ನವದೆಹಲಿ:ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ದೇಶದ ಸಚಿವರು ಮಾಡಿದ ಅವಹೇಳನಕಾರಿ ಹೇಳಿಕೆಗಳನ್ನು ಮಾಲ್ಡೀವ್ಸ್ ಸರ್ಕಾರ ತಿರಸ್ಕರಿಸಿದ್ದು, ಇದು ಮಾಲ್ಡೀವ್ಸ್ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿನಿಧಿಸುವುದಿಲ್ಲ ಎಂದು ಭಾನುವಾರ ಸ್ಪಷ್ಟನೆ ನೀಡಿದೆ.
“ವಿದೇಶಿ ನಾಯಕರು ಮತ್ತು ಉನ್ನತ ಶ್ರೇಣಿಯ ವ್ಯಕ್ತಿಗಳ ವಿರುದ್ಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅವಹೇಳನಕಾರಿ ಹೇಳಿಕೆಗಳ ನೀಡಿರುವ ಬಗ್ಗೆ ಮಾಲ್ಡೀವ್ಸ್ ಸರ್ಕಾರಕ್ಕೆ ತಿಳಿದಿದೆ. ಈ ಅಭಿಪ್ರಾಯಗಳು ವೈಯಕ್ತಿಕವಾಗಿದ್ದು, ಮಾಲ್ಡೀವ್ಸ್ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿನಿಧಿಸುವುದಿಲ್ಲ” ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
“ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರಜಾಸತ್ತಾತ್ಮಕ ಮತ್ತು ಜವಾಬ್ದಾರಿಯುತ ರೀತಿಯಲ್ಲಿ ಮತ್ತು ದ್ವೇಷ, ನಕಾರಾತ್ಮಕತೆಯನ್ನು ಹರಡದ ರೀತಿಯಲ್ಲಿ ಮತ್ತು ಮಾಲ್ಡೀವ್ಸ್ ಮತ್ತು ಅದರ ಅಂತಾರಾಷ್ಟ್ರೀಯ ಪಾಲುದಾರರ ನಡುವಿನ ನಿಕಟ ಸಂಬಂಧಗಳಿಗೆ ಅಡ್ಡಿಯಾಗದ ರೀತಿಯಲ್ಲಿ ಚಲಾಯಿಸಬೇಕು ಎಂದು ಸರ್ಕಾರ ನಂಬುತ್ತದೆ. ಮೇಲಾಗಿ, ಸರ್ಕಾರದ ಸಂಬಂಧಿತ ಅಧಿಕಾರಿಗಳು ಇಂತಹ ಅವಹೇಳನಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ,” ಎಂದು ಅದು ಹೇಳಿದೆ.
ಏತನ್ಮಧ್ಯೆ, ದ್ವೀಪ ರಾಷ್ಟ್ರದ ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಭಾರತ ಸರ್ಕಾರ ಮಾಲ್ಡೀವ್ಸ್‌ನೊಂದಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಭಾರತೀಯ ಹೈಕಮಿಷನರ್ ಅವರು ಮಾಲ್ಡೀವ್ಸ್​ ರಾಜಧಾನಿ ಮಾಲೆಯಲ್ಲಿ ಮೊಹಮ್ಮದ್ ಮುಯಿಝು ನೇತೃತ್ವದ ಸರ್ಕಾರದ ಮುಂದೆ ಈ ವಿಷಯವನ್ನು ತೆಗೆದುಕೊಂಡು ಹೋಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಲಕ್ಷದ್ವೀಪ ಭೇಟಿಯನ್ನು ಸಚಿವೆ ಮರಿಯಮ್ ಶಿಯುನಾ ಸೇರಿದಂತೆ ಕೆಲವು ಮಾಲ್ಡೀವ್ಸ್ ರಾಜಕಾರಣಿಗಳು ಲೇವಡಿ ಮಾಡಿದ ನಂತರ ವಿವಾದ ಸೃಷ್ಟಿಯಾಗಿದೆ.
ಮಾಲ್ಡೀವ್ಸ್‌ನ ಯುವ ಸಬಲೀಕರಣದ ಉಪ ಸಚಿವರಾದ ಶಿಯುನಾ ಅವರು ಈಗ ಎಕ್ಸ್ ಸೋಷಿಯಲ್​ ಮೀಡಿಯಾ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಅವರನ್ನು ‘ವಿದೂಷಕ’ ಮತ್ತು ‘ಇಸ್ರೇಲ್‌ನ ಕೈಗೊಂಬೆ’ ಎಂದು ಟೀಕಿಸಿದ್ದಾರೆ. ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಪೋಸ್ಟ್​ ಅಳಿಸಿ ಹಾಕಲಾಗಿದೆ.
ಮತ್ತೊಬ್ಬ ಮಾಲ್ಡೀವ್ಸ್ ನಾಯಕ ಮತ್ತು ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ ಸೆನೆಟ್ ಸದಸ್ಯ ಜಾಹಿದ್ ರಮೀಜ್ ಅವರು ಲಕ್ಷದ್ವೀಪ ದ್ವೀಪದ ಕಡಲತೀರಗಳನ್ನು ಅಪಹಾಸ್ಯ ಮಾಡುವ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಮಾಲ್ಡೀವ್ಸ್ ಒದಗಿಸುವ ಸೇವೆಗಳಿಗೆ ಲಕ್ಷದ್ವೀಪವನ್ನು ಹೋಲಿಸಬಹುದೇ ಎಂಬ ಅನುಮಾನವನ್ನು ವ್ಯಕ್ತಪಡಿಸುವ ಅವಹೇಳನಕಾರಿ ಅಭಿಪ್ರಾಯಗಳನ್ನು ರಮೀಜ್​ ವ್ಯಕ್ತಪಡಿಸಿದ್ದಾರೆ.
“ನಡೆ ಅದ್ಭುತವಾಗಿದೆ. ಆದಾರೂ, ನಮ್ಮೊಂದಿಗೆ ಸ್ಪರ್ಧಿಸುವ ಕಲ್ಪನೆಯು ಭ್ರಮೆಯಾಗಿದೆ. ನಾವು ನೀಡುವ ಸೇವೆಯನ್ನು ಅವರು ಹೇಗೆ ಒದಗಿಸುತ್ತಾರೆ? ಅವರು ಹೇಗೆ ಸ್ವಚ್ಛವಾಗಿರುತ್ತಾರೆ? ಕೊಠಡಿಗಳಲ್ಲಿನ ಶಾಶ್ವತ ವಾಸನೆಯು ದೊಡ್ಡ ಹಿನ್ನಡೆಯಾಗಿದೆ” ರಮೀಜ್ ಎಕ್ಸ್​ನಲ್ಲಿ ಬರೆದಿದ್ದಾರೆ. .ಈ ಅಭಿಪ್ರಾಯಕ್ಕೆ ವಿರೋಧ ವ್ಯಕ್ತಪಡಿಸಿ ಮಾಲ್ಡೀವ್ಸ್‌ನಲ್ಲಿನ 8,000 ಕ್ಕೂ ಹೆಚ್ಚು ಹೋಟೆಲ್ ಬುಕಿಂಗ್‌ಗಳು ಮತ್ತು 2,500 ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಲಾಗಿದೆ ಎಂದು ಹಲವಾರು ಮಂದಿ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಆಕ್ರೋಶವನ್ನು ತೋಡಿಕೊಂಡಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 + 19 =
Remember me
