ಒಡಿಶಾ:ಇಲ್ಲಿನ ಗಂಜಾಂ ಜಿಲ್ಲೆಯಿಂದ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಎರಡು ವರ್ಷದ ಮಗಳನ್ನು ಕೊಲ್ಲಲು ಹಾವನ್ನು ಬಳಸಿದ್ದು, ಈತನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಪತ್ನಿಯೊಂದಿಗೆ ಮನಸ್ತಾಪಗಂಜಾಂ ಪೊಲೀಸರ ಪ್ರಕಾರ, ಈ ಘಟನೆ ಒಂದೂವರೆ ತಿಂಗಳ ಹಿಂದೆ ಬರ್ಹಾಂಪುರದಿಂದ ಸುಮಾರು 60 ಕಿಮೀ ದೂರದಲ್ಲಿರುವ ಕಬೀರಸೂರ್ಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಧೇಗಾಂವ್‌ನಲ್ಲಿ ನಡೆದಿದೆ. ಆರೋಪಿಯನ್ನು 25 ವರ್ಷದ ಗಣೇಶ್ ಪಾತ್ರ ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಬಸಂತಿ ಪಾತ್ರಾ (23) ಜತೆ ಮನಸ್ತಾಪ ಹೊಂದಿದ್ದನಂತೆ.
ಸುಳ್ಳು ಹೇಳಿ ಹಾವು ಖರೀದಿಸಿದಇಬ್ಬರು 2020 ರಲ್ಲಿ ವಿವಾಹವಾಗಿದ್ದು, ದೇಬಾಸ್ಮಿತಾ ಎಂಬ ಎರಡು ವರ್ಷದ ಮಗಳನ್ನು ಹೊಂದಿದ್ದರು. ಆರೋಪಿಯು ಧಾರ್ಮಿಕ ವಿಧಿವಿಧಾನದ ನೆಪದಲ್ಲಿ ಹಾವನ್ನು ಖರೀದಿಸಿ ಅಕ್ಟೋಬರ್ 6ರಂದು ಪ್ಲಾಸ್ಟಿಕ್ ಬಾಕ್ಸ್ ನಲ್ಲಿ ಹಾವನ್ನು ತಂದು ಪತ್ನಿ ಇರುವ ಕೋಣೆಯಲ್ಲಿ ಬಿಟ್ಟಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಾವು ಕಡಿತದಿಂದ ತಾಯಿ ಮತ್ತು ಮಗಳು ಸಾವುಹಾವನ್ನು ತಂದು ಕೋಣೆಯಲ್ಲಿ ಬಿಟ್ಟ ಮರುದಿನ ಬೆಳಗ್ಗೆ ಇಬ್ಬರೂ ಹಾವು ಕಡಿತದಿಂದ ಮೃತಪಟ್ಟಿದ್ದಾರೆ. ಆರೋಪಿ ಮತ್ತೊಂದು ಕೋಣೆಯಲ್ಲಿ ಮಲಗಿದ್ದ. ಗಂಜಾಂ ಪೊಲೀಸ್ ವರಿಷ್ಠಾಧಿಕಾರಿ ಜಗಮೋಹನ್ ಮೀನಾ ಮಾತನಾಡಿ, ಪೊಲೀಸರು ಆರಂಭದಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಿದ್ದರು, ಆದರೆ ಆಕೆಯ ಮಾವ ಎಫ್‌ಐಆರ್ ದಾಖಲಿಸಿದ ನಂತರ, ಆರೋಪಿಯನ್ನು ವಿಚಾರಣೆ ನಡೆಸಿ, ಘಟನೆ ನಡೆದು ಒಂದು ತಿಂಗಳ ನಂತರ ಬಂಧಿಸಲಾಯಿತು. ಏಕೆಂದರೆ ಆತನ ವಿರುದ್ಧ ಸಾಕ್ಷ್ಯ ಸಂಗ್ರಹಿಸುವಲ್ಲಿ ಸ್ವಲ್ಪ ವಿಳಂಬವಾಗಿತ್ತು.
ವಿಚಾರಣೆಯ ಸಮಯದಲ್ಲಿ ಆತ ಆರಂಭದಲ್ಲಿ ಆರೋಪ ನಿರಾಕರಿಸಿದ. ನಂತರ ಹಾವು ತಾನಾಗಿಯೇ ಕೋಣೆಗೆ ಪ್ರವೇಶಿಸಿರಬಹುದು ಎಂದು ಹೇಳಿದನಾದರೂ ಅಂತಿಮವಾಗಿ ಅಪರಾಧವನ್ನು ಒಪ್ಪಿಕೊಳ್ಳಲಾಯಿತು. ಈ ಕೊಲೆ ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಭಾರತದಲ್ಲಿರುವ ರಾಯಭಾರ ಕಚೇರಿಯನ್ನು ಶಾಶ್ವತವಾಗಿ ಮುಚ್ಚಿದ ಆಫ್ಘನ್‌; ಕಾರಣ ಬಹಿರಂಗ



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eleven =
Remember me
