ಲಖನೌ:ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಸದಾ ವಾಗ್ದಾಳಿ ನಡೆಸುತ್ತಾರೆ. ಸಿಎಂ ಆದಿತ್ಯನಾಥ್ ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ಸಹ, ಅದರ ಬಗ್ಗೆ ಪ್ರಿಯಾಂಕಾ ಟೀಕೆ ಮಾಡುವುದು ಸಾಮಾನ್ಯ ಎಂಬಂತಾಗಿದೆ.
ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಾರದ ಕೊನೆಯಲ್ಲಿ (ವೀಕೆಂಡ್​) ಮೂರು ದಿನ ಲಾಕ್​ಡೌನ್​ ಘೋಷಣೆ ಮಾಡಿದ್ದರ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇಷ್ಟು ಚಿಕ್ಕ ಅವಧಿಗೆ, ಅದೂ ವೀಕೆಂಡ್​​ನಲ್ಲಿಯೇ ಲಾಕ್​ಡೌನ್​ ಘೋಷಣೆ ಮಾಡುವುದರ ಹಿಂದಿನ ಲಾಜಿಕ್​ ಏನು ಎಂಬುದು ಯಾರಿಗೂ ಅರ್ಥ ಆಗುತ್ತಿಲ್ಲ. ಕರೊನಾ ವಿರುದ್ಧ ಹೋರಾಟದಲ್ಲಿ, ಸೋಂಕು ನಿಯಂತ್ರಣ ಮಾಡುವಲ್ಲಿ ಉತ್ತರ ಪ್ರದೇಶ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅದನ್ನು ಮುಚ್ಚಿಡಲು ಹೀಗೆಲ್ಲ ಲಾಕ್​ಡೌನ್ ಮಾಡಲಾಗುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಜು.10ರಿಂದ ಮೂರು ದಿನಗಳ ಲಾಕ್​ಡೌನ್​ ಇತ್ತು. ಜು.10ರಂದು 1347, ಜುಲೈ 11ರಂದು 1403 ಮತ್ತು ಜುಲೈ 12ರಂದು 1388 ಕರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. (ಏಜೆನ್ಸೀಸ್​)
VIDEO: ಮಾನ್ಸೂನ್​​ನಲ್ಲಿ ಗಂಡುಕಪ್ಪೆಗಳು ಹಳದಿ ಬಣ್ಣಕ್ಕೆ ತಿರುಗುವುದರ ಹಿಂದಿದೆ ಒಂದು ಅಚ್ಚರಿಯ ಕಾರಣ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
