ಭುವನೇಶ್ವರ:ಒಡಿಶಾದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ರಚಿಸಲು ಸಿದ್ಧವಾಗಿದೆ. ಪ್ರಮಾಣ ವಚನ ಸ್ವೀಕಾರದ ದಿನಾಂಕವನ್ನು ಜೂನ್ 10 ಎಂದು ನಿಗದಿಪಡಿಸಲಾಗಿತ್ತಾದರೂ ಅದನ್ನು 12 ಕ್ಕೆ ಮುಂದೂಡಲಾಗಿದೆ. ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರೆಲ್ಲ ಬ್ಯುಸಿಯಾಗಿರುವುದೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.
ಇದನ್ನೂ ಓದಿ:‘ಕಲ್ಕಿ’ ಅದ್ದೂರಿ ಬಿಡುಗಡೆಗೆ ಸಿದ್ಧತೆ..ಚಿತ್ರಮಂದಿರಗಳಲ್ಲಿ ಟ್ರೈಲರ್ ಪ್ರದರ್ಶನ!
ಪಕ್ಷದ ಮೂಲಗಳ ಪ್ರಕಾರ, ಪ್ರಮಾಣ ವಚನದ ದಿನಾಂಕವನ್ನು ಮುಂದೂಡಲಾಗಿದೆ. ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುದಿನ ಮೋದಿ ಅವರು ಹೊಸದಾಗಿ ಆಯ್ಕೆಯಾದ ಸಂಸದರನ್ನು ಭೇಟಿಯಾಗಲಿದ್ದಾರೆ. ಜೂನ್ 11 ರಂದು ಒಡಿಶಾ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಮುಂದೂಡಲಾಗಿದೆ.
ಪ್ರಮಾಣ ವಚನ ಸ್ವೀಕಾರ ದಿನಾಂಕ ಅಂತಿಮಗೊಂಡ ಬಳಿಕವೂ ಒಡಿಶಾ ಮುಖ್ಯಮಂತ್ರಿ ಗಾದಿ ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಸಿಎಂ ಪಟ್ಟದ ನಿರೀಕ್ಷೆಯಲ್ಲಿದ್ದವರು ಹಲವರಿರುವುದರಿಂದ ಈ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿಯ ಹಿರಿಯ ನಾಯಕ ಸುರೇಶ್ ಪೂಜಾರಿ ಅವರು ಈ ಹುದ್ದೆಯ ಆಕಾಂಕ್ಷಿಗಳಲ್ಲಿದ್ದಾರೆ. ದೆಹಲಿಗೆ ತೆರಳುತ್ತಿದ್ದಂತೆ ಆಕಾಂಕ್ಷಿಗಳ ಪಟ್ಟಿಯಲ್ಲಿ ಅವರ ಹೆಸರೂ ಇರಲಿದೆ ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ.
ಸುರೇಶ್ ಪೂಜಾರಿ ಅವರು 2019 ರ ಚುನಾವಣೆಯಲ್ಲಿ ಬರ್ಗಢ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬ್ರಜರಾಜನಗರ ಕ್ಷೇತ್ರದಿಂದ ಶಾಸಕರಾಗಿ ಗೆದ್ದಿದ್ದರು. ಆದರೆ ಇಲ್ಲಿಯವರೆಗೂ ಸಿಎಂ ಯಾರು ಎಂಬುದನ್ನು ಬಿಜೆಪಿ ಅಧಿಕೃತವಾಗಿ ಪ್ರಕಟಿಸಿಲ್ಲ.
ಸದ್ಯದಲ್ಲೇ ಈ ವಿಚಾರಕ್ಕೆ ಸ್ಪಷ್ಟನೆ ಸಿಗುವ ಸಾಧ್ಯತೆ ಇದೆ. ಇನ್ನೊಂದೆಡೆ ಭುವನೇಶ್ವರದ ಜನತಾ ಮೈದಾನದಲ್ಲಿ ಸಿಎಂ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ ನಡೆದಿದೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 147 ವಿಧಾನಸಭಾ ಸ್ಥಾನಗಳ ಪೈಕಿ 78 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 25 ವರ್ಷಗಳಿಂದ ಅಧಿಕಾರದಲ್ಲಿದ್ದ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ ಸೋಲು ಕಂಡಿದೆ.
ನಾಲ್ವರು ಒತ್ತೆಯಾಳುಗಳನ್ನು ರಕ್ಷಿಸಲು 274 ಜನರ ಬಲಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − 1 =
Remember me
