲು ಯೋಜನೆಯನ್ನು ರಚಿಸಲಾಗುತ್ತಿದೆ. ಇದನ್ನು ಯಶಸ್ವಿಗೊಳಿಸಲು ಯುವ ಎಂಜಿನಿಯರ್​ಗಳನ್ನು ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಒಳಚರಂಡಿ ಸಮಸ್ಯೆಗಳ ಬಗ್ಗೆ ದೂರುಗಳು ಬಂದಿವೆ. ಮಳೆಯಿಂದಾಗಿ ಹೆದ್ದಾರಿಯಲ್ಲಿ ಹಾನಿಯುಂಟಾಗಿ ಆಗುವ ಹೊಂಡಗಳ ಬಗ್ಗೆ ಹೊಸ ಯೋಜನೆ ಪರಿಶೀಲನೆ ಹಂತದಲ್ಲಿದೆ. ರಸ್ತೆ ನಿರ್ಮಾಣದಲ್ಲಿ ಪುರಸಭೆಯ ತ್ಯಾಜ್ಯವನ್ನು ಬಳಸಲು ಮತ್ತೊಂದು ನೀತಿಯನ್ನು ರೂಪಿಸಲಾಗುತ್ತಿದೆ ಎಂದು ಗಡ್ಕರಿ ತಿಳಿಸಿದ್ದಾರೆ.
ನಗರ ತ್ಯಾಜ್ಯವನ್ನು ನಗರ ವಿಸ್ತರಣೆ ರಸ್ತೆ(ಯುಇಆರ್​)-ಐಐ, ದೆಹಲಿ ಮುಂಬೈ ಎಕ್ಸ್​ಪ್ರೆಸ್​ವೇ ಮತ್ತು ಅಹಮದಾಬಾದ್​ನಿಂದ ಧೋಲೇರಾ ಎಕ್ಸ್​ಪ್ರೆಸ್​ವೇನ ಕಾಮಗಾರಿಯಲ್ಲಿ ಬಳಸಲಾಗಿದೆ. ಪಳೆಯುಳಿಕೆ ಇಂಧನಗಳ ಬದಲಿಗೆ ಪರ್ಯಾಯ ಇಂಧನಗಳನ್ನು ಬಳಸುವ ನಿರ್ಮಾಣ ಯಂತ್ರೋಪಕರಣಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಹೊಸ ಕರಡು ನೀತಿಯನ್ನು ಪೂರ್ಣಗೊಳಿಸುವುದಾಗಿ ಗಡ್ಕರಿ ಹೇಳಿದ್ದಾರೆ. ಪ್ರಸ್ತಾವನೆಯನ್ನು ಅನುಮೋದನೆಗಾಗಿ ಹಣಕಾಸು ಸಚಿವಾಲಯಕ್ಕೆ ಸಲ್ಲಿಸಲಾಗುವುದು ಎಂದು ಉಲ್ಲೆಖಿಸಿದ್ದಾರೆ.
2047ರ ವೇಳೆಗೆ ಭಾರತಕ್ಕೆ ಇಂಗಾಲದ ತಟಸ್ಥತೆಯನ್ನು ಸಾಧಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯೊಂದಿಗೆ ಈ ಕ್ರಮಗಳು ಹೊಂದಿಕೆಯಾಗುತ್ತವೆ ಎಂದು ಹೇಳಿದ್ದಾರೆ. ನಿರ್ಮಾಣ ಉಪಕರಣಗಳು ಪ್ರತಿ ವರ್ಷ 400 ಕೋಟಿ ಲೀಟರ್​ ಡೀಸೆಲ್​ ಅನ್ನು ಬಳಸುತ್ತವೆ. ನಿರ್ಮಾಣ ಉಪಕರಣಗಳಲ್ಲಿ ಪರ್ಯಾಯ ಇಂಧನಗಳ ಬಳಕೆಯನ್ನು ಉತ್ತೇಜಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಬಯಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 17 =
Remember me
