ಚಂಡೀಗಢ:ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ನಂತರ ಅತಿ ಹೆಚ್ಚು ಸಂಖ್ಯೆಯಲ್ಲಿ ಪ್ರತಿಭಟನೆಯ ಬಿಸಿ ಮುಟ್ಟಿರುವ ಹರಿಯಾಣದಲ್ಲಿ, ಆಡಳಿತಾರೂಢ ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಮತ ಮಂಡನೆ ಮಾಡಿದೆ. ಇಂದು ವಿಧಾನಸಭೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಭೂಪಿಂದರ್ ಸಿಂಗ್ ಹೂಡ ಮುಖ್ಯಮಂತ್ರಿ ಮನೋಹರ್ ಲಾಲ್ ಖತ್ತರ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದಿದ್ದಾರೆ.
ಇಂದು ಬೆಳಿಗ್ಗೆ ಅವಿಶ್ವಾಸ ಮತ ಮಂಡಿಸಿದ ಕಾಂಗ್ರೆಸ್​​ ಶಾಸಕ ಹೂಡ. “ದೇಶದಾದ್ಯಂತ ರೈತರು ಪ್ರತಿಭಟಿಸುತ್ತಿದ್ದಾರೆ. ಹರಿಯಾಣ ಸರ್ಕಾರ ರೈತರನ್ನು ತಡೆಯಲು ಪ್ರಯತ್ನಿಸುತ್ತಿದ್ದು, ವಾಟರ್ ಕನಾನ್ ಮತ್ತು ಟಿಯರ್ ಗ್ಯಾಸ್ ಪ್ರಯೋಗ ಮಾಡುತ್ತಿದೆ. 250 ಕ್ಕೂ ಹೆಚ್ಚು ರೈತರು ನಮ್ಮ ಗಡಿಯಲ್ಲಿ ಸಾವಪ್ಪಿದ್ದಾರೆ” ಎಂದರು.
ಇದನ್ನೂ ಓದಿ:ಸಮುದ್ರದಲ್ಲಿ ತೇಲಿ ಬಂತು ಫುಲ್​ ಬಾಟಲ್​- ವಿದೇಶಿ ಮದ್ಯ ಎಂದು ಕುಡಿದ ಮೀನುಗಾರರು- ಮುಂದಾದದ್ದು ದುರಂತ!
ಖತ್ತರ್ ಸರ್ಕಾರದ ವಿರುದ್ಧ ವಾಕ್​ಪ್ರಹಾರ ಮುಂದುವರೆಸಿದ ಹೂಡ, “ಬಿಜೆಪಿ-ಜೆಜೆಪಿ ಸರ್ಕಾರ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಅದಕ್ಕಾಗೇ ರೈತರು ಪ್ರತಿಭಟಿಸುತ್ತಿದ್ದಾರೆ. ಜೆಜೆಪಿ ಎಂಎಸ್​​ಪಿ ಮತ್ತು ಶೇ.10ರ ಬೋನಸ್​​ನ ಆಶ್ವಾಸನೆ ನೀಡಿತ್ತು. ಬಿಜೆಪಿ ರೈತರ ಆದಾಯ ದ್ವಿಗುಣಗೊಳ್ಳುವುದೆಂದು ಭರವಸೆ ನೀಡಿತ್ತು. ಆದರೆ ಬೆಳೆಯ ಉತ್ಪಾದನಾ ವೆಚ್ಚ ಹೆಚ್ಚುತ್ತಿದ್ದು, ಅದನ್ನು ಎಂಎಸ್​​ಪಿ ಪೂರೈಸುತ್ತಿಲ್ಲ” ಎಂದರು.
ಸಂಖ್ಯೆಗಳು ಹೀಗಿವೆ:90 ಸೀಟುಗಳಿರುವ ಹರಿಯಾಣ ವಿಧಾನಸಭೆಯಲ್ಲಿ ಹಾಲಿ 88 ಶಾಸಕರಿದ್ದಾರೆ. ಇದರಲ್ಲಿ ಬಿಜೆಪಿ 40 ಸೀಟುಗಳನ್ನು ಹೊಂದಿದ್ದು, 10 ಜೆಜೆಪಿ ಶಾಸಕರು, ಒಬ್ಬ ಲೋಕಹಿತ ಪಕ್ಷದ ಶಾಸಕ ಮತ್ತು 5 ಸ್ವತಂತ್ರ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ. ಕಾಂಗ್ರೆಸ್​ 30 ಶಾಸಕರನ್ನು ಹೊಂದಿದೆ. ಬಹುಮತ ಸಾಬೀತುಪಡಿಸಲು ಸರ್ಕಾರಕ್ಕೆ 45 ಮತಗಳ ಅಗತ್ಯ ಬೀಳಲಿದೆ.
ಇದನ್ನೂ ಓದಿ:ಹೆಚ್ಚಿದ ಕರೊನಾ : ಮದುವೆ ಸಮಾರಂಭಗಳಿಗೆ ಪೊಲೀಸರಾಗಲಿದ್ದಾರೆ ವಿಶೇಷ ಅತಿಥಿಗಳು !
ಬಿಜೆಪಿ, ಜೆಜೆಪಿ ಮತ್ತು ಕಾಂಗ್ರೆಸ್ ಮೂರೂ ಪಕ್ಷಗಳು ತಮ್ಮ ಶಾಸಕರಿಗೆ ವಿಧಾನಸಭೆಯ ಕಲಾಪಗಳು ಮುಗಿಯುವವರೆಗೆ ಹಾಜರಿರಬೇಕೆಂದು ವಿಪ್ ಜಾರಿ ಮಾಡಿವೆ. ಜೆಜೆಪಿ ಮತ್ತು ಸ್ವತಂತ್ರ ಶಾಸಕರು ಸರ್ಕಾರದ ವಿರುದ್ಧ ಮತ ಚಲಾವಣೆ ಮಾಡಲಿದ್ದಾರೆಂದು ಕಾಂಗ್ರೆಸ್ ಆಶಿಸುತ್ತಿದೆ. ಈ ನಡುವೆ ಜೆಜೆಪಿ ಶಾಸಕರು ತಾವು ಕೃಷಿ ಕಾನೂನುಗಳ ವಿರುದ್ಧ ಇದ್ದರೂ ಕೂಡ, ಸರ್ಕಾರವನ್ನು ಅಸ್ಥಿರಗೊಳಿಸಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ.(ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಅಭಿಮಾನಿಗೆ ಎಸಿ ಸರ್ವೀಸ್​ ಫ್ರೀ ! ಇದು ಹೃತಿಕ್ ರೋಶನ್​ ಜಾದೂ !
ಕೆಂಪು ಕೋಟೆ ಹಿಂಸಾಚಾರ : ಪರಾರಿ ಆಗುತ್ತಿದ್ದ ಡಚ್​ ಪ್ರಜೆ ಪೊಲೀಸರ ವಶಕ್ಕೆ



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 19 =
Remember me
