ನವದೆಹಲಿ: ಪೌರತ್ವ ಕಾಯ್ದೆ ತಿದ್ದುಪಡಿ ಜಾರಿ ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರ ಕುರಿತು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಮಂಗಳವಾರ ಸಭೆ ನಡೆಸಿದರು.
ಸಭೆಯಲ್ಲಿ ದೆಹಲಿ ಲೆಫ್ಟಿನೆಂಟ್​ ಗವರ್ನರ್​ ಅನಿಲ್​ ಬೈಜಾಲ್​, ಮುಖ್ಯಮಂತ್ರಿ ಅರವಿಂದ್​​ ಕೇಜ್ರಿವಾಲ್​, ಗೃಹ ಕಾರ್ಯದರ್ಶಿ ಅಜಯ್​ ಭಲ್ಲಾ, ಗುಪ್ತಚರ ಇಲಾಖೆ ನಿರ್ದೇಶಕ ಅರವಿಂದ ಕುಮಾರ್​, ದೆಹಲಿ ಪೊಲೀಸ್​ ಆಯುಕ್ತ ಅಮೂಲ್ಯ ಪಟ್ನಾಯಕ್​, ಕಾಂಗ್ರೆಸ್​ ಮುಖಂಡ ಸುಭಾಷ್ ಮಲ್ಹೋತ್ರಾ, ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಸಭೆಯಲ್ಲಿ ಇದ್ದರು.
ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಓರ್ವ ಮುಖ್ಯಪೇದೆ ಸೇರಿದಂತೆ 7 ಮಂದಿ ಬಲಿಯಾಗಿದ್ದಾರೆ. ಹಲವು ಕಟ್ಟಡಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಷಾ ಅವರು ಸಭೆ ನಡೆಸಿ ಚರ್ಚೆ ನಡೆಸಿದರು.
ಪ್ರತಿಭಟನೆಗೆ ಗಡಿಯಾಚೆಯಿಂದ ಜನರು ಬರುತ್ತಿದ್ದಾರೆ ಎಂಬ ಮಾಹಿತಿ ಇದೆ. ಗಡಿಗಳನ್ನು ಮುಚ್ಚಬೇಕು ಎಂದು ಸಭೆಯಲ್ಲಿ ಕೇಂದ್ರ ಗೃಹ ಸಚಿವರ ಗಮನ ಸೆಳೆದಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಸಭೆ ನಂತರ ಹೇಳಿದರು. (ಏಜೆನ್ಸೀಸ್​)
Delhi: Union Home Minister Amit Shah is chairing a meeting with Delhi CM Arvind Kejriwal, Lt Governor Anil Baijal, Police Commissioner Amulya Patnaik, Congress leader Subhash Chopra, BJP leaders Manoj Tiwari & Rambir Singh Bidhuri and others.#NortheastDelhipic.twitter.com/iz2ohNeSNo
— ANI (@ANI)February 25, 2020

ಈಶಾನ್ಯ ದೆಹಲಿ ಹಿಂಸಾಚಾರ: ಶಾಂತಿ ಕಾಪಾಡಲು ಸಿಎಂ ಕೇಜ್ರಿವಾಲ್ ಮನವಿ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − nine =
Remember me
