ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಇದನ್ನೂ ಓದಿ:ತಂದೆ-ತಾಯಿಯಿಂದ ದೂರ ಮಾಡಿದ್ದಕ್ಕೆ ಪತ್ನಿಯನ್ನೇ ಕೊಲೆ ಮಾಡಿಸಲು ಮುಂದಾದ ಪತಿ: ಆರು ತಿಂಗಳ ಬಳಿಕ ಆಗಿದ್ದೇನು?
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಮಾವಿನ ಹಣ್ಣುಗಳನ್ನು ನೋಡಬಹುದು. ಅವುಗಳ ನಡುವೆ ಒಂದು ಗಿಣಿ ಇದೆ. ಅದು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಸುಲಭವಲ್ಲ. ಮಾವಿನ ಹಣ್ಣುಗಳ ಬಣ್ಣದಲ್ಲಿ ಗಿಣಿಯ ಬಣ್ಣವು ಬೆರೆತು ಹೋಗಿರುವುದರಿಂದ ಅಷ್ಟು ಸುಲಭವಾಗಿ ಗಿಣಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಗಿಣಿ ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿರುವ ಗಿಣಿಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
ಇದನ್ನೂ ಓದಿ:ಅಪಾಯಕಾರಿ ಆಹಾರ ಸಂಯೋಜನೆಗಳು: ಈ ಆಹಾರಗಳನ್ನು ಒಟ್ಟಿಗೆ ಸೇವಿಸುತ್ತಿದ್ರೆ ಇಂದಿನಿಂದಲೇ ತಪ್ಪಿಸಿ…
10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಗಿಣಿಯನ್ನು ಪತ್ತೆಹಚ್ಚಿದ್ದರೆ, ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಗಿಣಿಯನ್ನು ಗುರುತಿಸಲು ಸಾಧ್ಯವಾಗದೇ, ಗಿಣಿ ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

ಸಂಬಳ ಸಾಕಾಗುತ್ತಿಲ್ಲವೆಂದು ಗಂಡ ಸಾವನ್ನಪ್ಪಿದ ವರ್ಷದ ಬೆನ್ನಲ್ಲೇ ಪತ್ನಿಯೂ ಅದೇ ಕಾರಣಕ್ಕೆ ಸಾವು

ಸೊಂಟದ ಭಾಗವನ್ನು ಎಡಿಟ್ ಮಾಡಿ ಫೋಟೊ ಪೋಸ್ಟ್ ಮಾಡಿದ ನಟಿ; ಕುದುರೆ ಕಾಲು ಎಂದು ಕಾಲೆಳೆದ ನೆಟ್ಟಿಗರು!

ನಾಳೆ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ; ಈ ಸಂಭ್ರಮದಲ್ಲಿ ಇದೇ ಮೊದಲ ಸಲ ಸಿಎಂ ಉಪಸ್ಥಿತಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 + 6 =
Remember me
