ಒಡಿಶಾ:ಒಡಿಶಾದಲ್ಲಿ ಸಂಭವಿಸಿದ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈ ದುರಂತವು ಹಲವು ರಾಷ್ಟ್ರಗಳನ್ನು ಬೆಚ್ಚಿ ಬೀಳಿಸಿದ್ದು, ಸುದ್ದಿ ತಿಳಿದ ಜಗತ್ತಿನ ಅನೇಕ ನಾಯಕರು ಕಂಬನಿ ಮಿಡಿದಿದ್ದಾರೆ.
ಇಂದು ಭಾರತದ ಒಡಿಶಾದಲ್ಲಿ ರೈಲು ಅಪಘಾತದಲ್ಲಿ ಹತ್ತಾರು ಜೀವಗಳನ್ನು ಕಳೆದುಕೊಂಡಿರುವ ಬಗ್ಗೆ ನನಗೆ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಪ್ರಧಾನಮಂತ್ರಿಗಳು, ಸರ್ಕಾರ ಮತ್ತು ಮೃತ ಕುಟುಂಬಗಳಿಗೆ ನಾನು ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.– ನೇಪಾಳದ ಪ್ರಧಾನಮಂತ್ರಿ ಕಾರ್ಯಾಲಯವು
ಭಾರತದ ಒಡಿಶಾದಲ್ಲಿ ರೈಲು ಅಪಘಾತದ ಸುದ್ದಿ ಕೇಳಿ ನನಗೆ ಅತೀವ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ, ಜನರಿಗೆ ಮತ್ತು ಭಾರತ ಸರ್ಕಾರಕ್ಕೆ ಸಂತಾಪಗಳು.-ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಡೆನಿಸ್​ ಫ್ರಾನ್ಸಿಸ್​​
ಇದನ್ನೂ ಓದಿ:ರೈತನಿಗೆ ಗೊತ್ತಿಲ್ಲದಂತೆ ಆತನ ಹೆಸರಲ್ಲಿ ಸಾಲ; ಖಾಸಗಿ ಫೈನಾನ್ಸ್‌ನಿಂದ ದೋಖಾ
ಭಾರತದಲ್ಲಿ ರೈಲು ಅಪಘಾತದಲ್ಲಿ ನೂರಾರು ಜೀವಗಳನ್ನು ಕಳೆದುಕೊಂಡಿರುವ ಬಗ್ಗೆ ತೀವ್ರ ದುಃಖವಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ನನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ.-ಪಾಕ್​ ಪ್ರಧಾನಿ
ಈ ದುರಂತ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ದುಃಖದಲ್ಲಿ ನಾವು ಭಾಗಿಯಾಗಿದ್ದೇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ.– ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ಬಾಲಸೋರ್‌ನಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನಮ್ಮ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ದುಃಖದ ಸಮಯದಲ್ಲಿ ನಾವು ಭಾರತ ಮತ್ತು ಒಡಿಶಾದ ಜನರೊಂದಿಗೆ ನಿಲ್ಲುತ್ತೇವೆ.-ಅಮೇರಿಕಾ ರಾಯಭಾರಿ ಎರಿಕ್ ಗಾರ್ಸೆಟ್ಟಿ
ಇದನ್ನೂ ಓದಿ:ಸಬ್ ಇನ್ಸ್​ಪೆಕ್ಟರ್​ ಪತ್ನಿ ಅನುಮಾನ್ಪದವಾಗಿ ಸಾವು; ಪ್ರಕರಣದ ಸುತ್ತ ಅನುಮಾನದ ಹುತ್ತ
ಒಡಿಶಾದಲ್ಲಿ ರೈಲ್ವೆ ಅಪಘಾತದಿಂದ ಉಂಟಾದ ದುರಂತದಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಸಂತ್ರಸ್ತರಿಗೆ ನನ್ನ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ. ರಕ್ಷಣಾ ಪ್ರಯತ್ನಗಳು ಸಾಧ್ಯವಾದಷ್ಟು ಬೇಗ ಕಾಣೆಯಾದವರನ್ನು ರಕ್ಷಿಸುತ್ತವೆ ಎಂದು ನಾನು ಭಾವಿಸುತ್ತೇನೆ.-ಹಿರೋಷಿ ಸುಜುಕಿ, ಜಪಾನ್‌ನ ರಾಯಭಾರಿ
ಬಾಲಸೋರ್ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಮತ್ತು ಜನರಿಗೆ ಸಂತಾಪವನ್ನು ವ್ಯಕ್ತಪಡಿಸಿರುವ ಟರ್ಕಿಯು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದಿದೆ.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 − 10 =
Remember me
