ಟೋಕಿಯೋ ಒಲಿಂಪಿಕ್ಸ್ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿರುವ ಭಾರತದ ಜಾವೆಲಿನ್ ಥ್ರೋ ಅಥ್ಲೀಟ್ ನೀರಜ್​​ ಚೋಪ್ರಾ ಅವರಿಗೆ ಬಹುಮಾನಗಳ ಮಹಾಪೂರವೇ ಹರಿದು ಬರುತ್ತಿದೆ.
ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ 87.58 ಮೀಟರ್ ಎಸೆದು ಇತಿಹಾಸ ಸೃಷ್ಟಿಸಿದರು. ಈ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ.
ನಗದು-ಸರ್ಕಾರಿ ಉದ್ಯೋಗ ಘೋಷಿಸಿದ ಹರಿಯಾಣ ಸಿಎಂ:
ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಒಲಿಂಪಿಕ್ಸ್​ ಚಿನ್ನದ ಪದಕ ಗೆದ್ದ 23 ವರ್ಷದ ನೀರಜ್ ಚೋಪ್ರಾ ಅವರಿಗೆ ಮೊದಲು ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ 6 ಕೋಟಿ ರೂ. ನಗದು ಬಹುಮಾನ ಘೋಷಿಸಿದ್ದಾರೆ. ಜೊತೆಗೆ ಕ್ಲಾಸ್-1 ಸರ್ಕಾರಿ ಉದ್ಯೋಗ ನೀಡುವುದಾಗಿ ಹೇಳಿದ್ದಾರೆ.
ಬಂಪರ್ ಕೊಡುಗೆ ನೀಡಿದ ಬಿಸಿಸಿಐ:
ಚಿನ್ನದ ಪದಕ ಗೆದ್ದ ನೀರಜ್​ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಕೋಟಿ ರೂ. ಬಹುಮಾನ ಘೋಷಿಸಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
2 ಕೋಟಿ ಬಹುಮಾನ ಘೋಷಿಸಿದ ಪಂಜಾಬ್ ಸಿಎಂ:
ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್‌ 2 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ. ಚೋಪ್ರಾ ಕುಟುಂಬವು ಪಂಜಾಬ್ ಮೂಲದ್ದಾಗಿದ್ದು, ಇದು ಪಂಜಾಬ್‌ ರಾಜ್ಯಕ್ಕೆ ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ.
ಸಿಎಸ್​​ಕೆಯಿಂದಲೂ ಬಹುಮಾನ:
ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್‌ ಲೀಗ್‌ನ ತಂಡ ಚೆನ್ನೈ ಸೂಪರ್‌ ಕಿಂಗ್ಸ್‌ ಫ್ರಾಂಚೈಸಿಯೂ 1 ಕೋಟಿ ರೂ. ಬಹುಮಾನ ನೀಡುವುದಾಗಿ ತಿಳಿಸಿದೆ.
ಉಚಿತ ಸೇವೆ ನೀಡಿದ ಇಂಡಿಗೋ:
ವಿಮಾನಯಾನ ಸಂಸ್ಥೆ ಇಂಡಿಗೋ ಭಾರತದ ಯಾವುದೇ ಸ್ಥಳಕ್ಕೆ ಪ್ರಯಾಣಿಸಲು ನೀರಜ್​ಗೆ ಒಂದು ವರ್ಷಗಳ ಕಾಲ ಉಚಿತ ಸೇವೆ ನೀಡುವುದಾಗಿ ತಿಳಿಸಿದೆ.
ಐಶಾರಾಮಿ ಕಾರು ನೀಡಿದ ಮಹಿಂದ್ರಾ:
ಭಾರತದ ಕಾರು ತಯಾರಿಕಾ ಮಹಿಂದ್ರಾ ಸಂಸ್ಥೆಯ ಮುಖ್ಯಸ್ಥರಾದ ಆನಂದ್‌ ಮಹಿಂದ್ರಾ ಅವರು ನೂತನ ಎಕ್ಸ್‌ಯುವಿ 700 ಐಶಾರಾಮಿ ಕಾರನ್ನು ನೀರಜ್‌ಗೆ ಉಡುಗೊರೆಯಾಗಿ ನೀಡುವುದಾಗಿ ಘೋಷಿಸಿದ್ದಾರೆ.
ಕೋಟಿ ನೀಡಿದ ಒಡಿಶಾ ಮತ್ತು ಮಣಿಪುರ:
ನೀರಜ್​ ಮಾಡಿದ ಐತಿಹಾಸಿಕ ಸಾಧನೆಗೆ ಒಡಿಶಾ ಸರಕಾರ 1 ಕೋಟಿ ರೂ. ಮಣಿಪುರ ಸರಕಾರ ಕೂಡ 1 ಕೋಟಿ ರೂ. ಘೋಷಿಸಿದೆ. ಈ ಮೂಲಕ ಚಿಕ್ಕ ರಾಜ್ಯಗಳಾದರೂ ಬಹುಮಾನ ಘೋಷಿಸುವ ಮೂಲಕ ಕ್ರೀಡಾಸ್ಫೂರ್ತಿ ಮೆರೆದಿದ್ದಾರೆ.
ಲೈಫ್​​ ಟೈಮ್​ ಉಚಿತ ಸೇವೆ ನೀಡಿದ ಕೆಎಸ್​​ಆರ್​ಟಿಸಿ:
ಚಿನ್ನದ ಪದಕ ಮುಡಿಗೇರಿಸಿಕೊಂಡ ನೀರಜ್​ ಜೀವಿತಾವಧಿವರೆಗೆ ದೇಶದ ಯಾವುದೇ ಸ್ಥಳದಿಂದ ನಿಗಮದ ಎಲ್ಲಾ ಬಸ್​​ನಿಂದಲೂ ಉಚಿತವಾಗಿ ಪ್ರಯಾಣಿಸಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೇಳಿದೆ.ಈ ನಡುವೆ ರಿಯಾಲಿಟಿ ಸಂಸ್ಥೆ ಎಲಾನ್‌ ಗ್ರೂಪ್‌ನ ಮುಖ್ಯಸ್ಥ ರಾಕೇಶ್‌ ಕಪೂರ್‌ ಕೂಡ 25 ಲಕ್ಷ ರೂ.ಗಳ ಬಹುಮಾನ ನೀಡಲು ಮುಂದಾಗಿದ್ದಾರೆ.
ಒಟ್ಟರೆ ವಿವಿಧ ಮೂಲಗಳಿಂದ ನೀರಜ್‌ಗೆ ಈವರೆಗೆ ಒಟ್ಟು 12 ಕೋಟಿ 25 ಲಕ್ಷ ರೂ. ಬಹುಮಾನ ಮೊತ್ತ ಹರಿದು ಬಂದಿದೆ.
ಒಲಿಂಪಿಕ್ಸ್​: ಚಿನ್ನದ ಹುಡುಗ ನೀರಜ್​ ಚೋಪ್ರಾಗೆ ಅಭಿನಂದನೆಗಳ ಸುರಿಮಳೆ: 6 ಕೋಟಿ ರೂ. ಬಹುಮಾನ ಘೋಷಿಸಿದ ಹರಿಯಾಣ

ಒಲಿಂಪಿಕ್ಸ್​ನಲ್ಲಿ ಭಾರತದ ಐತಿಹಾಸಿಕ ಸಾಧನೆ: ಚಿನ್ನಕ್ಕೆ ಮುತ್ತಿಟ್ಟ ನೀರಜ್ ಚೋಪ್ರ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + nineteen =
Remember me
