ಮುಂಬೈ:ಕ್ರೂಸ್ ಶಿಪ್​​​ನಲ್ಲಿ ಡ್ರಗ್ಸ್​ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್​ ತಾರೆ ಶಾರುಖ್​ ಖಾನ್​ರ ಮಗ ಆರ್ಯನ್​ ಖಾನ್​​ನ​ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಎನ್​ಡಿಪಿಎಸ್​​ ಕೋರ್ಟ್​ ವಜಾಗೊಳಿಸಿದೆ. ಆರ್ಯನ್​ರೊಂದಿಗೆ ಪ್ರಕರಣದ ಇತರ ಇಬ್ಬರು ಆರೋಪಿಗಳಾದ ಅರ್ಬಾಜ್​ ಮರ್ಚೆಂಟ್ ಮತ್ತು ಮುನ್​ಮುನ್​ ಧಮೇಚ ಅವರಿಗೂ ಜಾಮೀನು ಲಭ್ಯವಾಗಿಲ್ಲ.
ಅಕ್ಟೋಬರ್​ 2 ನೇ ತಾರೀಕು ಕಾರ್ಡೆಲಿಯ ಕ್ರೂಸ್​ ಶಿಪ್​ ಮೇಲೆ ನಡೆಸಿದ ದಾಳಿಯ ಹಿನ್ನೆಲೆಯಲ್ಲಿ ಆರ್ಯನ್​ ಖಾನ್ಅನ್ನು ವಿಚಾರಣೆ ನಡೆಸಿದ್ದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್​ಸಿಬಿ) ಅಧಿಕಾರಿಗಳು ​ಅ.3 ರಂದು ಅವನನ್ನು ಬಂಧಿಸಿದ್ದರು. 23 ವರ್ಷ ವಯಸ್ಸಿನ ಆರ್ಯನ್ ಖಾನ್​ನೊಂದಿಗೆ ಇತರ 9 ಜನರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ.
ಇದನ್ನೂ ಓದಿ:ಐವನ್‌ ಡಿʼಸೋಜ ಮನೆಗೆ ಬಜರಂಗದಳ ಮುತ್ತಿಗೆ ಯತ್ನ
ಕಳೆದ 12 ದಿನಗಳಿಂದ ಮುಂಬೈನ ಅರ್ಥರ್​ ರಸ್ತೆ ಜೈಲಿನಲ್ಲಿರುವ ಖಾನ್​ಗೆ ಈ ಮೊದಲು ಮ್ಯಾಜಿಸ್ಟ್ರೇಟ್​ ಕೋರ್ಟ್​ನಿಂದ ಜಾಮೀನು ಲಭಿಸಿರಲಿಲ್ಲ. ನಂತರ ವಿಶೇಷ ಸೆಷನ್ಸ್​ ಕೋರ್ಟ್​ನಲ್ಲಿ ಸಲ್ಲಿಕೆಯಾದ ಜಾಮೀನು ಅರ್ಜಿಯ ತೀರ್ಪನ್ನು ಇಂದಿಗೆ ಕಾದಿರಿಸಲಾಗಿತ್ತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿ.ವಿ.ಪಾಟೀಲ್​ ಜಾಮೀನು ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.
ಸದ್ಯಕ್ಕೆ ಜೈಲಿನಲ್ಲೇ ಕಾಲ ಕಳೆಯಬೇಕಾಗಿರುವ ಆರ್ಯನ್​ ಖಾನ್​ರ ವಕೀಲರಿಗೆ ಎನ್​ಡಿಪಿಎಸ್​ ಕೋರ್ಟ್​ನ ಈ ಆದೇಶದ ವಿರುದ್ಧ ಹೈಕೋರ್ಟ್​ಗೆ ಅಪೀಲು ಸಲ್ಲಿಸುವ ಅವಕಾಶವಿದೆ.(ಏಜೆನ್ಸೀಸ್)
ಪಾರಿವಾಳ ಬಳಸಿ ಡುಪ್ಲೆಕ್ಸ್ ಮನೆ ದೋಚುತ್ತಿದ್ದ ಚಾಲಾಕಿ ಕಳ್ಳ ಅಂದರ್
ಮಕ್ಕಳೇ, ಸ್ಕೂಲಿಗೆ ರೆಡಿಯಾಗಿ! ಅ.25 ರಿಂದ ಪ್ರಾಥಮಿಕ ಶಾಲೆಗಳೂ ಶುರು


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 4 =
Remember me
